ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …
Read More »BIG NEWS: ಬೊಕ್ಕಸಕ್ಕೆ ಹೊರೆ, ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು,ನ.25- ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆ, ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಹೆಚ್ಚುವರಿಯಾಗಿ 2ರಿಂದ 3 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಪ್ರತಿ ತಿಂಗಳು ಕನಿಷ್ಠವೆಂದರೆ 2 ಕೋಟಿ ಹೊರೆಯಾಗುತ್ತದೆ. ಯಾವ ಇಲಾಖೆಗಳಲ್ಲಿ ಹೆಚ್ಚುವರಿಯಾಗಿ ಅನಗತ್ಯ ಸಿಬ್ಬಂದಿಗಳಿದ್ದಾರೋ ಅವರನ್ನು ಪುನಃ ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ(ಡಿಪಿಎಆರ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. …
Read More »ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತ
ಬೆಂಗಳೂರು,ನ.24- ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತವಾಗಿದ್ದು, ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ. ಈ ತಿಂಗಳಾಂತ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ. ಇದರ ಜೊತೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮಪಂಚಯತ್ ಚುನಾವಣೆಗೆ ಮೂಹೂರ್ತ ನಿಗಧಿ ಮಾಡುವುದು ಖಚಿತವಾಗಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದರೆ, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, …
Read More »ಶಿವಸೇನೆ ಶಾಸಕನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ
ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ ಹೋರಾಟಗಾರರನ್ನು ಶೂಟ್ ಮಾಡಿ ಬಿಸಾಕಿ:ಋಷಿಸ್ವಾಮಿ
ಡಿಸೆಂಬರ್: ಡಿ.5ರಂದು ಕನ್ನಡ ಹೋರಾಟಗಾರರು ಬಂದ್ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಕಾಳಿ ಮಠದ ಋಷಿಕುಮಾರ ಎಂಬ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ. ಅವರು ರಾಜ್ಯದಲ್ಲಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಎಂದು ಮರಾಠಿಗರ ಪರ ಬ್ಯಾಟ್ ಬೀಸಿದ್ದಾರೆ. ಇದರ ಜೊತೆಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸ್ವಾಮಿ ಬಿಎಸ್ವೈ ಇಂತವರನ್ನೆಲ್ಲಾ ಶೂಟ್ ಮಾಡಿ ಬಿಸಾಕಬೇಕು. ಉತ್ತರಪ್ರದೇಶದಲ್ಲಿ …
Read More »ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …
Read More »ಕರ್ನಾಟಕ ಬಂದ್ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು
ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದೇವೆ. ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ …
Read More »ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ. ಅವರು ಉತ್ಸಾಹದಿಂದ ಕೆಲಸ ಮಾಡುತ್ತಾರೆ.:ಅಶ್ವತ್ಥನಾರಾಯಣ್
ತುಮಕೂರು, ನ.23- ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿರುಗೇಟು ನೀಡಿದ್ದಾರೆ. ರೋಷನ್ ಬೇಗ್ ಅವರ ಮೇಲೂ ಸಿಬಿಐ ಅಧಿಕಾರಿಗಳು ಕಾನೂನು ಪ್ರಕಾರ ದಾಳಿ ನಡೆಸಿದ್ದಾರೆ. ಅದರ ವಿಚಾರಣೆಯೂ ನ್ಯಾಯ ಸಮ್ಮತವಾಗಿ ನಡೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮುಖ್ಯಮಂತ್ರಿ ಅವರ ತೀರ್ಮಾನವೇ …
Read More »ಅಮೆರಿಕ ದಂತೆ ನಮ್ಮಲ್ಲಿಯೂ ರಾಜಕೀಯ ದಲ್ಲಿ ವಿಪ್ಲವ ಆಗಲಿದೆ : ಕೊಡಿಶ್ರಿ ಭವಿಷ್ಯ
ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು. ಕೆಲ ದಿನಗಳ ಹಿಂದೆ ಗ್ರಹಣ ಫಲ …
Read More »ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ
ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ …
Read More »
Laxmi News 24×7