Breaking News

ರಾಜಕೀಯ

ಕೆಜಿಎಫ್ ರಾಕಿಗೆ ಡೆತ್ ನೋಟ್ ನೀಡಲು ಬಂದ ರಮಿಕಾ ಸೇನ್

ಬೆಂಗಳೂರು: ಕೆಜಿಎಫ್ ದುನಿಯಾದ ರಾಕಿಗೆ ಡೆತ್ ನೋಟ್ ನೀಡಲು ಬಂದ ರಾಜಕಾರಣಿ ರಮೀಕಾ ಸೇನ್ ಫಸ್ಟ್ ಲುಕ್ ಔಟ್ ಆಗಿದೆ. ರಮೀಕಾ ಸೇನ್ ಪಾತ್ರದಲ್ಲಿ ನಟಿಸುತ್ತಿರುವ ರವೀನಾ ಟಂಡನ್ ಹುಟ್ಟುಹಬ್ಬದ ಹಿನ್ನೆಲೆ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆಗೊಳಿಸುವ ಮೂಲಕ ಬರ್ತ್ ಡೇ ಗಿಫ್ಟ್ ನೀಡಿದೆ. ಕನ್ನಡಕ್ಕೆ ಮೊದಲ ಬಾರಿಗೆ ಬಂದಿರುವ ರವೀನಾ ಟಂಡನ್ ಕೆಜಿಎಫ್ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗದಲ್ಲಿ ಕಾಣಿಸಿಕೊಂಡಿದ್ದ ಮಹಿಳಾ ರಾಜಕಾರಣಿಯಾಗಿ ರವೀನಾ ನಟಿಸುತ್ತಿದ್ದಾರೆ. …

Read More »

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

      ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ …

Read More »

ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.

    ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ …

Read More »

ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …

Read More »

ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ …

Read More »

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ.

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ …

Read More »

ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ನಾನು 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ. ಆಗ ಡಿ.ಕೆ. ಸಹೋದರರಿಗೆ ಈ ಮುನಿರತ್ನ ಒಳ್ಳೆಯವನಾಗಿದ್ದ. ಈಗ ಮುನಿರತ್ನ ಇವರಿಗೆ ಅಷ್ಟೊಂದು ಕಹಿಯಾಗಿ ಬಿಟ್ನಾ? ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್​ ಕೆಂಪೇಗೌಡ ಅಧ್ಯಯನ ಪೀಠದ ಉದ್ಘಾಟನೆ ದಿನ ನನ್ನನ್ನೂ ಹೊಗಳಿದ್ರು. ಎಲ್ಲರನ್ನೂ ಒಟ್ಟಿಗೆ ಇಟ್ಕೊಂಡು ಹೋಗಿ. ನಾಡಪ್ರಭು ಕೆಂಪೇಗೌಡರ ಇತಿಹಾಸ ಓದಿ. ಕೆಂಪೇಗೌಡರ ಇತಿಹಾಸ ಓದದೆ ನೀವು …

Read More »

ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ.

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ …

Read More »

ಡಿಕೆಶಿಯವರದ್ದು ಯಾವಾಗಲೂ ಗೂಂಡಾ ರಾಜಕಾರಣ- ಶೋಭಾ ಕರಂದ್ಲಾಜೆ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ …

Read More »

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »