Breaking News

ರಾಜಕೀಯ

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ:ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ

ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ …

Read More »

ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ವಿಚಾರದಲ್ಲಿ …

Read More »

ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ನಿಂದ ಇಡೀ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕನೇಯ ವಾರ್ಡಿನ ಮಾಜಿ ಸದಸ್ಯೆ ಪರ್ವೀನ್ ಬಾನು ನೇತೃತ್ವದಲ್ಲಿ ಮಂಗಳಮುಖಿಯರು ಸೇರಿ ಈ ಕೆಲಸ ಮಾಡುತ್ತಿದ್ದಾರೆ. ಪಾದಾಚಾರಿ ರಸ್ತೆ, ಬಸ್ ಹಾಗೂ ರೈಲ್ವೇ ನಿಲ್ದಾಣ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ಹಸಿವಿನಿಂದ ಮಲಗಿಕೊಂಡಿದ್ದ …

Read More »

ಬೆಂಗಳೂರು: ವಿದೇಶದಿಂದ ಭಾರತಕ್ಕೆ ಮರಳಿದ್ದ 47 ಮಂದಿ ಕೊರೋನಾ ಶಂಕಿತರನ್ನು ಡಿಸ್ಚಾರ್ಜ್​ ಮಾಡಲಾಗಿದೆ.

ಬೆಂಗಳೂರು: ವಿದೇಶದಿಂದ ಭಾರತಕ್ಕೆ ಮರಳಿದ್ದ 47 ಮಂದಿ ಕೊರೋನಾ ಶಂಕಿತರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಕೊರೋನಾ ಶಂಕೆ ಹಿನ್ನಲೆಯಲ್ಲಿ ವಿದೇಶದಿಂದ ಬಾಂದವರನ್ನು 16 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಇದೀಗ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮನೆ ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ, ಜಪಾನ್, ದುಬೈ, ಸಿಂಗಾಪುರ್ ಸೇರಿ‌ 6 ದೇಶಗಳಿಂದ 47 ಮಂದಿ ಭಾರತೀಯರು ಆಗಮಿಸಿದ್ದರು. ಕೊರೋನಾ ಶಂಕೆ ಹಿನ್ನೆಲೆ, ಸಪ್ತಗಿರಿ ಆಸ್ಪತ್ರೆಯಲ್ಲಿ ಕಳೆದ …

Read More »

ಜಮಾತ್‍ಗೆ ಹೋದವರಿಂದಲೇ ದೇಶಾದ್ಯಂತ ಕೊರೊನಾ ಹಬ್ಬಿಸುವ ದುಷ್ಕೃತ್ಯ: ಕರಂದ್ಲಾಜೆ

ಚಿಕ್ಕಮಗಳೂರು: ದೆಹಲಿಯ ನಿಜಾಮುದ್ದೀನ್ ತಬ್ಲಿಘಿ  ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಮಾತನಾಡಿದ ಅವರು, ಜಮಾತ್ ಸಭೆಗೆ ಹೋದ ಹಲವರು ನಾಪತ್ತೆಯಾಗಿದ್ದಾರೆ. ಇದರ ಹಿಂದೆ ಕೊರೊನಾ ಜಿಹಾದಿಯ ವಾಸನೆ ಕೂಡ ಬಡಿಯುತ್ತಿದೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಡುತ್ತಿವೆ. ಯಾರು ದೆಹಲಿಗೆ ಹೋಗಿದ್ದರೋ ಅವರನ್ನ ಪತ್ತೆ ಹಚ್ಚುವ …

Read More »

ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ

ಬೆಳಗಾವಿ -: ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ, ಬೆಳಗುಂದ ಗ್ರಾಮದಲ್ಲಿ ಮತ್ತು ಬೆಳಗಾವಿ ನಗರದ ಕ್ಯಾಂಪ್ ನ ಕಸಾಯಿಗಲ್ಲಿಯಲ್ಲಿ ಕರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ(ಪಾಸಿಟಿವ್) ಸದರಿ ಗ್ರಾಮ ಮತ್ತು ಕಸಾಯಿಗಲ್ಲಿಯ ಭೌಗೋಳಿಕ ಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶವಾಗುವವರೆಗೆ ನಿಷೇಧಿತ (ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಈ ಮೂರೂ ಪ್ರದೇಶಗಳ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸಂಬಂಧಿಸಿದ ಗ್ರಾಮ ಮತ್ತು ಪ್ರದೇಶದ …

Read More »

ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತ:ಸಿದ್ಧಾರೂಢ ಸ್ವಾಮಿ

ಹುಬ್ಬಳ್ಳಿ: ಕೋವಿಡ್ 19 ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತಗೊಂಡಿದೆ. ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತ,ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ …

Read More »

ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ.

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕೆಲ ನಟ-ನಟಿಯರು ಮನೆಯಲ್ಲಿ ಇರಿ, ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಸ್ಯಾಂಡಲ್‍ವುಡ್ ನಟಿಯೊಬ್ಬರು ಲಾಕ್‍ಡೌನ್ ಇದ್ದರೂ ಜಾಲಿ ರೈಡ್ ಮಾಡಿ ಅಪಘಾತ ಮಾಡಿದ್ದಾರೆ. ನಟಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ. ಇಂದು ನಸುಕಿನ ಜಾವ 3 ಗಂಟೆಗೆ ಈ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು …

Read More »

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌…

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌… ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಯಮನಾಪು ಮತ್ತು ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ …

Read More »