Breaking News

ರಾಜಕೀಯ

ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್​ಎನ್​ ಕಿರಣಶಂಕರ್ …

Read More »

ಇಂದು ದರ್ಶನ್​ ಜಾಮೀನು ತೀರ್ಪು ಪ್ರಕಟ

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಕೇಸ್​ನ ಕಾರಣದಿಂದ ಅವರು ಒಪ್ಪಿಕೊಂಡ ಸಿನಿಮಾಗಳು ಸಂಕಷ್ಟದಲ್ಲಿ ಇವೆ. ಇಂದು (ಡಿಸೆಂಬರ್ 13) ಅವರಿಗೆ ಪ್ರಮುಖ ದಿನ ಆಗಲಿದೆ. ದರ್ಶನ್​ಗೆ ಜಾಮೀನು …

Read More »

ಪಂಚಮಸಾಲಿ 2A ಮೀಸಲಾತಿ ಕಿಚ್ಚು ಬೆಳಗಾವಿ ಅಧಿವೇಶನವನ್ನೂ ಬಿಟ್ಟಿಲ್ಲ.

ಬೆಳಗಾವಿ, ಡಿಸೆಂಬರ್ 13: ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ವಿಚಾರವಾಗಿ ಚರ್ಚೆ ನಡೆಸುವಂತೆ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಗುರುವಾರ ಪಟ್ಟು ಹಿಡಿದರು. ವಿಧಾನಪರಿಷತ್‌ನಲ್ಲೂ ಇದೇ ರೀತಿ ನಡೆಯಿತು. ಇದೇ ವೇಳೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಲಾಠಿಚಾರ್ಜ್ ಮಾಡಿದ್ದನ್ನು ಸರ್ಮಥಿಸಿಕೊಂಡರು. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದವರನ್ನು ಬಿಟ್ಟು ಬಿಡಬೇಕಿತ್ತಾ ಎಂದು ಪ್ರಶ್ನಿಸಿದರು. ಗೃಹ ಸಚಿವರ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೋರಾಟ ಮಾಡುವುದು ತಪ್ಪಲ್ಲ. ಹಿಂದೆ …

Read More »

ಮುಗಿಯದ ಇ-ಖಾತಾ ಸಂಕಷ್ಟ, ಸರ್ವರ್​ ಸಮಸ್ಯೆ,

ಡಿಸೆಂಬರ್​ 13: ರಾಜಧಾನಿ ಬೆಂಗಳೂರಲ್ಲಿ (Bengaluru) ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-Khata) ಕಡ್ಡಾಯಗೊಳಿಸಲಾಗಿದೆ. ಇತ್ತ, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್​ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ.   ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿಗೆ ಸಿಲುಕಿರುವ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.ಸದ್ಯ …

Read More »

ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ

ಡಿಸೆಂಬರ್​ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ …

Read More »

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ

ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …

Read More »

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ …

Read More »

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​: ಪ್ರಕರಣವೇನು?

ಬೆಂಗಳೂರು, ಡಿಸೆಂಬರ್​​ 12: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್​ ರೀಲಿಫ್ ಸಿಕ್ಕಿದೆ. ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ …

Read More »

ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ

ಕಾಂಗ್ರೆಸ್‌ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಪರಿಷತ್‌ ಸದಸ್ಯರು ಉಪಸ್ಥಿತರಿದ್ದರು. #CongressFailsKarnataka #PanchamasaliProtest

Read More »

ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರ ಪ್ರತಿಭಟನೆ

ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »