Breaking News

ರಾಜಕೀಯ

ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿ

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು ಒಂದು ವೇಳೆ ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಮಹಿಳಾ …

Read More »

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ ಹುಬ್ಬಳ್ಳಿ: ಶಬರಿಮಲೆ ಋತುವಿನಲ್ಲಿ ಮತ್ತು ಮುಂಬರುವ ಪೊಂಗಲ್ ಹಬ್ಬದ ಸಮಯದಲ್ಲಿ ಭಕ್ತರಿಂದ ಹೆಚ್ಚಿನ ಪ್ರಯಾಣದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಗಳ ಅವಧಿಯನ್ನು ಮುಂದುವರಿಸಲಾಗುತ್ತಿದೆ. 1. ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು, ಈ ಹಿಂದೆ 28.12.2025ರವರೆಗೆ ಓಡಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ಸೇವೆಯನ್ನು ಈಗ 04.01.2026 ರಿಂದ 25.01.2026 …

Read More »

ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ

ಬೆಳಗಾವಿಯ ಹಲಗಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜ ಆಧ್ಯಾತ್ಮಿಕ ಅನುಸಂಧಾನ ಫೌಂಡೇಶನ್ ವತಿಯಿಂದ ನಡೆದ ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ ಹಾಗೂ ಸರ್ವದೋಷ ಪ್ರಾಯಶ್ಚಿತ್ತ ವಿಧಾನ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ‌ ಈ ವೇಳೆ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು, ಪರಮಪೂಜ್ಯ ಬಾಲಾಚಾರ್ಯ ಡಾ.ಶ್ರೀ 108 ಸಿದ್ದಸೇನ ಮಹಾರಾಜರು, ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಲಿಂಗರಾಜ ಕಾಲೇಜು ಸತತ 9 ನೇ ಬಾರಿ ಚಾಂಪಿಯನ್

ಬೆಳಗಾವಿ: ವಿದ್ಯಾರ್ಥಿಗಳು ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್, ಒಲಂಪಿಕ್ಸ್ ಕ್ರೀಡಾಕೂಟಗಳವರೆಗೂ ತಲುಪಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶವನ್ನು ಪ್ರತಿನಿಧಿಸಿ ಆ ಮೂಲಕ ದೇಶದ ಗೌರವವನ್ನು ಜಾಗತಿಕವಾಗಿ ರಾರಾಜಿಸುವಂತೆ ಮಾಡಬೇಕೆಂದು ಕೆ.ಎಲ್.ಇ ಸಂಸ್ಥೆಯ ಕಾರ್ಯಾದ್ಯಕ್ಷ ಡಾ.ಪಭಾಕರ ಕೊರೆಯವರು ಹೇಳಿದರು. ಸಲ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ 9 ನೇ ಅಥ್ಲೆಟಿಕ್ ಕ್ರಿಡಾಕೂಟದಲ್ಲಿ 17 ದಾಖಲೆಗಳೊಂದಿಗೆ ಸತತ 9 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡ ಕೆ.ಎಲ್.ಇ ಸಂಸ್ಥೆಯ …

Read More »

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸಿಎಂ, ಡಿಸಿಎಂ ಜೊತೆ ಚರ್ಚೆ: ವೆಂಕಟೇಶ ಪ್ರಸಾದ್

ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು. ಬೆಳಗಾವಿ ನಗರದಲ್ಲಿರುವ ಕೆಎಸ್​ಸಿಎ ಮೈದಾನಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆ ಬಳಿಕ ಯಾವುದೇ …

Read More »

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಕಾರಾಗೃಹದಲ್ಲಿರುವ 862 ಕೈದಿಗಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ನಿಟ್ಟಿನಲ್ಲಿ ನಾಳೆ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹದ ಅಧೀಕ್ಷಕರು ಸೇರಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ …

Read More »

ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್

ಬೆಳಗಾವಿ: ಈ ಸದನದಲ್ಲಿ ನಿಜವಾದ ಪ್ರತಿಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಬಿಜೆಪಿ ನಾಯಕರ ಕಾಲೆಳೆದರು. ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಸ್ಪೀಕರ್ ಯು. ಟಿ. ಖಾದರ್ ಅವಕಾಶ ಕೊಟ್ಟರು. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪಿಸಿ, ಎಲ್ಲವನ್ನೂ ಬದಿಗೊತ್ತಿ ಉತ್ತರ ಕರ್ನಾಟಕ ಭಾಗದ ಚರ್ಚೆ ಮಾಡುತ್ತೇವೆ ಅಂತಾ ಸಚಿವರೇ ಹೇಳಿದ್ದಾರೆ. ಹೀಗಾಗಿ, ಉತ್ತರ ಕರ್ನಾಟಕ ಭಾಗದ ಬಗ್ಗೆ …

Read More »

ಸುವರ್ಣಸೌಧದ ಮುಂದೆ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು.‌ ಕಲಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದಕುಮಾರ್ ರೇವಪ್ಪ ಬಮ್ಮನ್ ಕುಟುಂಬಸ್ಥರು ವಿಶೇಷ ಆಸಕ್ತಿಯಿಂದ ತಯಾರು ಮಾಡಿಸಿರುವ 75 ಅಡಿ ಉದ್ದ, 50 ಅಡಿ ಅಗಲ ಗಾತ್ರದ ಈ ರಾಷ್ಟ್ರಧ್ವಜ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು. ಬೃಹದಾಕಾರದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಯು. ಟಿ. …

Read More »

ರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !!

ರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !! ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಇಂದು ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆಯಲ್ಲಿ ಅರಭಾವಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಬೆಮೂಲ್ ಅಧ್ಯಕ್ಷರಾದ #ಸನ್ಮಾನ್ಯ_ಶ್ರೀ_ಬಾಲಚಂದ್ರ_ಅಣ್ಣಾ_ಜಾರಕಿಹೊಳಿ ರವರು, ಬಳಿಕ …

Read More »

ಸಾರಿಗೆ ಬಸ್​ ಪಲ್ಟಿಯಾಗಿ ಕಂಡಕ್ಟರ್ ಸಾವು, ಹಲವರಿಗೆ ಗಾಯ

ರಾಯಚೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸೂಗೂರು ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ. ಬಸವರಾಜ್​ (36) ಮೃತ ನಿರ್ವಾಹಕ ಎಂದು ಗುರುತಿಸಲಾಗಿದೆ. ಇವರು ಮೂಲತಃ ಲಿಂಗಸೂಗೂರು ತಾಲೂಕಿನವರು ಎಂದು ತಿಳಿದು ಬಂದಿದೆ. ಅಂಜಳ – ದೇವದುರ್ಗ ಮಾರ್ಗದ ಬಸ್ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದದಲ್ಲಿ ತೀವ್ರ ಗಾಯಗೊಂಡಿದ್ದ ಇವರನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಫಂದಿಸದೆ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ, …

Read More »