ಧಾರವಾಡ: ತುಂಬಿ ತುಳುಕುತ್ತಿರುವ ಬಟ್ಟೆ ಅಂಗಡಿ, ಕೊಂಡ ಸಾಮಗ್ರಿಗಳನ್ನು ಕಟ್ಟಿಡಲುಆಗದ ಭಾಂಡೆ ಅಂಗಡಿ, ಒಂಟಿ ಕಾಲಿನಲ್ಲಿ ನಿಂತುಬಂಗಾರ ಕೊಳ್ಳುತ್ತಿರುವವರಿಗೆ ಕುಳಿತುಕೊಳ್ಳಿಎಂದು ಹೇಳಲಾರದ ಸ್ಥಿತಿಯಲ್ಲಿರುವಅಕ್ಕಸಾಲಿಗರು, ಇನ್ನು ಹೋಟೆಲ್ಗಳಲ್ಲಿ ಸರತಿ ಸಾಲು. ಕೋವಿಡ್ ಮಹಾಮಾರಿಗೆ ಹೆದರಿ ಎಲ್ಲರೂ ಬಿಲ ಸೇರುತ್ತಾರೆ ಎಂದುಕೊಂಡರೆ ಜಿಲ್ಲೆಯಲ್ಲಿ ಮಾತ್ರ ಕೋವಿಡ್ ಜನರು ಕ್ಯಾರೇ ಎನ್ನದೆ ಎಲ್ಲರೂ ಮದುವೆ ಸಂಭ್ರಮದಲ್ಲಿ ಮುಳುಗಿಹೋಗಿದ್ದು, ಜವಳಿ ಸಾಲಿನಲ್ಲಿ ಝಳ ಝಳಝಳಪಿಸುವ ಬಟ್ಟೆ ಹಾಕಿಕೊಂಡು ಆರಾಮಾಗಿ ಓಡಾಡುತ್ತಿದ್ದಾರೆ. ಹೌದು…, ಕಳೆದ ವರ್ಷವೂ ಮಕ್ಕಳು, …
Read More »ಕೋವಿಡ್ ಆರ್ಭಟ : ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಸಿದ್ದರಾಮಯ್ಯ!
ಬೆಂಗಳೂರು : ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಾಗಿಲಿಗೆ ಬೋರ್ಡ್ ಒಂದನ್ನು ಹಾಕಿದ್ದಾರೆ. ಕೋವಿಡ್ ಮೊದಲ ಅಲೆಯಲ್ಲಿ ಸಿದ್ದರಾಮಯ್ಯನವರಿಗೆ ಸೋಂಕು ತಗುಲಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಅವರು ಸದ್ಯ ಎಲ್ಲಿಗೆ ಹೋದರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ. ಅಲ್ಲದೆ ಕೋವಿಡ್ ಸೋಂಕಿನ ಬಗ್ಗೆ ತುಂಬಾ ಜಾಗೃತರಾಗಿದ್ದಾರೆ. ರಾಜ್ಯದಲ್ಲಿ ನಿನ್ನೆ 21,794 …
Read More »ಟಂಟಂಗೆ ಲಾರಿ ಡಿಕ್ಕಿ: 5 ಕೂಲಿ ಕಾರ್ಮಿಕರು ಸಾವು
ಟಂಟಂ ಆಟೋಗೆ ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳೂರು ಎಂ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಐವರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟರೆ ಮೂವರಿಗೆ ಗಂಭೀರ ಗಾಯಗಳಾಗಿವೆ. ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾದ ಅಯ್ಯಮ್ಮ (60) ಶರಣಮ್ಮ (40) ಕಾಸೀಂಬೀ (40) ಭೀಮಬಾಯಿ (40) …
Read More »ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು
ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ. ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ …
Read More »ಆಕ್ಸಿಜನ್ ಕೊರತೆ ನೀಗಿಸಲು ಟಾಟಾ ಸಹಾಯ ಹಸ್ತ ! 24 ಕ್ರಯೋಜೆನಿಕ್ ಕಂಟೇನರ್ಗಳ ಆಮದು
ನವದೆಹಲಿ : ಭಾರತದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ಕಡಿಮೆ ಮಾಡಲು ದ್ರವರೂಪದ ಆಕ್ಸಿಜನ್ಅನ್ನು ಸಾಗಣೆ ಮಾಡುವುದಕ್ಕಾಗಿ 24 ಕ್ರಯೋಜೆನಿಕ್ ಕಂಟೇನರ್ಗಳನ್ನು ಆಮದು ಮಾಡುವುದಾಗಿ ಟಾಟಾ ಕಂಪೆನಿಗಳ ಗುಂಪು ಪ್ರಕಟಿಸಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕು ಎಂದು ನಿನ್ನೆ ಪ್ರಧಾನಿ ಮೋದಿ ಮಾಡಿದ ಮನವಿಗೆ ಸ್ಪಂದಿಸಿ, ಈ ಘೋಷಣೆ ಮಾಡಿದೆ. ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರೊನಾ ರೋಗಿಗಳಿಗೆ ಉಂಟಾಗುತ್ತಿರುವ ಆಕ್ಸಿಜನ್ …
Read More »ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಇಲ್ಲ : ಬಳ್ಳಾರಿಯಲ್ಲಿ ‘ಸಚಿವ ಶ್ರೀರಾಮುಲು’ ಚುನಾವಣಾ ಪ್ರಚಾರ
ಬಳ್ಳಾರಿ : ರಾಜ್ಯದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲೇ ಉಪ ಚುನಾವಣೆಯ ಬಳಿಕ, ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದೆ. ಈ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತವಾಗಿ ನಗರದ 25ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವಂತ ಸಚಿವ ಬಿ ಶ್ರೀರಾಮುಲು, ಕೊರೋನಾ ಸೋಂಕಿನ ಮಾರ್ಗಸೂಚಿ ಕ್ರಮಗಳನ್ನೇ ಗಾಳಿಗೆ ತೂರಿದ್ದಾರೆ. ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತವನ್ನು ಕಾಯ್ದುಕೊಳ್ಳದೋ, ಚುನಾವಣಾ ಪ್ರಚಾರದಲ್ಲಿ ತೊಡಗಿರೋದು, ಸಾರ್ವಜನಿಕರ ಟೀಕೆಗೆ …
Read More »ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ
ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ. ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.
Read More »ಮೇ 1 ರ ನಂತರ ಕೊವಿಶೀಲ್ಡ್ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ
ಮೇ 1 ರ ನಂತರ ಲಸಿಕೆ ಪಡೆಯುವ ಯುವಕರು ಈ ಸುದ್ದಿ ಓದಬೇಕು. ಕೊವಿಶೀಲ್ಡ್ ಲಸಿಕೆ ಮೇ 1 ರಿಂದ ದುಬಾರಿ ಆಗಲಿದೆ. ಈಗ ಕೊವಿಶೀಲ್ಡ್ ಲಸಿಕೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿದೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಇದನ್ನು ರೂ 250 ಕ್ಕೆ ನೀಡಲಾಗುತ್ತಿದೆ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಕೋವಿಶೀಲ್ಡ್ ಲಸಿಕೆಯನ್ನು ಇನ್ನು ಮುಂದೆ, ಅಂದರೆ ಮೇ 1 ರಿಂದ, ಮೂರು ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಸೀರಂ …
Read More »ಕೊರೋನಾ ಹೆಚ್ಚಳ’ದ ಎಫೆಕ್ಟ್ : ‘ಕುವೆಂಪು ವಿವಿ ಎಲ್ಲಾ ಪರೀಕ್ಷೆ’ಗಳು ಮುಂದೂಡಿಕೆ
ಶಿವಮೊಗ್ಗ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ 03ರವರೆಗೆ ನಿಗದಿಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಹೊರಬಿದ್ದ ಬಳಿಕ ಪತ್ರಿಕಾ ಪ್ರಕಟಣೆ ನೀಡಿರುವ …
Read More »ಬೆಳಗಾವಿ ಲೋಕಸಭಾ ಉಪಚುನಾವಣೆ ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದು, ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಎಂಇಎಸ್ ಅಭ್ಯರ್ಥಿ ಸ್ಪರ್ಧೆ ಮಾಡಿರುವುದು ನಮಗೆ ಯಾವುದೇ ತೊಂದರೆಯಾಗಿಲ್ಲ. ನಮ್ಮ ಮತಗಳು ನಮಗೆ ಇರುತ್ತವೆ …
Read More »
Laxmi News 24×7