Breaking News

ರಾಜಕೀಯ

ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ಬೆಳಗಾವಿ,  ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …

Read More »

ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯ

ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …

Read More »

ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ …

Read More »

ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!

ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …

Read More »

ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು. ಮಂಗಳವಾದ್ಯಗಳ ಮಧ್ಯೆ …

Read More »

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ತನ್ನ ವಿಶಿಷ್ಟ ಶೈಲಿಯ ಹಾಡುಗಾರಿಕೆಯಿಂದ ಅಭಿಮಾನಿಗಳನ್ನು …

Read More »

ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ತೇಜಸ್ವಿ ಸೂರ್ಯ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ …

Read More »

ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …

Read More »