ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …
Read More »ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ’: ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ನಟ ಯಶ್ ಅವರು ಬೆಂಬಲ ಕೊಡಬೇಕಾಗಿ ಸಾರಿಗೆ ನೌಕರರು ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇಲ್ಲ. ಆದರೆ, ಯಶ್ ಅವರ ತಂದೆ …
Read More »ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ …
Read More »3 ವರ್ಷದ ಬಾಲಕನಿಗೆ ತಂಪು ಪಾನೀಯದ ಜತೆ ಮದ್ಯ ಬೆರೆಸಿ ಕುಡಿಸಿದ್ರು; 2 ಗಂಟೆ ಕಾಲ ಪ್ರಜ್ಞಾಹೀನನಾದ.
ಮಧುಗಿರಿ: ಮೂರು ವರ್ಷದ ಬಾಲಕನಿಗೆ ಕಿಡಿಗೇಡಿಗಳು ತಂಪು ಪಾನೀಯದಲ್ಲಿ ಮದ್ಯವನ್ನು ಬೆರೆಸಿ ಕುಡಿಸಿ ವಿಕೃತಿ ಮೆರೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಏ. 10ರಂದು ಸಂಜೆ 6 ಗಂಟೆ ಸಮಯದಲ್ಲಿ ಗ್ರಾಮದ ಗುರುಸ್ವಾಮಿ ಎಂಬುವವರ ಮಗನಿಗೆ ಕಿಡಿಗೇಡಿಗಳು ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ತಂಪು ಪಾನೀಯ ಎಂದು ಭಾವಿಸಿ ಮದ್ಯ ಕುಡಿದ ಬಾಲಕ ಸುಮಾರು …
Read More »ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’: ಸತೀಶ್ ಜಾರಕಿಹೊಳಿ
ಸವದತ್ತಿ, ಏಪ್ರಿಲ್ 12: “ಪ್ರಧಾನಿ ನರೇಂದ್ರ ಮೋದಿ ಅಂಗಡಿಯಲ್ಲಿ ಗ್ಯಾಸ್, ಗೊಬ್ಬರ ಸೇರಿ ಎಲ್ಲವೂ ಕಡಿಮೆ ದರದಲ್ಲಿ ಸಿಗುತ್ತಿದೆ. ಆ ಅಂಗಡಿ ಎಲ್ಲಿದೆ ಎಂಬುದನ್ನು ಜನರು ಹುಡುಕಬೇಕಿದೆ’ ಎಂದು ಬೆಳಗಾವಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ಮತ ಕ್ಷೇತ್ರದ ಕಡಬಿ, ಶಿವಾಪುರ, ಯರಝರ್ವಿ ಗ್ರಾಮಗಳಲ್ಲಿ ಸೋಮವಾರ ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರ ನಡೆಸಿ, ಅವರು ಮಾತನಾಡಿದರು. “ಚುನಾವಣೆಗೂ ಮೊದಲು ಬಿಜೆಪಿಯವರು, ಪೆಟ್ರೋಲ್, …
Read More »ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿ ವಿಸ್ತರಿಸಿದ ಸರಕಾರ
ಬೆಂಗಳೂರು, ಎ.12: ಸಾರಿಗೆ ನೌಕರರು ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15ರೊಳಗಾಗಿ …
Read More »ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ: ಈಶ್ವರಪ್ಪ
ಧಾರವಾಡ: ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವದರಲ್ಲಿ ತಪ್ಪಿಲ್ಲ, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಹುಚ್ಚರ ರೀತಿಯಲ್ಲಿ ಮಾತನಾಡುವುದು ಶೋಭೆ ತರಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇರುತ್ತದೆ. ಇದನ್ನು ಹೊರತು ನೋಟು ಪ್ರಿಂಟ್ ಮಷಿನ್ ಇಲ್ಲವಲ್ಲಾ ಎಂದರು. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಹೀಗಾಗಿ ಏನೇನೂ ಮಾತನಾಡುತ್ತಾರೆ. …
Read More »ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಲೇಡಿ ಹೇಳಿಕೆ ಯುಟರ್ನ್, ಏನಿದರ ಸತ್ಯಾಸತ್ಯತೆ?
ಬೆಂಗಳೂರು, ಏಪ್ರಿಲ್ 12: ಕೊರೋನಾ ಎರಡನೇ ಅಲೆ ಹಾಗೂ ಸಾರಿಗೆ ನೌಕರರ ಮುಷ್ಕರದ ಗದ್ದಲದೊಳಗೆ ಕಣ್ಮರೆಯಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸೋಮವಾರ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸಿಡಿ ಸಂತ್ರಸ್ತ ಯುವತಿ “ಸಿಡಿ ಪ್ರಕರಣದ ವಾಸ್ತವವನ್ನು ಎಸ್ಐಟಿ ಅಧಿಕಾರಿಗಳ ಮುಂದೆ ಬಿಚ್ಚಿಡಲು ಕೇಳಿಕೊಂಡಿದ್ದಾಳೆ ಎಂಬ ವಿಷಯ ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿದೆ. ಸಿಡಿ ಲೇಡಿ ನಿಜವಾಗಿಯೂ ಉಲ್ಟಾ ಹೊಡೆದಿದ್ದಾಳಾ ? ಅಥವಾ ಮುಂದೆ ಯು ಟರ್ನ್ ಹೊಡೆಯಲಿದ್ದಾಳಾ ? ಒಂದು …
Read More »ಮಾಸ್ಕ್, ಸಾಮಾಜಿಕ ಅಂತರ ಇಲ್ಲದ ಮೇಕೆ ಸಂತೆ
ಕೊರಟಗೆರೆ: ಯುಗಾದಿ ಹಬ್ಬದ ವರ್ಷದ ತೊಡಕಿಗೆ ಈಗಲೇ ಕುರಿ ಮೇಕೆಗಳನ್ನುಕೊಂಡುಕೊಳ್ಳಲು ಜನರು ಮುಂದಾಗಿದ್ದರಿಂದ, ಮಾರುಕಟ್ಟೆಗಳಲ್ಲಿ ಜನದಟ್ಟನೆ ಕಂಡು ಬಂತು. ಮಂಗಳವಾರ ಯುಗಾದಿ ಹಬ್ಬ. ಹಬ್ಬದ ಮರುದಿನ ವರ್ಷದ ತೊಡಕು. ಮಂಗಳವಾರ ಹಬ್ಬ ಇರುವುದರಿಂದ ಅಂದು ಮೇಕೆ-ಕುರಿ ಮಾರುಕಟ್ಟೆಇರುವುದಿಲ್ಲ. ಹಾಗಾಗಿ ಜನರು ಮೊದಲೇ ಖರೀದಿಗೆ ಮುಂದಾದರು. ಹಬ್ಬದ ಮರುದಿನ ವರ್ಷ ತೊಡಕು ಭರ್ಜರಿಯಾಗಿ ನಡೆಯುತ್ತದೆ. ಬಾಡೂಟದ ಘಮಲು ಮೂಗು, ಮನಸನ್ನು ಸೆಳೆಯುತ್ತದೆ. ಅಕ್ಕಿರಾಂಪುರ ಮೇಕೆ ಕುರಿತಂತೆ ರಾಜ್ಯದಲ್ಲಿಯೇ ಹೆಸರಾಗಿದ್ದು, ನಾನಾ ಮೂಲೆಗಳಿಂದ …
Read More »ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ
ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ …
Read More »
Laxmi News 24×7