ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ ಬೆಳಗಾವಿ, ಏ.೨೩(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭೇಟಿ ಮಾಡಿದರು. ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ಇರಿಸಲಾಗಿರುವ ಆಶ್ರಯ ಕೇಂದ್ರಕ್ಕೆ ಗುರುವಾರ …
Read More »ಸ್ಟೇ ಹೋಂ, ಸ್ಟೇ ಫಿಟ್ – ಪವರ್ಸ್ಟಾರ್ ಫಿಟ್ನೆಸ್ಗೆ ನೆಟ್ಟಿಗರು ಫಿದಾ…….
ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್ವುಡ್ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್ಡೌನ್ ಸಮಯದಲ್ಲಿ ಅಪ್ಪು …
Read More »ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.
ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …
Read More »ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ – ಇಂದು ಡಿಸ್ಚಾರ್ಜ್
ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ಬಾಧಿತರಾಗಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯ ಪೈಕಿ ಮೂವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಈ ಮೂವರನ್ನು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ …
Read More »ಯಾದಗಿರಿ:ವಾರಿಯರ್ಸ್ಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ….
ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು. ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು …
Read More »ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ
ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …
Read More »ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ
ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ. ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ. ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ …
Read More »ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್
ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್ನ ಬಸಪ್ಪ ಗಾರ್ಡನ್ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …
Read More »ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೋನಾ ಶತಕ ಸಿಡಿಸಿದ ಬಿಹಾರಿ ಕಾರ್ಮಿಕ, ಇಂದು 16 ಮಂದಿಗೆ ಸೋಂಕು..!
ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …
Read More »ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …
Read More »
Laxmi News 24×7