ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ. ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ. ಆದ್ದರಿಂದ ಸರ್ಕಾರ …
Read More »ಕೃಷ್ಣೆ ಮಡಿಲ ಕುವರನಿಗೆ ‘ರಾಜ್ಯೋತ್ಸವ’ ಗರಿ
ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಮೂಲದವರಾದ, ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. 1955ರ ಆಗಸ್ಟ್ 1ರಂದು ತವನಪ್ಪ ಹಾಗೂ ಸಂಕವ್ವ ದಂಪತಿ ಪುತ್ರರಾಗಿ ಬಾಳಾಸಾಹೇಬ ಜನಿಸಿದರು. ಬಾಗಲಕೋಟೆಯ ಎಸ್.ಸಕ್ರಿ ಪದವಿಪೂರ್ವ ಕಾಲೇಜಿನಲ್ಲಿ ಭೂಗೋಳ ವಿಜ್ಞಾನ ವಿಷಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 8 ಕಥಾ ಸಂಕಲನಗಳು, 10 ಕಾದಂಬರಿಗಳು, 6 ವಿಮರ್ಶಾ ಕೃತಿಗಳು, ಎರಡು ಸಂಶೋಧನಾ ಗ್ರಂಥ, ಎರಡು …
Read More »ವಕ್ಫ್ ಆಸ್ತಿ ಗೊಂದಲ ನಿವಾರಿಸದಿದ್ದರೆ ಹೋರಾಟ: ರಾಜೂಗೌಡ
ಹುಣಸಗಿ: ಸುರಪುರ ಮತಕ್ಷೇತ್ರದ ಸೇರಿ ಯಾದಗಿರಿ ಜಿಲ್ಲೆಯಲ್ಲಿ ಸ್ವಂತ ಮಾಲಿಕತ್ವ ಹೊಂದಿದ ರೈತನ ಜಮೀನನ್ನು ವಕ್ಫ್ ಎಂದು ಪಹಣಿ ನಮೂದಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇದನ್ನು ತಕ್ಷಣವೇ ಸರಿಪಡಿಸದಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಹಲವೆಡೆ ರೈತರ ಪಹಣಿಯ ಕಾಲಂ ನಂ 11 ರಲ್ಲಿ ವಕ್ಫ್ ಎಂದು ನಮೂದಾಗಿರುವ ಸಂದರ್ಭದಲ್ಲಿ …
Read More »‘ಬೈ ಎಲೆಕ್ಷನ್’ ನಂತರ ರಾಜ್ಯದಲ್ಲಿ ‘ರಾಜ್ಯಪಾಲರ ಆಳ್ವಿಕೆ’ ಜಾರಿ : HD K
ರಾಮನಗರ : ಕೆಲವು ದಿನಗಳ ಹಿಂದೆ 2028 ರ ವರೆಗೆ ಕಾಂಗ್ರೆಸ್ ಸರ್ಕಾರ ಇರಲ್ಲ, ಬಳಿಕ ನಾನೇ ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು ಬಳಿಕ ರಾಜ್ಯಪಾಲರ ಆಳ್ವಿಕೆ ಜಾರಿಯಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದರು. …
Read More »ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಭಾಗ್ಯಾ ಮಹೇಶ ಮುರಾಳ ಎನ್ನುವವರ ಮನೆಯ ಮುಂದೆ ಇದ್ದ ಭಾರಿ ಎತ್ತರದ ತೆಂಗಿನ ಮರ ಏರಿ ತೆಂಗಿನ ಕಾಯಿ ಮತ್ತು ಒಣಗಿದ ಗರಿ ಕೆಳಗೆ ಇಳಿಸುವಾಗ ಮೇಲಿಂದ ಜಾರಿ ನೆಲಕ್ಕೆ ಬಿದ್ದು 21 ವರ್ಷದ ಅವಿವಾಹಿತ ಯುವಕ ಸಂತೋಷ ಶರಣಪ್ಪ ವಾಲಿಕಾರ ಸಾವನ್ನಪ್ಪಿರುವ ಘಟನೆ ಬುಧವಾರ(ಅ.30) ನಡೆದಿದೆ. ಸಂತೋಷ ನೆರಬೆಂಚಿ ಗ್ರಾಮದವನಾಗಿದ್ದು ತನ್ನೂರಲ್ಲೇ ಕುರಿ ಕಾಯುತ್ತಿದ್ದ. ತೆಂಗಿನ ಮರ ಸ್ವಚ್ಛಗೊಳಿಸಿದರೆ ಕೂಲಿ ಸಿಗುತ್ತದೆ ಎನ್ನುವ …
Read More »ದೇವೇಗೌಡರ ಆರೋಗ್ಯದ ಬಗ್ಗೆ ಅಪಹಾಸ್ಯ; ಡಿ.ಕೆ.ಸುರೇಶ್ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಂಬುಲೆನ್ಸ್ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. Contentsಜೆಡಿಎಸ್ ತಿರುಗೇಟುಆತ್ಮಸಾಕ್ಷಿ ಪ್ರಶ್ನೆ ಮಾಡಿಕೊಳ್ಳಿ ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಜೆಡಿಎಸ್ ತಿರುಗೇಟು ದೇವೇಗೌಡರು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ …
Read More »ವಕ್ಫ್ ಆಸ್ತಿ ವಿಚಾರ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ:
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ಕಾಯ್ದೆಯಿಂದ ತೊಂದರೆಗೆ ಒಳಗಾದ ರೈತರ ಅಹವಾಲು ಆಲಿಸಲು ಬಿಜೆಪಿ ತಂಡ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸರ್ಕಾರ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ. ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿಲ್ಲ:ಕಾಫಿ-ಟೀ ಜತೆ ಮಾಹಿತಿ ಕೊಡಲು ಸೂಚನೆ:ನಮಗೆ ಯಾವ ರೈತರ ಜಮೀನು ಬೇಡ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೊಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ …
Read More »2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 69 ಸಾಧಕರಿಗೆ ಪ್ರಶಸ್ತಿ
ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ಪ್ರಕಟವಾಗಿದ್ದು, ಈ ಬಾರಿ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.30) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 01 ರಂದು ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರಿಗೆ …
Read More »ಸರ್ಕಾರಿ ನೌಕರರಿಗೆ ನವೆಂಬರ್ 1ರಿಂದ ಈ ನಿಯಮ ಕಡ್ಡಾಯ
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಆದೇಶಿಸಿದೆ. ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಕೊರಳುದಾರವನ್ನು (ಟ್ಯಾಗ್) ನೀಡಲಾಗುತ್ತಿದೆ. ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬುಧವಾರ ಆದೇಶವನ್ನು ಹೊರಡಿಸಿದೆ. ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ …
Read More »ಕೊನೆಗೂ ನಟ ದರ್ಶನ್ಗೆ ಜಾಮೀನು ಮಂಜೂರು, ಜೈಲಿನಿಂದ ಇಂದೇ ಬಿಡುಗಡೆ
ಬೆಂಗಳೂರು,ಅ.30- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು …
Read More »
Laxmi News 24×7