ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ಅಲ್ಲಿಂದ ರಸ್ತೆ ಮಾರ್ಗದಲ್ಲಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗ ರಾಮದುರ್ಗ ತಾಲೂಕು ಸಾಲಹಳ್ಳಿ ಹಾಗೂ 1 ಗಂಟೆಗೆ ಯರಗಟ್ಟಿ, 4.30ಕ್ಕೆ ಇಂಚಲದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ನಂತರ ಸಾಂಬ್ರಾ ವಿಮಾನ ನಿಲ್ದಾಣದ …
Read More »ಕಾಂಗ್ರೆಸ್ ಚಿಲ್ಲರೆ ರಾಜಕಾರಣದ ಬಗ್ಗೆ ಬಿಜೆಪಿ ಬಳಿ ಸಾಕ್ಷಿ ಇದೆಯಾ : ಸಿದ್ದರಾಮಯ್ಯ
ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು. ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ …
Read More »ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,
ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …
Read More »ನ್ಯಾಯಾಧೀಶರು ಸಿಟ್ಟಾಗಿದ್ದು ಕುಮಾರಸ್ವಾಮಿ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ
ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ರಾತ್ರಿ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …
Read More »ಏಪ್ರಿಲ್ 7 ರಿಂದ ಸಾರಿಗೆ ಮುಷ್ಕರ ಖಚಿತ ; ಖಾಸಗಿ ವಾಹನಗಳಿಗೆ ಅವಕಾಶ
ಬೆಂಗಳೂರು /ಧಾರವಾಡ ; ಕರ್ನಾಟಕ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್ಗಳ ಸಂಚಾರದಲ್ಲಿ …
Read More »ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ.. ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …
Read More »ವೀಡಿಯೊ ಮಾಡಿದ್ದು ನಾನೇ: ಕಾರಣ ಬಿಚ್ಚಿಟ್ಟ ಸಿಡಿ ಯುವತಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗಿನ ರಾಸಲೀಲೆಯ ವೀಡಿಯೊ ಮಾಡಿದ್ದು ನಾನೆ ಆದರೆ ಬ್ಲಾಕ್ ಮೇಲ್ ಮಾಡುವ ಉದ್ದೇಶ ಇರಲಿಲ್ಲ ಎಂದು ಸಿಡಿ ಯುವತಿ ಒಪ್ಪಿಕೊಂಡಿದ್ದಾಳೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಬೆಂಗಳೂರಿನ ಎಸ್ ಐಟಿ ಮುಂದೆ ಶನಿವಾರ ಹಾಜರಾದ ಸಿಡಿ ಯುವತಿ ಘಟನೆಯನ್ನು ವಿವರಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿತ್ತು. ಈ …
Read More »ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್ಗಳಲ್ಲಿ ಫಾಸ್ಟಾಗ್ ಮೂಲಕ ಟೋಲ್ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ
ದಾವಣಗೆರೆ: ಮನೆಯ ಮುಂದೆ ಕಾರು ನಿಲ್ಲಿಸಿದ್ದ ಕಾರಿಗೆ ಒಂದೇ ದಿನ ಐದು ಟೋಲ್ಗಳಲ್ಲಿ ಫಾಸ್ಟಾಗ್ ಮೂಲಕ ಟೋಲ್ ಶುಲ್ಕ ಕಡಿತಗೊಂಡಿರುವ ಕುತೂಹಲದ ಸಂಗತಿ ವರದಿಯಾಗಿದೆ. ಒಟ್ಟಾರೆ ಏಳು ಬಾರಿ ವಿವಿಧ ಟೋಲ್ಗಳಲ್ಲಿ ಶುಲ್ಕ ಕಡಿತಗೊಂಡಿದೆ. ಹಾಗಾಗಿ ಕಾರಿನ ಮಾಲಕರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದಾವಣಗೆರೆ ಸಮೀಪದ ಆವರಗೆರೆ ನಿವಾಸಿ, ನ್ಯಾಯವಾದಿ ಎಸ್. ಪರಮೇಶ್ ಎಂಬವರ ಇನ್ನೋವಾ ಕಾರು (ಕೆಎ-17, ಎನ್-6828) ಮನೆಯ ಮುಂದೆಯೇ ನಿಂತಿತ್ತು. ಆದರೂ ಮಾ.31ರ ರಾತ್ರಿ …
Read More »ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್
ವಿಜಯಪುರ: ಸಚಿವ ಈಶ್ವರಪ್ಪ ಕೂಡ ಯಡಿಯೂರಪ್ಪ ಅವರಂತೆ ಪಕ್ಷ ಕಟ್ಡಿದ ಹಿರಿಯ ನಾಯಕ. ಅವರಿಗೆ ಇಲಾಖೆಯಲ್ಲಿ ಸಚಿವರಾಗಿ ಮುಕ್ತ ಸ್ವಾತಂತ್ರ್ಯ ಇಲ್ಲವಾಗಿದ್ದು, ತಾಳ್ಮೆ ಮೀರಿ ಸ್ಫೋಟಗೊಂಡಿದ್ದಾರೆ. ಸಂಪುಟದಲ್ಲಿ ಇನ್ನೂ ಸ್ಪೋಟಗಳಾಗುತ್ತದೆ ನೋಡ್ತಾ ಇರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ವಾರ್ಡ್ ನಂ22 ರಲ್ಲಿ ಏಕತಾ ನಗರದಲ್ಲಿ ಸಮುದಾಯ ಭವನದ ಕಾಮಗಾರಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೇ 2 …
Read More »ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ
ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …
Read More »
Laxmi News 24×7