ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಒಂದೆಡೆ ತನ್ನ ರೌದ್ರನರ್ತನ ತೋರುತ್ತಿದ್ದರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಲಸಿಕೆ ವಿತರಣೆಯಲ್ಲಿಯೂ ಗೋಲ್ ಮಾಲ್ ನಡೆಯುತ್ತಿದೆ. ಬೆಂಗಳೂರಲ್ಲಿ ಬಿಜೆಪಿ ನಾಯಕರ ಆಪ್ತರಿಗೆ ಸುಲಭದಲ್ಲಿ ಲಸಿಕೆ ಸಿಗುತ್ತಿದೆ. ಮುಂಚೂಣಿ ಕಾರ್ಯಕರ್ತರಿಗೆ ಸರ್ಕಾರ ಉಚಿತ ಲಸಿಕೆ ಘೋಷಿಸಿದೆ. ಈ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಮೂಲಕ ಲಸಿಕೆ ವಿತರಣೆಯಲ್ಲೂ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಲಸಿಕೆ ರಾಜಕಾರಣ ಬಯಲಾಗಿದೆ. …
Read More »ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ ಆಸ್ಪತ್ರೆಯ ಮಹಿಳಾ ಸಿಬ್ಬಂದಿ
ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ್ದ ಆಸ್ಪತ್ರೆಯ ತಾತ್ಕಾಲಿಕ ಡಿ ಗ್ರೂಪ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 17 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಡಿಕೇರಿ ತಾಲೂಕಿನ ಜೋಡುಪಾಲ ನಿವಾಸಿ ದಿಲ್ಶಾದ್(45) ಬಂಧಿತ ಆರೋಪಿಯಾಗಿದ್ದಾಳೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದ ರಜನಿಕಾಂತ್ …
Read More »ಕರೆನ್ಸಿ ಮೌಲ್ಯ, ಪ್ರಮಾಣ ಹೆಚ್ಚಳ
ಹೊಸದಿಲ್ಲಿ: ದೇಶದಲ್ಲಿ ಕರೆನ್ಸಿಯ ಮೌಲ್ಯ ಮತ್ತು ಪ್ರಮಾಣ 2020-21ನೇ ಸಾಲಿನಲ್ಲಿ ಕ್ರಮವಾಗಿ ಶೇ.16.8 ಹಾಗೂ ಶೇ.7.2ಕ್ಕೆ ಏರಿಕೆಯಾಗಿದೆ. 500 ರೂ., 2 ಸಾವಿರ ರೂ. ನೋಟುಗಳ ಮೌಲ್ಯ ಜತೆ ಸೇರಿ ಶೇ.85.7 ಆಗಿದೆ. 2020ರ ಮಾ.31ರಂದು ಅದರ ಪ್ರಮಾಣ ಶೇ.83.4ರಷ್ಟು ಆಗಿತ್ತು. ಗುರುವಾರ ಬಿಡುಗಡೆಯಾಗಿರುವ ಆರ್ಬಿಐ ವಾರ್ಷಿಕ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಬ್ಯಾಂಕ್ ನೋಟ್ಗಳು ಹೆಚ್ಚಿನ ಪ್ರಮಾಣದಲ್ಲಿ ಚಲಾವಣೆಯಲ್ಲಿವೆ. ಎಲ್ಲಾ ರೀತಿಯ ಮೌಲ್ಯಗಳ ಬ್ಯಾಂಕ್ ನೋಟುಗಳು …
Read More »ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ B.S.Y.
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಷಯದಲ್ಲಿ ಮೌನ ಕಾಪಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಈಗ ಮೌನ ಮುರಿದು ಕೊನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ವಿಧಾನ ಸೌಧದಲ್ಲಿ ಮಾತನಾಡಿದ ಅವರು, “ಪ್ರಸ್ತುತ, ನನ್ನ ಆದ್ಯತೆಗಳು COVID-19 ಸೋಂಕುಗಳ ನಿಯಂತ್ರಣದಲ್ಲಿದೆ. ಜನರ ಕಲ್ಯಾಣಕ್ಕೆ ಒತ್ತು ನೀಡುವುದು ನನ್ನ ಆದ್ಯತೆ. ಬೇರೆ ಯಾವುದೇ ಸಮಸ್ಯೆಗಳು ನನ್ನ ಮುಂದೆ ಇಲ್ಲ “ಎಂದು ಅವರು ಪ್ರತಿಕ್ರಿಯಿಸಿದರು. “ಯಾರು ದೆಹಲಿಗೆ ಹೋಗಿ ಹಿಂದಿರುಗಿದರೂ ಅವರು ತಮ್ಮ ಉತ್ತರಗಳನ್ನು ಪಡೆದಿದ್ದಾರೆ. COVID …
Read More »ದೇಶದ ಸ್ಥಳೀಯ ಕಾನೂನಿಗೆ ಗೂಗಲ್ ಬದ್ಧವಾಗಿರುತ್ತದೆ: ಸುಂದರ್ ಪಿಚೈ
ನವದೆಹಲಿ : ಪ್ರತಿಯೊಂದು ದೇಶದಲ್ಲೂ ಅದರದ್ದೇ ಆದಂತಹ ಕಾನೂನು ಇರುತ್ತದೆ. ಆದೇಶದ ಸ್ಥಳೀಯ ಕಾನೂನು ಪಾಲನೆ ಮಾಡಲು ನಾವು ಬದ್ಧರಾಗಿರುತ್ತೇವೆ ಎಂದು ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ ಹೇಳಿದ್ದಾರೆ. ಏಷ್ಯಾ ಪೆಸಿಫಿಕ್ನ ಆಯ್ದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಜತೆ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತೇವೆ. ಉಚಿತ ಮತ್ತು ಮುಕ್ತ ಇಂಟರ್ನೆಟ್ ಮೌಲ್ಯವನ್ನು ನಾವು ತಿಳಿದಿದ್ದೇವೆ . ಇದರ ಪ್ರಯೋಜನಗಳ ಅರಿವೂ ನಮಗಿದೆ ಎಂದು ತಿಳಿಸಿದರು. ಸರ್ಕಾರಗಳು ಪರಿಶೀಲನೆ ವ್ಯವಸ್ಥೆ ಮತ್ತು …
Read More »ಅನಾರೋಗ್ಯಕ್ಕೀಡಾದ ಆರೋಗ್ಯ ಸಚಿವ ಡಾ. ಸುಧಾಕರ್
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಇತ್ತೀಚೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ವಿವಿಧ ಜಿಲ್ಲೆಗಳ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ, ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಆಕ್ಸಿಜನ್ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಸದಾಶಿವ ನಗರದ ನಿವಾಸದಲ್ಲಿ …
Read More »ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್
ನವದೆಹಲಿ: ಅಲೋಪತಿ ಮೂರ್ಖತನದ ಪದ್ಧತಿ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದು, ನನ್ನನ್ನು ಬಂಧಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ವೈದ್ಯಕೀಯ ಸಂಘಕ್ಕೆ ಸಡ್ಡುಹೊಡೆದಿದ್ದಾರೆ. ಅಲೋಪತಿ ಮೂರ್ಖತನದ ವಿಜ್ಞಾನ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ದೇವ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ …
Read More »ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ ಸಿ.ಪಿ. ಯೋಗೇಶ್ವರ್
ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶವಲ್ಲ. ಅಷ್ಟೊಂದು ಶಕ್ತಿಯೂ ನನಗಿಲ್ಲ. ಆದರೆ ನನಗೆ ಸಚಿವ ಸ್ಥಾನ ಸಿಕ್ಕಿರುವುದು ನನ್ನ ಮಗ ಮೂಗು ತೂರಿಸುವುದು ಸರಿಯಲ್ಲ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಯಿಸುವ ಅಭಿಪ್ರಾಯ ನನಗೆ ಇಲ್ಲ. ನನ್ನ ಸಮಸ್ಯೆ ಹೇಳಿಕೊಳ್ಳಲು ದೆಹಲಿಗೆ ಹೋಗಿದ್ದೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ …
Read More »ಕೋವಿಡ್ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು
ಅರಕಲಗೂಡು: ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಮಗೆ ಅಗತ್ಯ …
Read More »ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …
Read More »
Laxmi News 24×7