Breaking News

ರಾಜಕೀಯ

ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?

ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇದೀಗ ಕೊಠಡಿ ರಾಜಕೀಯ ಆರಂಭಿಸಿದ್ದಾರೆ. ತಮ್ಮ ರಾಜಕೀಯ ಬದ್ಧವೈರಿ ಡಿ ಕೆ ಶಿವಕುಮಾರ್ ಅವರು ಸಚಿವರಾಗಿದ್ದ ಪಡೆದಿದ್ದ ಕೊಠಡಿಯನ್ನೇ ಪಡೆದಿದ್ದಾರೆ. ಹೌದು. ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ಪಡೆದಿದ್ದ ಕೊಠಡಿಗೆ ಇಂದು ಸಿ.ಪಿ ಯೋಗೇಶ್ವರ್ ಪ್ರವೇಶಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 336, 337 ಪಡೆದಿರುವ ಸಿ.ಪಿ.ಯೋಗೇಶ್ವರ್, ಇಂದು …

Read More »

B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 27/01/2021 ರಂದು ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ ಮಾಡಲಾಯಿತು . ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ ಬೆನಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಭಾಜಪಾ ಬೆಳಗಾವಿ ಮಹಾನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ವಹಿಸಿದ್ದರು . ವಿಶೇಷ ಆಹ್ವಾನಿತರಾಗಿ SC ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ …

Read More »

ಸಚಿವ ಸ್ಥಾನ ಭಗ್ನಗೊಂಡ ಬೆನ್ನಲ್ಲೇ ಮತ್ತೊಂದು ಹುದ್ದೆಗೆ ಕರ್ಚಿಫ್ ಹಾಕಿದ ಹೆಚ್. ವಿಶ್ವನಾಥ್

ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನಾನು ಒಂಟಿಯಲ್ಲ ಎಂದು ಹೇಳಿದ್ದಕ್ಕೆ ಧನ್ಯವಾದ. ಆದರೆ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಯಡಿಯೂರಪ್ಪ ಜೊತೆ …

Read More »

ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ …

Read More »

ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …

Read More »

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ …

Read More »

ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …

Read More »

ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …

Read More »

5A ಕಾಲುವೆ ಅನುಷ್ಠಾನ ಜಾರಿಗಾಗಿ ಮಾಜಿ ಶಾಸಕರಿಂದ ಆಣೆ ಪ್ರಮಾಣ ಪ್ರಹಸನ

ಮಸ್ಕಿ (ರಾಯಚೂರು): ಎನ್‌ಆರ್‌ಬಿಸಿಯ 5A ಕಾಲುವೆ ಅನುಷ್ಠಾನ ಸಾಧ್ಯವಿದ್ದರೆ ಎಲ್ಲ ಪ್ರಯತ್ನಗಳಿಗೂ ನಾವು ಬದ್ಧವಿದ್ದು, ಯಾವ ದೇವರ ಮೇಲೆ ಬೇಕಾದರೂ ಪ್ರಮಾಣ ಮಾಡುವುದಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು. ಯೋಜನೆ ಜಾರಿ ಬೇಡಿಕೆಯೊಂದಿಗೆ ಕಳೆದ 69 ದಿನಗಳಿಂದ ರೈತರು ಧರಣಿ ನಡೆಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಯೋಜನೆ ಜಾರಿಗೆ ನಾವು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಬೇಕಾದರೆ ಇನ್ನೂ ಯಾರನ್ನಾದರೂ ಭೇಟಿ ಮಾಡಬೇಕಿದ್ದರೆ ಕರೆಯಿರಿ …

Read More »

ಬಿ.ಸಿ.ಪಾಟೀಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಉಗ್ರಪ್ಪ ಆರೋಪ

ಬೆಂಗಳೂರು: ರೈತರನ್ನು ಭಯೋತ್ಪಾದಕರು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹಾಗೂ ವಿಧಾನಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವಾಗ ಭಯೋತ್ಪಾದಕರಾದರು. ಕೃಷಿ ಸಚಿವರಾಗಿ ಈ ರೀತಿಯ ಮಾತು ಆಡಬಹುದೇ ಎಂದು ಪ್ರಶ್ನಿಸಿದರು. ಬಿ.ಸಿ.ಪಾಟೀಲ್‌ ರೈತರ ಕ್ಷಮೆಯಾಚಿಸಬೇಕು. ಸಂಪುಟದಿಂದ ಅವರನ್ನು ಕೈ ಬಿಡಬೇಕು. ರೈತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ …

Read More »