Breaking News

ರಾಜಕೀಯ

ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ

ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ …

Read More »

ಭಂಡಾರ ಆಸ್ಪತ್ರೆಯ ಬೆಂಕಿ ಅವಘಢದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಭಂಡಾರಾದಲ್ಲಿ ಸಂಭವಿಸಿದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಲಾಗಿದೆ. ಪಿಎಂ ಮೋದಿ ಈ ಹಿಂದೆ ಟ್ವೀಟ್ ಮಾಡಿ ‘ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. …

Read More »

ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ‌ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …

Read More »

ಗ್ರಾಹಕರಿಗೆ ಗುಡ್ ನ್ಯೂಸ್ : ಇಲ್ಲಿ ಸಿಲಿಂಡರ್ ಬುಕ್ ಮಾಡಿದ್ರೆ ನಿಮಗೆ ಸಿಗಲಿದೆ 50 ರೂ. ಕ್ಯಾಶ್ ಬ್ಯಾಕ್!

ನವದೆಹಲಿ : ಐಸಿಐಸಿಐ ಬ್ಯಾಂಕ್ ಎಲ್ ಪಿಜಿ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಐಸಿಐಸಿಐ ಬ್ಯಾಂಕ್ ನ ಪಾಕೆಟ್ಸ್ ವ್ಯಾಲೆಟ್ ಮೂಲಕ ಸಿಲೆಂಡರ್ ಕಾಯ್ದಿರಿಸಿದರೆ 50 ರೂ. ಕ್ಯಾಶ್ ಬ್ಯಾಕ್ ಪಡೆಯಬಹುದು. ಹೌದು, ಕ್ಯಾಶ್ ಬ್ಯಾಕ್ ಪಡೆಯಲು, ನೀವು PMRJAN2021 ಪ್ರೋಮೋ ಕೋಡ್ ಅನ್ನು ನಮೂದಿಸಬೇಕು. 10 ಪರ್ಸೆಂಟ್ ಗೆ ಗರಿಷ್ಠ 50 ರೂಪಾಯಿ ಕ್ಯಾಶ್ ಬ್ಯಾಕ್ ನೀಡ್ತಿದೆ. ಪಾಕೆಟ್ಸ್ ಪ್ರಕಾರ, ಈ ಆಫರ್ 2021ರ ಜನವರಿ 25ರವರೆಗೆ ಮಾನ್ಯವಾಗಿರುತ್ತದೆ. ಈ …

Read More »

ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಮೂಲ್ ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡುತ್ತಿದೆ. ಅದರಲ್ಲಿ 24 ರೂ. ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಸಿಗುತ್ತಿದೆ. ಬಮೂಲ್ ಸಂಕ್ರಾಂತಿ ಬಳಿಕ 1 ರೂ. …

Read More »

ಜ.16ರಿಂದ ಭಾರತದಲ್ಲಿ ಕೋವಿಡ್ 19 ಲಸಿಕೆ ನೀಡಲು ಆರಂಭ; ಆರೋಗ್ಯ ಸಿಬ್ಬಂದಿಗೆ ಆದ್ಯತೆ

ನವದೆಹಲಿ:ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ದೇಶೀಯವಾಗಿ ವರ್ಷದೊಳಗೆ ಲಸಿಕೆ ತಯಾರಿಸಿರುವ ಭಾರತ ಜನವರಿ (2021) 16ರಿಂದ ದೇಶಾದ್ಯಂತ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ(ಜನವರಿ 09, 2021) ತಿಳಿಸಿದೆ. ದೇಶದಲ್ಲಿ ಜನವರಿ 16ರಿಂದ ಆರಂಭವಾಗಲಿರುವ ಲಸಿಕೆ ನೀಡಿಕೆ ಯೋಜನೆಯಲ್ಲಿ ಮೊದಲಿಗೆ ಆರೋಗ್ಯ ಸೇವೆ ನೀಡುವ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಲಿದ್ದು, ಅಂದಾಜು 3 ಕೋಟಿ ಜನರು ಇದ್ದಿರುವುದಾಗಿ ತಿಳಿಸಿದೆ. ನಂತರ 50 ವರ್ಷ ಮೀರಿದ …

Read More »

ಮಾಸ್ಕ್ ಹಾಕದೆ ಗಲ್ಲಿ ಕ್ರಿಕೆಟ್ ಆಡಿ ಟ್ರೋಲ್ ಆದ ಆಮೀರ್ ಖಾನ್

ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ …

Read More »

ಫೆಬ್ರವರಿ 14ಕ್ಕೆ ‘ಲವ್ ಮಾಕ್‌ಟೇಲ್ 2’ ಚಿತ್ರದ ಹಾಡು ಬಿಡುಗಡೆ

ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್‌ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸಾಕಷ್ಟು ಜನಪ್ರಿಯತೆ ಪಡೆದರು. ಇದೀಗ ‘ಲವ್ ಮಾಕ್‌ಟೇಲ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು ಇದರ ಸಾಂಗ್ ವೊಂದನ್ನು ಫೆಬ್ರವರಿ 14ರಂದು ರಿಲೀಸ್ ಮಾಡಲಿದ್ದಾರೆ. ‘ಲವ್ ಮೊಕ್ಟೈಲ್ 2’ಚಿತ್ರದ ರೊಮ್ಯಾಂಟಿಕ್ ಹಾಡೊಂದನ್ನು ರಿಲೀಸ್ ಮಾಡುವ ಮೂಲಕ ಪ್ರೇಮಿಗಳ ದಿನದಂದು ಉಡುಗೊರೆಯಾಗಿ …

Read More »

ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ ಹಾಗೂ ಕಾನ್ಸ್ಟೇಬಲ್

ಬೆಂಗಳೂರು: ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನು ಎಸಿಬಿ ಅಧಿಕಾರಿಗಳು ಭರ್ಜರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು ಆರ್ ಐ ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ …

Read More »

ಬೆಳಗಾವಿಯ ಮುಂದಿನ ಪಾಲಿಕೆ ಮೇಯರ್ ಬಿಜೆಪಿಯವರಾಗಿರ್ತಾರೆ: ಸಚಿವ ಭೈರತಿ ಬಸವರಾಜ್

ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ …

Read More »