ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್ಡೌನ್ ಉಲ್ಲಂಘಿಸಿದ ಜಿಲ್ಲೆಯ 118 ಮಂದಿ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ …
Read More »ಶೋಭಾ ಕರಂದ್ಲಾಜೆ ವಿರುದ್ಧ ಎಚ್ಎಂ ರೇವಣ್ಣ ವಾಗ್ದಾಳಿ
ಚಿಕ್ಕಬಳ್ಳಾಪುರ: ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕೋವಿಡ್-19 ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ಎಂ ರೇವಣ್ಣ, ರಾಜ್ಯ ಸರ್ಕಾರದ ಕೆಲ ಸಚಿವರು ಸುಖಾಸುಮ್ಮನೆ ಬಾಯಿ ಹರಿದುಕೊಳ್ಳುತ್ತಿದ್ದಾರೆ, ಅದರಲ್ಲೂ ಶೋಭಾ ಕರಂದ್ಲಾಜೆ ಕೆಲವರನ್ನು ನೇಣು ಹಾಕಿ ಅಂತಿದ್ದಾರೆ. ಒಬ್ಬ ಜನಪ್ರತಿನಿಧಿಯಾದವರು ಈ ರೀತಿ ಮಾತನಾಡುವುದು ಸರಿಯಾ ಎಂದು ಪ್ರಶ್ನೆ ಮಾಡಿದರು. ಇದೇ …
Read More »ಓಟಿ ಕ್ವಾಟರ್ ಗೆ 800 ರೂ, ಬಿಯರ್ 1 ಸಾವಿರ ರೂ. ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ
ಕೋಲಾರ: ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಾಮಾನ್ಯ ದರಕ್ಕಿಂತ ಹತ್ತು ಪಟ್ಟು ಹೆಚ್ಚಳ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಹೊರವಲಯದ ಟಮಕದ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಬಾರ್ಗಳಲ್ಲಿ ಮದ್ಯ ಖಾಲಿಯಾಗಿದ್ದು, ಕೆಲವೇ ಬಾರ್ಗಳಲ್ಲಿ ಸ್ಟಾಕ್ ಇದೆ. ಬಾಗಿಲು ಕ್ಲೋಸ್ ಮಾಡಿ ಹಿಂದೆ ಬಾಗಿಲು ತೆರೆದು ಬಾರ್ ಮಾಲೀಕರು ಮಾರಾಟ ಮಾಡಲಾಗುತ್ತಿದೆ. ಹತ್ತು ಪಟ್ಟು ಹೆಚ್ಚಿನ …
Read More »ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ
ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ …
Read More »ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು”
ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು” ಚಡಚಣ: ಕೋವಿಡ್-19 ಮಹಾಮಾರಿಯ ಮರಣಮೃದಂಗದ ರುದ್ರ ನರ್ತನದ ಹಿನ್ನೆಲೆಯಲ್ಲಿ ಭಾರತದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಧ್ಯ ದೇಶಾದ್ಯಂತ ಪ್ರಧಾನಿ ಮೋದಿ’ರವರು ಲಾಕ್ ಡೌನ್ ಹಾಗೂ ಸಿಲ್ ಡೌನ್ ಆದೇಶ ಜಾರಿಯಲ್ಲಿದೆ… ಕೊರೋನಾ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರು ಯಾರು ಮನೆಗಳಿಂದ ಹೊರಬರದಂತೆ ಅದೇಷ್ಟು ಹೇಳಿದ್ರೂ, ಜನರು ಸುಖಾಸುಮ್ಮನೆ ಗುಂಪು ಗುಂಪಾಗಿ ಓಡಾಟ ಮಾತ್ರ …
Read More »ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …
Read More »ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..
ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ ಜೊತೆಗೆ ಅನೇಕ ಸಂಘ-ಸಂಸ್ಥೆಗಳು ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …
Read More »ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …
Read More »ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ
ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …
Read More »
Laxmi News 24×7