ಮಂಡ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರಿ, ಅರೆತಿಪ್ಪೂರಿನ ಮನೋಹರಗೌಡರಿಗೆ ಮದುವೆ ಮಾಡಿಕೊಡಲಾಗಿತ್ತು. ಗುಣಶ್ರೀ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ …
Read More »ಪಿಎಂ ಕೇರ್ಸ್ ಗೆ 2.5 ಲಕ್ಷ ದೇಣಿಗೆ ಕೊಟ್ಟವರ ತಾಯಿಗೆ ಆಸ್ಪತ್ರೆಯಲ್ಲಿ ಸಿಗಲಿಲ್ಲ ಹಾಸಿಗೆ..!
ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯ ಸುದ್ದಿಗಳು ತೇಲಿ ಬರುತ್ತಲೇ ಇವೆ. ಒಮ್ಮೆಲೇ ಈ ಜಾಗತಿಕ ಸೋಂಕಿನ ಅಬ್ಬರ ದೇಶದಲ್ಲೆಲ್ಲಾ ವ್ಯಾಪಿಸಿದ ಕಾರಣ ಲಭ್ಯವಿರುವ ವೈದ್ಯಕೀಯ ಸವಲತ್ತುಗಳ ಮೇಲೆ ಮಿತಿಮೀರಿದ ಒತ್ತಡ ಬಿದ್ದು ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದೆ. ಟ್ವಿಟರ್ ಬಳಕೆದಾರ ವಿಜಯ್ ಪರೀಖ್ ಅವರು ಇಂಥದ್ದೇ ಸನ್ನಿವೇಶದಲ್ಲಿ ತಮಗೆ ಉಂಟಾದ ಹೃದಯವಿದ್ರಾವಕ ಅನುಭವದ ಕುರಿತು ಹಂಚಿಕೊಂಡಿದ್ದಾರೆ. ಕೋವಿಡ್ ವಿರುದ್ಧದ ದೇಶದ …
Read More »ಕೋವಿಡ್ ಸೋಂಕು ದೃಢಪಟ್ಟರೂ ಎದೆಗುಂದದೆ ಇತರರಿಗೆ ಮಾದರಿಯಾದ ವಯೋವೃದ್ದೆ
ಕುಷ್ಟಗಿ : ಮುದೇನೂರು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್ ನಲ್ಲಿ85 ವರ್ಷದ ವಯೋವೃದ್ದೆ ಆಸಂಗೆಮ್ಮ ಕೋವಿಡ್ ಸೋಂಕು ದೃಢವಾಗಿದ್ದರೂ ಲವಲವಿಕೆಯಿಂದ ಇದ್ದು ಕೋವಿಡ್ ಸೋಂಕಿಗೆ ಹೆದರದೆ ಇತರರಿಗೆ ಮಾದರಿಯಾಗಿದ್ದಾರೆ. ಮುದೇನೂರು ಕೋವಿಡ್ ಕೇರ್ ಸೆಂಟರ್ ನಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಅಸಂಗೆಮ್ಮ ಹಿರಿಯರು. ಕಿವಿ ಕೇಳಿಸದೇ ಇದ್ದರೂ, ಸೋಂಕಿತರ ಜೊತೆ ಧೈರ್ಯಗೆಡದೇ ಲವಲವಿಕೆಯಿಂದ ಇರುವುದು ಗಮನಾರ್ಹ ಎನಿಸಿದೆ. ಮಂಗಳವಾರ ಸಂಜೆ ಸಿಪಿಐ ನಿಂಗಪ್ಪ …
Read More »ಜನರ ಆರೋಗ್ಯ ಸಂರಕ್ಷಣೆಗಾಗಿ ನೂತನ ಕೋವಿಡ್ ಉಪಚಾರ ಕೇಂದ್ರ ಲೋಕಾರ್ಪಣೆ ಸಚಿವೆ ಶಶಿಕಲಾ ಜೊಲ್ಲೆ.
ಚಿಕ್ಕೋಡಿ – ಮಂಗಳವಾರ ಚಿಕ್ಕೋಡಿ ನಗರದ (ಬಾಣಂತಿಕೋಡಿ) ಬಾಲಕಿಯರ ವಸತಿ ನಿಲಯದಲ್ಲಿ ತಾಲ್ಲೂಕಾಡಳಿತ, ತಾಲ್ಲೂಕಾ ಆರೋಗ್ಯ ಕೇಂದ್ರ ಹಾಗೂ ಜೊಲ್ಲೆ ಚಾರಿಟಿ ಫೌಂಡೇಶನ್ ಮತ್ತು ಭಾರತೀಯ ವೈದ್ಯಕೀಯ ಹಾಗೂ ಆಯುಷ್ ಸಂಸ್ಥೆ ವತಿಯಿಂದ ಸೋಂಕಿತರ ಚಿಕಿತ್ಸೆಗಾಗಿ 12 ಆಕ್ಸಿಜನೇಟೆಡ್ ಹಾಸಿಗೆ ಹಾಗೂ 08 ಸಾಮಾನ್ಯ ಹಾಸಿಗೆ ಸಾಮರ್ಥ್ಯದ ನೂತನ ಕೋವಿಡ್ ಆರೈಕೆ ಕೇಂದ್ರವನ್ನು ಆರಂಭಿಸಲಾಯಿತು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ …
Read More »ಎಸ್ಎಂಎಸ್ನಲ್ಲಿ ಲಸಿಕೆ ಮಾಹಿತಿ!
ಕೋವಿಡ್-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೋವಿಡ್ ಲಸಿಕೆ ಪಡೆಯಲು ಜನರು ಮುಗಿಬೀಳುತ್ತಿದ್ದಾರೆ. ಆದರೆ ಲಸಿಕೆ ಪಡೆಯುವ ಸಮಯ ಲಭ್ಯತೆ ಕಂಡುಕೊಳ್ಳುವ ಬಗ್ಗೆ ಹಲವರಿಗೆ ತಿಳಿವಳಿಕೆ ಇಲ್ಲ. ಇದನ್ನು ನೀಗಿಸಲೆಂದೇ VaccinateMe.in ಆಯಪ್ ಕನ್ನಡ ಸೇರಿದಂತೆ ಭಾರತದ 11 ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಈ ಆಯಪ್ ಬಳಸಿ ಲಸಿಕೆ ಪಡೆಯುವ ಸಮಯ ಕಂಡುಕೊಳ್ಳಬಹುದು. ಒಂದು ವೇಳೆ ಸದ್ಯದ ಮಟ್ಟಿಗೆ ಲಸಿಕೆ ಪಡೆಯುವ ಸಮಯ ಲಭ್ಯವಿಲ್ಲದಿದ್ದಲ್ಲಿ, ಸೈನ್ಅಪ್ ಮಾಡಿಕೊಂಡಲ್ಲಿ …
Read More »ಹಿಡಕಲ್ ಜಲಾಶಯದಿಂದ ಜಿಎಲ್ಬಿಸಿ, ಜಿಆರ್ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …
Read More »ರಾಧೇ ಪೈರಸಿ ಮಾಡಿದ್ರೆ ವಾಟ್ಸಾಪ್ ರದ್ದುಗೊಳಿಸಿ: ದೆಹಲಿ ಹೈ ಕೋರ್ಟ್
ಸಲ್ಮಾನ್ ಖಾನ್ ನಟನೆಯ ರಾಧೇ ಸಿನಿಮಾ ಇತ್ತೀಚಿಗಷ್ಟೆ ತೆರೆಕಂಡಿತ್ತು. ಲಾಕ್ಡೌನ್ ಕಾರಣದಿಂದ ಚಿತ್ರಮಂದಿರಗಳು ತೆರೆದಿಲ್ಲ. ಹಾಗಾಗಿ, ಒಟಿಟಿಯಲ್ಲಿ ರಾಧೇ ಸಿನಿಮಾ ಬಿಡುಗಡೆಯಾಗಿತ್ತು. ರಿಲೀಸ್ ಆದ ದಿನವೇ ರಾಧೇ ಚಿತ್ರಕ್ಕೆ ಪೈರಸಿ ಕಾಟ ಎದುರಾಯಿತು. ರಾಧೇ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು ಒಂದು ಕಡೆಯಾದರೆ, ಸಿನಿಮಾ ಪೈರಸಿಯಾಗಿದ್ದು ಸಹಜವಾಗಿ ತಯಾರಕರಿಗೆ ತಲೆಬಿಸಿ ಹೆಚ್ಚಿಸಿತು. ಹಾಗಾಗಿ, ಪೈರಸಿ ಹರಡಿಸುವವರ ವಿರುದ್ಧ ನಿರ್ಮಾಪಕರು ಹೈ ಕೋರ್ಟ್ ಮೊರೆ ಹೋದರು. ಈ ಅರ್ಜಿ ವಿಚಾರಣೆ ಮಾಡಿದ ದೆಹಲಿ …
Read More »ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ ಕೂಡ ಇತ್ತು. ಇಷ್ಟು ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಉಂಟಾದಾಗ ವಿರಾಟ್ ಕೊಹ್ಲಿ 6.67 ಲಕ್ಷ ರೂಪಾಯಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದರು. …
Read More »ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಇನ್ನೂ ಪೂರ್ಣವಾಗಿಲ್ಲ: ಎಸ್ಪಿ
ವಿಜಯಪುರ: ‘ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಇಬ್ಬರು ಬಾಲಕಿಯರನ್ನು ಅತ್ಯಾಚಾರ ಮಾಡಿ, ಕೊಲೆಗೈದಿರುವ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ’ ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರಾದ ಅಡಿವೆಪ್ಪ ಸಾಲಗಲ್, ಉಮೇಶ ನಡುವಿನಮನಿ, ದೇವೇಂದ್ರ ಹಾದಿಮನಿ, ಗುರುರಾಜ ಗುಡಿಮನಿ, ಸಂಜು ಕಂಬಾಗಿ ಮತ್ತಿತರರು ಆರೋಪಿಸಿದ್ದಾರೆ. ಈ ಸಂಬಂಧ ‘ಪ್ರಜಾವಾಣಿ’ಗೆ ಸೋಮವಾರ ಕರೆ ಮಾಡಿ ಮಾತನಾಡಿದ ಸಂಘಟನೆಗಳ ಮುಖಂಡರು, ‘ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸುವ ಹುನ್ನಾರ ನಡೆದಿದೆ. ಇದು ಸಂಪೂರ್ಣ …
Read More »ಸ್ಥಳೀಯ ಸಂಸ್ಥೆಗಳಿಗೆ SDA, ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇರ ನೇಮಕಾತಿ
ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳ ನೇಮಕಾತಿ ವಿಧಾನ ಬದಲಿಸಿದೆ. ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ನಿಯಮ ಜಾರಿಯಾಗಲಿದ್ದು, ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಪರೀಕ್ಷೆ ಇರುವುದಿಲ್ಲ. ನೇರ ನೇಮಕಾತಿ ಮೂಲಕ ಆಯ್ಲೆ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ಸಮಿತಿ ಆಯ್ಕೆ ತೀರ್ಮಾನ ಕೈಗೊಳ್ಳಲಿದೆ. ಲೋಕಸೇವಾ ಆಯೋಗದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಅಂಕಗಳ ಆಧಾರದ ಮೇಲೆ …
Read More »
Laxmi News 24×7