Breaking News

ರಾಜಕೀಯ

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ ಅಮಿತ್‌ ಶಾ ಖುದ್ದಾಗಿ ಅಥವಾ ವಕೀಲರ ಮೂಲಕ ಫೆಬ್ರವರಿ 22ರಂದು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಇಲ್ಲಿನ ಬಿಧಾನನಗರದ ಸಂಸದ/ಶಾಸಕರ ಕೋರ್ಟ್‌ನ ವಿಶೇಷ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ 500ನೇ ವಿಧಿ ಅಡಿ ಮಾನಹಾನಿ ಪ್ರಕರಣ ದಾಖಲಿಸಲಾಗಿದ್ದು, ಅಮಿತ್‌ …

Read More »

ಪೆಟ್ರೋಲ್​ ದರ ಏರಿಕೆ ಕುರಿತು ʼಅಮುಲ್​ ಗರ್ಲ್ʼ​ಗೂ ಶುರುವಾಯ್ತು ಚಿಂತೆ.!

ದೇಶದಲ್ಲಿ ಸದ್ಯ ಪೆಟ್ರೋಲ್​ ದರ ಏರಿಕೆಯದ್ದೇ ಸದ್ದು. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆಯಿಂದಾಗಿ ಶ್ರೀ ಸಾಮಾನ್ಯ ಕಂಗಾಲಾಗಿದ್ದಾನೆ. ಇತ್ತ ಪ್ರತಿಷ್ಟಿತ ಡೈರಿ ಬ್ರ್ಯಾಂಡ್​ ಅಮುಲ್​ ಕೂಡ ಪೆಟ್ರೋಲ್​ ಹಾಗೂ ಡೀಸೆಲ್​ ದರ ಏರಿಕೆ ಬಗ್ಗೆ ತಲೆ ಕೆಡಿಸಿಕೊಂಡಂತೆ ಕಾಣ್ತಿದೆ. ಅಮುಲ್​ ಗರ್ಲ್​ನ್ನು ಬಳಸಿ ಮಾಡಲಾದ ಡೂಡಲ್​​ನಲ್ಲಿ ಪೆಟ್ರೋಲ್​ ದರ ಏರಿಕೆಯನ್ನ ವಿಮರ್ಶಿಸಲಾಗಿದೆ. ಇದರಲ್ಲಿ ಚೀಸ್​ನ್ನ ತಿನ್ನುತ್ತಾ ಕಾರಿಗೆ ಪೆಟ್ರೋಲ್​ ತುಂಬಿಸಿಕೊಳ್ತಿರುವ ಅಮುಲ್​ ಗರ್ಲ್​ ದುಃಖದಿಂದ ಮೀಟರ್​ …

Read More »

ನನಗೆ ಸಮಾಜವೇ ತಂದೆ-ತಾಯಿ, ಸಮಾಜವೇ ಗುರು: ಪಂಚಮಸಾಲಿ ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ

ಬೆಂಗಳೂರು: ಪಾದಯಾತ್ರೆ ಆರಂಭಿಸುವಾಗ ಭಕ್ತರ ಜತೆ ಒಬ್ಬನೇ ಇದ್ದೆ. ದಾವಣಗೆರೆ ತಲುಪಿದಾಗ ವಚನಾನಂದಶ್ರೀ ಜತೆಯಾದರು. ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿಗರ ಬಲಗೈ ಬಂಟ. ನಮ್ಮ ಪರವಾಗಿ ಸಂಪುಟ ಸಭೆಯಲ್ಲಿ ಸಚಿವರು ದನಿ ಎತ್ತಿದ್ದಾರೆ. ಅದಕ್ಕಾಗಿ ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಮುರುಗೇಶ್ ನಿರಾಣಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೋರಾಟಕ್ಕೆ ಕೊಪ್ಪಳ ಪಂಚಮಸಾಲಿಗರ ಕೊಡುಗೆ ಹೆಚ್ಚಿದೆ. ಪಾದಯಾತ್ರೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಬಸವ ಜಯಮೃತ್ಯುಂಜಯಶ್ರೀ ಸ್ವಾಮೀಜಿ ಮಾತನಾಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗಾಗಿ …

Read More »

ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…

ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ …

Read More »

‘ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀನಿ’ -ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವುದಾಗಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮಮಂದಿರ ಕಟ್ಟುತ್ತಾರೆ, ಅದರಲ್ಲೇನಿದೆ? ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು …

Read More »

87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …

Read More »

ಫೆ.24ರಿಂದ ಗೂಗಲ್ ನ ಈ ಸೇವೆ ಅಲಭ್ಯ

ನವದೆಹಲಿ: ಗೂಗಲ್ ಫೆ.24ರಿಂದ ಪ್ಲೇ ಮ್ಯೂಸಿಕ್ ಸೇವೆಯನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದು, ಇದಕ್ಕೆ ಮೊದಲು ಎಲ್ಲಾ ರೀತಿಯ ಡೆಟಾ ಉಳಿಸಿಕೊಳ್ಳಲು ಗ್ರಾಹಕರಿಗೆ ಸೂಚಿಸಿದೆ. ನಾವು ಆದಷ್ಟು ಬೇಗನೆ ಗೂಗಲ್ ಪ್ಲೇ ಮ್ಯೂಸಿಕ್ ನ ಲೈಬ್ರೇರಿ ಮತ್ತು ಡೆಟಾ ಡಿಲೀಟ್ ಮಾಡುತ್ತಿದ್ದೇವೆ. ಫೆ.24ರಂದು ಪ್ಲೇ ಮ್ಯೂಸಿಕ್ ನ ಕೊನೆಯ ದಿನವಾಗಿದೆ. ಮ್ಯೂಸಿಕ್ ಲೈಬ್ರೇರಿ, ಅಪ್ ಲೋಡ್, ಇತ್ಯಾದಿಗಳು ಕೂಡ ಡಿಲೀಟ್ ಆಗಲಿದೆ. ಇದರ ಬಳಿಕ ಇದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. …

Read More »

ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆ ಗಲ್ಲುಶಿಕ್ಷೆ ವಿಧಿಸಿರುವ ನ್ಯಾಯಾಲಯ

ಗದಗ: ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಪರಾಧಿ ರೋಣ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಪ್ರಶಾಂತಗೌಡ ಎಂದು ತಿಳಿದುಬಂದಿದೆ. ಪ್ರೀತಿಯ ಹೆಸರಲ್ಲಿ ಮಹಿಳೆಯನ್ನು ನಂಬಿಸಿ ವಿವಾಹವಾಗಿದ್ದ. ಇಬ್ಬರ ಪ್ರೀತಿ ಸಂಕೇತವಾಗಿ ಮಗ ಹುಟ್ಟಿದ್ದ. ಆದರೆ ಪ್ರಶಾಂತನಿಗೆ ಪತ್ನಿ-ಮಗ ಬೇಕಿರಲಿಲ್ಲ. ಮಹಿಳೆಯನ್ನು ನಂಬಿಸಿ ಪ್ರೀತಿ ಹೆಸರಲ್ಲಿ ದೋಖಾ ಮಾಡಿದ್ದ ಈ …

Read More »

ನನಗೆ ನೋಟಿಸ್ ಬಂದಿದೆ.ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂದು 11 ಪುಟಗಳ ಉತ್ತರ ಬರೆದಿದ್ದೇನೆ.

ಬೆಂಗಳೂರು: ನಾನು ಪಕ್ಷದ ವಿರುದ್ಧವಾಗಲಿ ಅಥವಾ ನಮ್ಮ ನಾಯಕರಾದ ನರೇಂದ್ರ ಮೋದಿ ವಿರುದ್ಧವಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರ ಕುಟುಂಬ ರಾಜಕಾರಣ ಹಾಗೂ ವಿಜಯೇಂದ್ರರ ವರ್ಗಾವಣೆ ದಂಧೆ ಬಗ್ಗೆ ಮಾತ್ರ ಆರೋಪಿಸಿದ್ದೇನೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಟ್​ನಿಂದ ನನಗೆ ನೋಟಿಸ್ ಬಂದಿದೆ. ನೋಟಿಸ್​ಗೆ 11 ಪುಟಗಳ ಉತ್ತರ ಬರೆದಿದ್ದೇನೆ. ಯಡಿಯೂರಪ್ಪನವರ ಕುಟುಂಬದಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ …

Read More »

ಮಗುವಿನ ಜೀವ ಉಳಿಸಿದ’: ₹16 ಕೋಟಿ ಮೌಲ್ಯದ ‘ಲಾಟರಿ

ಭಟ್ಕಳ: ಮಾರಣಾಂತಿಕ ಸ್ನಾಯು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ₹ 16 ಕೋಟಿ ಮೌಲ್ಯದ ಜೀನ್ ಚಿಕಿತ್ಸೆಗೆ ಒಳಗಾಗಿ ಈಗ ಮರುಜೀವ ಪಡೆದಿದ್ದಾಳೆ. ಬಹುರಾಷ್ಟ್ರೀಯ ಔಷಧಿ ಕಂಪನಿ ‘ನೋವಾರ್ಟಿಸ್’ ಲಾಟರಿ ಮೂಲಕ ಈ ಮಗುವಿನ ಚಿಕಿತ್ಸೆಗೆ ಆಯ್ಕೆ ಮಾಡಿತ್ತು. ಪಟ್ಟಣದ ಮೊಹಮ್ಮದ್ ಬೆಸಿಲ್ ಮತ್ತು ಖಾದಿಜಾ ಅವರ ಪುತ್ರಿಯಾಗಿರುವ ಫಾತಿಮಾಳನ್ನು, ಜನವರಿ ಕೊನೆಯಲ್ಲಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಝೋಲ್ಗೆನ್ಸ್ಮಾ’ ಜೀನ್ ಥೆರಪಿಗೆ ಒಳಗಾಗಿದ್ದು ಈಗ ಚೇತರಿಸಿಕೊಳ್ಳುತ್ತಿರುವುದಾಗಿ …

Read More »