Breaking News

ರಾಜಕೀಯ

2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ’

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಶಾಸಕ ಎಸ್‌.ಎ.ರಾಮದಾಸ್‌ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ …

Read More »

2000 ರು. ನೋಟು ಬಿಡುಗಡೆ ಕುರಿತು ಮೋದಿಗೆ ಒಲವಿರಲಿಲ್ಲ!

ನವದೆಹಲಿ : 2016 ನ.8ರಂದು ನೋಟ್‌ ಬ್ಯಾನ್‌ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1000 ರು. ಬದಲು 2000 ರು. ಹೊಸ ನೋಟನ್ನು ಬಿಡುಗಡೆ ಮಾಡುವ ಕುರಿತು ಒಲವನ್ನು ಹೊಂದಿರಲಿಲ್ಲ. ಆದರೆ, ಸಮಾಲೋಚನೆಯ ಬಳಿಕ ಈ ಸಲಹೆಯನ್ನು ಒಪ್ಪಿಕೊಂಡಿದ್ದರು ಎಂಬ ಸಂಗತಿಯನ್ನು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಬಹಿರಂಗ ಪಡಿಸಿದ್ದಾರೆ. ಮೋದಿ ಅವರ ಜನ್ಮ ದಿನದ ನಿಮಿತ್ತ ಆಂಗ್ಲ ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಅವರು ನೋಟು ಅಪನಗದೀಕರಣದ …

Read More »

ಶಿವಮೊಗ್ಗಕ್ಕೆ ಸೀಮಿತವಾಗಿರುವ ಮುಖ್ಯಮಂತ್ರಿ: ಕತ್ತಿ ಕಿಡಿ

ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಖಂಡ ಕರ್ನಾಟಕದ ಬಗ್ಗೆ ಚಿಂತಿಸುತ್ತಿಲ್ಲ. ಕೇವಲ ಶಿವಮೊಗ್ಗ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಕೊಡುತ್ತಿಲ್ಲ’ ಎಂದು ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಕಿಡಿಕಾರಿದರು. ಗುರುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ. ಇದರಿಂದ ಬಹಳ ನೋವಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ನನಗೆ ಮುಖ್ಯ. ಇದೆಲ್ಲವನ್ನೂ ಕೇಳಬೇಕೋ, ಬೇಡವೋ? ಕೂಗಾಟ ಮಾಡಬೇಕೋ, ಬೇಡವೋ?’ ಎಂದು …

Read More »

ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ

ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳ ತಂಡವು ಎರಡು ದಿನಗಳಿಂದ ಧಾರವಾಡದಲ್ಲಿಯೇ ಠಿಕಾಣಿ ಹೂಡಿದ್ದು ಗುರುವಾರರಂದು ಯೋಗೀಶ್‌ ಗೌಡರ ಪತ್ನಿ ಮಲ್ಲಮ್ಮ ಸೇರಿ ಹಲವು ಕಾಂಗ್ರೆಸ್‌ ಮುಖಂಡರ ವಿಚಾರಣೆ ನಡೆಸಿತು. ಕೊಲೆಯಾದ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಹಾಗೂ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಲು ಪ್ರಮುಖ ಪಾತ್ರ ವಹಿಸಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, …

Read More »

ಪ್ರಧಾನಿ ಮೋದಿ – ಸಿಎಂ ಯಡಿಯೂರಪ್ಪ ಭೇಟಿ: ಹೆಚ್ಚು ಪರಿಹಾರಕ್ಕೆ ಬೇಡಿಕೆ

ನವದೆಹಲಿ: ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಬೆಳಿಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿಯವರ ನಿವಾಸದಲ್ಲಿ ಸಿಎಂ ಭೇಟಿಗೆ ಸಮಯ ನಿಗದಿಯಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಭಾರಿ ಹಾನಿಯಾಗಿದ್ದು, ಹೆಚ್ಚಿನ ಪರಿಹಾರ ಬಿಡುಗಡೆಗೆ ಬೇಡಿಕೆ ಇಡಲಿದ್ದಾರೆ. ನಿನ್ನೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದ ಯಡಿಯೂರಪ್ಪ ಇಂದು ಬೆಳಗ್ಗೆ ಪ್ರಧಾನಿಯವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಪಕ್ಷ ಮತ್ತು ಸರ್ಕಾರ ಮೊದಲಾದ ವಿಚಾರಗಳ …

Read More »

ಸಂಪುಟ ಪುನಾರಚನೆಯತ್ತ ಚಿತ್ತ | ವರಿಷ್ಠರ ತೀರ್ಮಾನಕ್ಕೆ ಬದ್ಧ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಟ್ಟು ಎಂಟು ಮಂದಿಯನ್ನು ಸೇರಿಸಿಕೊಳ್ಳುವ ಮೂಲಕ ಸಂಪುಟ ಪುನಾರಚನೆಯ ಪ್ರಸ್ತಾವ ಮುಂದಿಟ್ಟುಕೊಂಡು ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ಪಡೆಯಲು ನಿರ್ಧರಿಸಿದ್ದಾರೆ. ಪುನಾರಚನೆಗೆ ಒಪ್ಪದೇ ಇದ್ದರೆ ಮೂವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಆಲೋಚನೆ ಅವರದ್ದಾಗಿದೆ ಎಂದು ಮುಖ್ಯಮಂತ್ರಿ ಆಪ್ತ ಮೂಲಗಳು ತಿಳಿಸಿವೆ. ಎಲ್ಲವೂ ಯಡಿಯೂರಪ್ಪ ಅಂದುಕೊಂಡಂತೆ ನಡೆದರೆ ಇದೇ ಭಾನುವಾರ(ಸೆ.20) ಸಂಪುಟ …

Read More »

ರಾಜ್ಯ ಸರ್ಕಾರದಿಂದ ‘ರೈತರಿಗೆ ಸಿಹಿ ಸುದ್ದಿ’: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಈ ಸೇವೆ’

ಡಿಜಿಟಲ್‌ಡೆಸ್ಕ್‌: ಯಾವುದೇ ತರಹದ ರೋಗ ಮತ್ತು ಕೀಟಬಾಧೆ ಕಂಡುಬಂದಲ್ಲಿ ರೈತರ ಹೊಲಗಳಿಗೆ ಹೋಗಿ ಪ್ರಾತ್ಯಕ್ಷಿಕೆ ಮೂಲಕ ಅಗತ್ಯ ಸಲಹೆ, ನೆರವು ನೀಡಲು 108 ವಾಹನ ಮಾದರಿಯಲ್ಲಿ ಕೃಷಿ ಸಂಚಾರಿ ಲ್ಯಾಬ್ ಸಿದ್ಧಪಡಿಸಲಾಗುತ್ತಿದೆ. ಕೃಷಿಕರು ಕರೆ ಮಾಡಿದ ಕೂಡಲೆ ಕೃಷಿ ಪದವೀಧರರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನೊಳಗೊಂಡ ಈ ವಾಹನ ಹೊಲಗಳಿಗೆ ಹೋಗಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ತಮ್ಮ ಉಸ್ತುವಾರಿಯ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ. …

Read More »

ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ನಿಧನ

ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ (55) ಕೋವಿಡ್‌-19 ಮತ್ತು ಬಹು ಅಂಗಾಂಗಳ ವೈಫಲ್ಯದಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ 2 ರಂದು ಕೊರೊನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಅವರನ್ನು ಜೀವ ರಕ್ಷಕ ವ್ಯವಸ್ಥೆಯಲ್ಲಿಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10.31ರ ವೇಳೆಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅಶೋಕ ಗಸ್ತಿ ರಾಯಚೂರು ಜಿಲ್ಲೆಯವರು. ವಕೀಲರಾಗಿದ್ದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ …

Read More »

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ

ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ …

Read More »

ಸಂಪುಟ ಪುನಾರಚನೆ : ಯಾರು ಇನ್, ಯಾರು ಔಟ್..?

ಬೆಂಗಳೂರು,ಸೆ.  ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದು, ಹೆಚ್ಚು ಕ್ರಿಯಾಶೀಲರಲ್ಲದ ಹಾಗೂ ಒಂದು ವರ್ಷದಲ್ಲಿ ನಿರೀಕ್ಷೆಯಷ್ಟು ಸಾಧನೆ ಮಾಡದ 6 ರಿಂದ 8 ಸಚಿವರನ್ನು ಕೈಬಿಟ್ಟು, ಸಂಪುಟ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗಾಗಿ ಮೂರು ದಿನಗಳ ಕಾಲ ನವದೆಹಲಿಗೆ ತೆರಳಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರನ್ನು ಭೇಟಿಯಾಗಿ ಮಾತುಕತೆ …

Read More »