ಬೆಂಗಳೂರು, ಸೆ.12- ತಿಂಗಳಿಗೆ 4 ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಆದಿತ್ಯ ಅಗರ್ವಾಲ್ ಅದನ್ನು 15 ದಿನಗಳಿಗೆ ಖಾಲಿ ಮಾಡಿಬಿಡುತ್ತಿದ್ದ ಎಂಬ ಕುತೂಹಲಕಾರಿ ಅಂಶಗಳು ಪತ್ತೆಯಾಗಿವೆ. ಡ್ರಗ್ಸ್ ಜಾಲದಲ್ಲಿ ಬಂಧಿತನಾಗಿರುವ ಸಾಫ್ಟ್ವೇರ್ ಎಂಜಿನಿಯರ್ ಆದಿತ್ಯ ಅಗರ್ವಾಲ್ ಮತ್ತೊಬ್ಬ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಭಂಟ ಎನ್ನಲಾಗಿದೆ. ಈ ಇಬ್ಬರು ಜೀವನ ಚಿಕ್ಕದು. ಇರುವಷ್ಟು ದಿನ ಮಜಾ ಮಾಡಿ ಸಾಯಬೇಕು ಎಂಬ ಸಿದ್ಧಾಂತಕ್ಕೆ ಅಂಟಿಕೊಂಡಿದ್ದರು. ಹಾಗಾಗಿ ಇಬ್ಬರೂ ಮೋಜಿನ ಜೀವನದ ದಾಸರಾಗಿದ್ದರು. …
Read More »ಈ ಡ್ರಗ್ಸ್ ದಂಧೆಯಲ್ಲಿ ಜಮೀರ್ ಇರುವುದು ನೂರಕ್ಕೆ ನೂರು ಸತ್ಯ,32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ: ಮುತಾಲಿಕ್
ಮಂಡ್ಯ: ನಮ್ಮ ರಾಜ್ಯದಲ್ಲಿ 32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಈ ಬಗ್ಗೆ ನನಗೆ ಮಾಹಿತಿ ಇದೆ. ಸಂಪೂರ್ಣ ಮಾಹಿತಿ ಸಮೇತ ನಾನು ಇನ್ನೊಂದು ವಾರದಲ್ಲಿ ಆ ಲಿಸ್ಟ್ ನ್ನು ಹೋಂ ಮಿನಿಸ್ಟರ್ ಗೆ ಕೊಡುತ್ತೇನೆ. ನಾನು ಹಿಟ್ ಅಂಡ್ ರನ್ ಕೆಲಸ ಮಾಡಲ್ಲ. ಆಧಾರ ಸಹಿತವಾಗಿ ನಾನು ಬರುತ್ತೇನೆ. ನಟ ನಟಿಯರ …
Read More »ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್
ಮಳವಳ್ಳಿ, – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …
Read More »ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!
ನವದೆಹಲಿ ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್
ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ …
Read More »‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇಕು’
ಬೆಂಗಳೂರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ. ಪಕ್ಷದ ಶಾಸಕ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ …
Read More »ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »
Laxmi News 24×7