Breaking News

ರಾಜಕೀಯ

ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ ಕೈ ತಪ್ಪಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹೈಕಮಾಂಡ್ ಲಿಂಗಾಯತ ಹಾಗೂ ಉತ್ತರ ಕರ್ನಾಟಕ ಭಾಗದವರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾ ಚಾತುರ್ಯದ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ವಹಿಸಲು …

Read More »

ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ

ರಾಜಕೀಯ ಲಾಭಕ್ಕಾಗಿ ಪರಿಶಿಷ್ಟರ ಪಟ್ಟಿಯಲ್ಲಿ ಬೇರೆ ಜಾತಿಗಳನ್ನ ಸೇರಿಸಿದರೂ ಮೀಸಲಾತಿ ಹೆಚ್ಚಿಸಿ:ಶಾಸಕ ಸತೀಶ ಜಾರಕಿಹೊಳಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ತಮ್ಮ ರಾಜಕೀಯ ಲಾಭಕ್ಕಾಗಿ ಬೇರೆ ಬೇರೆ ಜಾತಿಗಳನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸುತ್ತವೆ.ಆದರೆ ಅದಕ್ಕೆ ಅನುಗುಣವಾಗಿ ಅಲ್ಲಿರುವ ಮೀಸಲಾತಿ ಪ್ರಮಾಣ ಏರಿಕೆ ಮಾಡುವುದಿಲ್ಲ ಇದರಿಂದ ಪರಿಶಿಷ್ಟರಿಗೆ ನಿರಂತರ ಸಮಸ್ಯೆ ಉಂಟಾಗುತ್ತಿದೆ ಆದ್ದರಿಂದ ರಾಜಕೀಯ ಪಕ್ಷಗಳು ಯಾವುದೇ ಜಾತಿಗಳನ್ನು ಪರಿಶಿಷ್ಟ ಪಟ್ಟಿಯಲ್ಲಿ ಸೇರಿಸಿದರೆ ಅಲ್ಲಿರುವ ಜಾತಿಗಳ …

Read More »

ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ

ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …

Read More »

ಕಾರ್ಮಿಕ ನೀತಿ ವಿರೋಧಿಸಿ ಕೆಪಿಸಿಸಿ ಕಾರ್ಮಿಕ ಘಟಕ ಪ್ರತಿಭಟನೆ..!!

   ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ರಸ್ತೆಗಿಳಿದ ಕೆಪಿಸಿಸಿ ಕಾರ್ಮಿಕ ಘಟಕ/ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ಜನ/ವೇತನ ಹೆಚ್ಚಳ ಮಾಡುವಂತೆ ಆಗ್ರಹ. ಕೇಂದ್ರ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಬೆಳಗಾವಿಯ ಕರ್ನಾಟಕ ಪ್ರಾದೇಶಿಕ ಕಾಂಗ್ರೇಸ್‍ನ ಕಾರ್ಮಿಕ ಘಟಕ ವತಿಯಿಂದ ಬೆಳಗಾವಿ ನಗರದಲ್ಲಿ ಭುದುವಾರ ದಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.   ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಎದುರುಗಡೆ ಜಮಾಯಿಸಿದ್ದ ಕಾಂಗ್ರೇಸ್ ಕಾರ್ಮಿಕ ಘಟಕ ಮುಖಂಡರು ಕೇಂದ್ರ ಸರಕಾರದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!!

ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆಯು ಗೋಕಾಕಿನಲ್ಲಿ ಜರುಗಿತು..!! ಗೋಕಾಕನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಶೇಷ ಸಭೆ ಆಯೋಜನೆ/ಅಂಬಿರಾವ್ ಪಾಟೀಲ ನೀಡಿದ್ರು ಸಭೆಗೆ ಚಾಲನೆ/ ಕಾಯ್ದೆ ಬಗ್ಗೆ ತಿಳುವಳಿಕೆ ನೀಡಿದ ನ್ಯಾಯವಾದಿಗಳು ಮಂಗಳವಾರ ದಂದು ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಧುರೀಣರಾದ ಶ್ರೀ ಅಂಬಿರಾವ್ ಪಾಟೀಲ,ಭಾಜಪ …

Read More »

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ  ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಪೌರತ್ವ ತಿದ್ದುಪಡಿ ವಿಧೇಯಕ ಅನುಷ್ಠಾನ/ ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ/“ಪೌರತ್ವ ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ,ಈ ದಿಸೆಯಲ್ಲಿ ಪ್ರತಿ ಮನೆ ಮನೆಗೆ ಹೋಗಿ ಜನರಲ್ಲಿ ಪೌರತ್ವ ಬಗ್ಗೆತಿಳುವಳಿಕೆ ಮೂಡಿಸಬೇಕು, ದೇಶದ ಹಿತದೃಷ್ಠಿಯಿಂದ ಕೇಂದ್ರ …

Read More »

ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ

  ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ

ಸಿ. ಎಂ. ಬಿಎಸ್​ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …

Read More »