ಮುಂಬೈ: ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಕೊರೊನಾ ಹಾವಳಿಯ ನಡುವೆಯೂ ಅಭಿಮಾನಿಗಳನ್ನು ರಂಜಿಸಲು ಸಲ್ಲು ರಾಧೆ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಸಲ್ಮಾನ್ ಸಿನಿಮಾ ಅಂದ್ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ರಾಧೆ ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರಂತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಮೊದಲ ದಿನ ಮಿಶ್ರ …
Read More »ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾ
ನ್ಯೂಯಾರ್ಕ್ – ಕೊರೋನಾ ಸಂಬಂಧಿತ ಲಸಿಕೆ ಪಡೆದಲ್ಲಿ ಮಾಸ್ಕ್ ಹಾಕುವುದು ಅಗತ್ಯವಿಲ್ಲ ಎಂದು ಅಮೇರಿಕಾದ ರೋಗ ನಿಯಂತ್ರಣ ಮಂಡಳಿ ತಿಳಿಸಿದೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡವರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅಗತ್ಯವಿಲ್ಲ ಎಂದು ಮಂಡಳಿ ತಿಳಿಸಿದೆ. ಅಮೇರಿಕಾ ಅಧ್ಯಕ್ಷ ಜೊ ಬೈಡನ್ ಕೂಡಾ ಈ ಹೇಳಿಕೆಯನ್ನು ಶೇರ್ ಮಾಡಿದ್ದಾರೆ. ಇದರಿಂದಾಗಿ ಅಮೇರಿಕಾದಲ್ಲಿ ಲಸಿಕೆ ಪಡೆಯಲು ಇನ್ನಷ್ಟು ಜನರು ಮುಂದೆ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಆದರೆ ಭಾರತದಲ್ಲಿ …
Read More »ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು
ಪಣಜಿ: ಗೋವಾದಲ್ಲಿ ಕೋವಿಡ್ ರಣಕೇಕೆ ಹಾಕುತ್ತಿದೆ. ಕಳೆದ 2 ದಿನಗಳ ಹಿಂದೆ ಆಕ್ಸಿಜನ್ ಕೊತೆಯಿಂದ ಬರೋಬ್ಬರಿ 26 ಮಂದಿ ಸಾವನ್ನಪ್ಪಿದ್ದರು. ಇದರ ನೆನಪು ಮಾಸುವ ಮುನ್ನವೇ ಗೋವಾ ಖಾಸಗಿ ಆಸ್ಪತ್ರೆಯಲ್ಲಿ ಮತ್ತೆ 15 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 15 ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 2 ದಿನಗಳ ಹಿಂದೆ ಇದೇ ಗೋವಾ ವೈದ್ಯಕೀಯ ಕಾಲೇಜ್ನಲ್ಲಿ 26 ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. …
Read More »ಲಸಿಕೆ ಸ್ಲಾಟ್ ಪಡೆಯಲು ಅಲರ್ಟ್ ಮೆಸೇಜ್ ಪಡೆಯಿರಿ
ಹೊಸದಿಲ್ಲಿ: ದೇಶದಲ್ಲಿ ಲಸಿಕೆಗಾಗಿ ಕೋವಿನ್ ಪೋರ್ಟಲ್ನಲ್ಲಿ ನೋಂದಣಿಗೆ ಇಂಟರ್ನೆಟ್ ಲಭ್ಯವಿಲ್ಲದ ಸ್ಥಳದಲ್ಲಿ ಅಡಚಣೆ ಉಂಟಾಗುತ್ತಿದೆ. ಅದಕ್ಕಾಗಿ ಚೆನ್ನೈಯಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ವೃತ್ತಿಯಲ್ಲಿರುವ ಬ್ರೆಟಿ ಥಾಮಸ್ (35) ಎಂಬುವರು ಲಸಿಕೆ ಹಾಕಿಸಲು ಸ್ಲಾಟ್ಗಳು ಯಾವಾಗ ಲಭ್ಯವಾಗುತ್ತವೆ ಎಂಬ ಬಗ್ಗೆ ಹೊಸ ತಂತ್ರಾಂಶ ಕಂಡುಹಿಡಿದಿದ್ದಾರೆ. ಅದಕ್ಕೆ ಟೆಲಿಗ್ರಾಂ ಮೂಲಕ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಸುಮಾರು 4 ಲಕ್ಷ ಮಂದಿ ಸದಸ್ಯರು ಈಗ ಇದ್ದಾರೆ. “ಹೆಚ್ಚಿನ ನಗರ ಮತ್ತು ಪಟ್ಟಣಗಳನ್ನು ಕೇಂದ್ರೀಕರಿಸಿ …
Read More »ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್
ನವದೆಹಲಿ, ಮೇ 13; ಮೇ ಅಂತ್ಯದ ವೇಳೆಗೆ ನಾವು ಬೇಡಿಕೆ ಇಟ್ಟಿರುವ ಕೋವಿಡ್ ಲಸಿಕೆ ಉತ್ಪಾದಕರಿಂದ ರಾಜ್ಯಕ್ಕೆ ತಲುಪಬಹುದು ಎಂದು 9 ರಾಜ್ಯಗಳು ಸುಪ್ರೀಂಕೋರ್ಟ್ಗೆ ಹೇಳಿಕೆ ನೀಡಿವೆ. ಸುಪ್ರೀಂಕೋರ್ಟ್ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಲಸಿಕೆ ಬರುವ ತನಕ 18-44 ವರ್ಷದವಿಗೆ ಲಸಿಕೆ ನೀಡುವುದು ಕಷ್ಟಸಾಧ್ಯವಾಗಲಿದೆ ಎಂದು ರಾಜ್ಯಗಳು ಹೇಳಿವೆ. ಪಂಜಾಬ್, ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, …
Read More »ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಬೆಂಗಳೂರು, ಮೇ 13; ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ಅವರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಗೆ ಈ ಕುರಿತು ಮನವಿ ಮಾಡಿದ್ದಾರೆ. ಮೇ 15ರಂದು ಡಿ. ಕೆ. ಶಿವಕುಮಾರ್ 59ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದರೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. …
Read More »ಟ್ರಾಯ್: 4ಜಿ ಡೌನ್ಲೋಡ್ ಸ್ಪೀಡ್ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ
ನವದೆಹಲಿ, ಮೇ 13: ರಿಲಯನ್ಸ್ ಜಿಯೋ, ಪ್ರತಿ ಸೆಕೆಂಡ್ಗೆ 20.1 ಮೆಗಾಬೈಟ್ ಡೇಟಾ ಡೌನ್ಲೋಡ್ ಪ್ರಮಾಣದಲ್ಲಿ 4ಜಿ ಸ್ಪೀಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳ ಅಪ್ಲೋಡ್ ವೇಗದ ವಿಭಾಗದಲ್ಲಿ ವೊಡಾಫೋನ್ 6.7 Mbpsನೊಂದಿಗೆ ಇತರೆ ಕಂಪೆನಿಗಳಿಗಿಂತ ಮುಂಚೂಣಿಯಲ್ಲಿದೆ ಎಂದು ದೂರಸಂಪರ್ಕ ನಿಯಂತ್ರಕ ಸಂಸ್ಥೆ ಟ್ರಾಯ್ನ ಇತ್ತೀಚಿನ ಮಾಹಿತಿ ತಿಳಿಸಿದೆ. ತನ್ನ ಅತ್ಯಂತ ನಿಕಟ ಸ್ಪರ್ಧಿ ವೊಡಾಫೋನ್ಗಿಂತಲೂ ಮೂರು ಪಟ್ಟು ಅಧಿಕ ಡೌಲ್ಲೋಡ್ ವೇಗವನ್ನು ರಿಲಯನ್ಸ್ ಜಿಯೋ ಹೊಂದಿದೆ. …
Read More »ಬಂಗಾಳ: 11 ದಿನದಲ್ಲೇ ಶಾಸಕತ್ವ ತ್ಯಜಿಸಿದ ಬಿಜೆಪಿ ಸಂಸದರು!
ಕೊಲ್ಕತ್ತಾ: ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯಬಲ 77ರಿಂದ 75ಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಬಿಜೆಪಿಯ ಇಬ್ಬರು ಸಂಸದರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಆದೇಶದಂತೆ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಬಿಜೆಪಿಯ ಕ್ರಮವನ್ನು ಲೋಕಸಭೆಯಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವ ಕ್ರಮ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಎಲ್ಲ ಬಿಜೆಪಿ ಶಾಸಕರಿಗೆ ಕೇಂದ್ರೀಯ ಭದ್ರತೆ ನೀಡಿರುವ ಕೇಂದ್ರ …
Read More »ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ; ಐವರ ಬಂಧನ
ಮೈಸೂರು, : ರಾಜ್ಯದಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಕೊರತೆ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಎರಡು ಜಾಲಗಳನ್ನು ಪತ್ತೆ ಮಾಡಿರುವ ಮೈಸೂರು ಸಿಸಿಬಿ ಪೊಲೀಸರು, ಐವರನ್ನು ಬಂಧಿಸಿದ್ದಾರೆ.ಮೈಸೂರಿನ ಜೆಪಿ ನಗರದ ಕಾಮಾಕ್ಷಿ ಆಸ್ಪತ್ರೆಯ ಸ್ಟಾಫ್ ನರ್ಸ್ ಜಿ.ಸುರೇಶ್ (27), ಕೆ.ಆರ್ ಆಸ್ಪತ್ರೆ ಇನ್ಸ್ಟಿಟ್ಯೂಟ್ ಆಫ್ ನೆಪ್ರೋ ನ್ಯೂರೋ ಸ್ಟಾಫ್ ನರ್ಸ್ ಡಿ.ಎಂ ರಾಘವೇಂದ್ರ(27), ಕೆ.ಆರ್ ಆಸ್ಪತ್ರೆ ಸ್ಟಾಫ್ ನರ್ಸ್ ಅಶೋಕ (31), ವಿಶ್ವೇಶ್ವರ ನಗರದ ಗಿರೀಶ್ ಚಂದ್ರ …
Read More »2 ರಿಂದ 18 ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸೀನ್ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ
ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗುರುವಾರ (ಮೇ 13) 2 ರಿಂದ 18 ವರ್ಷದ ಮಕ್ಕಳ ಮೇಲೆ ಭಾರತ್ ಬಯೋಟೆಕ್ನ ಕೊವ್ಯಾಕ್ಸೀನ್ ಪ್ರಯೋಗ ನಡೆಸಲು ಅನುಮತಿ ನೀಡಿದೆ. ಭಾರತ್ ಬಯೋಟೆಕ್ ತನ್ನ ದ್ವಿತೀಯ ಹಾಗೂ ತೃತೀಯ ಹಂತದ ಪ್ರಯೋಗಗಳನ್ನು “525 ಆರೋಗ್ಯವಂತ ಸ್ವಯಂಸೇವಕರ” ಮೇಲೆ ನಡೆಸಲಾಗುವುದು ಎಂದು ಹೇಳಿದೆ. ಪ್ರಯೋಗವು ಒಂದನೇ ದಿನ ಹಾಗೂ 28ನೇ ದಿನದಂದು ನೀಡಲಾಗುವ ಲಸಿಕೆಗಳ ಎರಡು ಡೋಸ್ ಗಳನ್ನು ಒಳಗೊಂಡಿರುತ್ತದೆ. …
Read More »
Laxmi News 24×7