Breaking News

ರಾಜಕೀಯ

ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು : ತಾವು ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನಿರಂತರವಾಗಿ ತಮ್ಮ ಹಾಗೂ, ತಮ್ಮ ಸಮುದಾಯದ, ಕುಟುಂಬದ ವಿರುದ್ಧ ಅವಹೇಳನಕಾರಿ ಬಿಜೆಪಿಯು ಕೋಮುವಾದಿ ಹೇಳಿಕೆ ನೀಡುತ್ತಿದೆ ಎಂದು ಆರೋಪಿಸಿ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ (ತಬಸುಮ್ ರಾವ್) ಅವರು ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.     ಕೆಲವೊಮ್ಮೆ ಮಹಿಳೆಯರ ಮೇಲೆ ಹಲ್ಲೆ ಮಾಡಿದರೆ ಅದು ತಪ್ಪೇ..ಅದು ಕ್ಷುಲ್ಲಕವಾದರೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು, ನಿಂದಿಸುವುದು …

Read More »

ಸವದತ್ತಿ | ಮರ ಕಡಿದು ಅಕ್ರಮ ಸಾಗಣೆ : ಗ್ರಾಮಸ್ಥರ ಆಕ್ರೋಶ

ಸವದತ್ತಿ: ತಾಲ್ಲೂಕಿನ ಹಿರೇಕುಂಬಿ ಗ್ರಾಮದ ಹೊರವಲಯದಲ್ಲಿ ಕಾಲುವೆ ಬದಿ ಇದ್ದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆ ಹಿಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾಲುವೆ ಬದಿಯಲ್ಲಿ ಬೆಳೆದಿದ್ದ ಬೃಹದಾಕಾರದ ನೀಲಗಿರಿ ಮರಗಳನ್ನು ಇಲಾಖೆಯ ಸಿಬ್ಬಂದಿ ಸಮ್ಮುಖದಲ್ಲಿ ಕಡಿದು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಅನುಮಾನಗೊಂಡ ಗ್ರಾಮಸ್ಥರು ವಾಹನವನ್ನು ಅಡ್ಡಗಟ್ಟಿ ವಿಚಾರಿಸಿದರು. ಈ ವೇಳೆ ಇದು ಅಕ್ರಮ ಸಾಗಣೆ ಎಂದು ಸಂಶಯ ವ್ಯಕ್ತಪಡಿಸಿ ಘಟನಾ ಸ್ಥಳದಲ್ಲಿ ಹಾಜರಿದ್ದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ‘ತಾಲ್ಲೂಕಿನಾದ್ಯಂತ …

Read More »

ಭಾರತದೆಡೆ ಹೆಚ್ಚಿದ ವಿಶ್ವದ ನಿರೀಕ್ಷೆ: ಗಡ್ಕರಿ

ನಿಪ್ಪಾಣಿ: ‘ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿಭಾವಂತ ಮಾನವಶಕ್ತಿ ಕೇವಲ ಭಾರತದಲ್ಲಿ ಮಾತ್ರ ಇರುವುದರಿಂದ ಇಡಿ ವಿಶ್ವವು ಭಾರತವನ್ನು ಬಹು ನಿರೀಕ್ಷೆಯಿಂದ ಗಮನಿಸುತ್ತಿದೆ. ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಯಾರಿಸುವ ಕಾರ್ಯ ಕೆ.ಎಲ್.ಇ.ಯಂತಹ ಶಿಕ್ಷಣ ಸಂಸ್ಥೆಗಳು ಈ ಭಾಗದಲ್ಲಿ ಮಾಡುತ್ತಿವೆ’ ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತೀನ ಗಡ್ಕರಿ ಹೇಳಿದರು.   ನಿಪ್ಪಾಣಿಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಡಾ. ಪ್ರಭಾಕರ ಕೋರೆ …

Read More »

ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಕೊಪ್ಪಳ : ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. …

Read More »

ಖರ್ಗೆ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಸತೀಶ ಜಾರಕಿಹೊಳಿ

ನಿಪ್ಪಾಣಿ: ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ. ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ …

Read More »

ಬೆಳಗಾವಿ ದಕ್ಷಿಣ ಸಬ್ ರೆಜಿಸ್ಟಾರ್ ಕಾರ್ಯಾಲಯದಲ್ಲಿ ಏಜೆಂಟರ ದರ್ಬಾರ್…!!!

ಬೆಳಗಾವಿ ದಕ್ಷಿಣ ಸಬ್ ರೆಜಿಸ್ಟಾರ್ ಕಾರ್ಯಾಲಯದಲ್ಲಿ ಏಜೆಂಟರ ದರ್ಬಾರ್…!!! ಜನರಿಗೊಂದು ನ್ಯಾಯ… ಏಜೆಂಟರಿಗೊಂದು ನ್ಯಾಯ…!!!?? ನ್ಯಾಯಕ್ಕಾಗಿ ಸಬ್ ರಜಿಸ್ಟರಗೆ ಮುತ್ತಿಗೆ ಹಾಕಿದ ನ್ಯಾಯವಾದಿಗಳು….#innews ಬೆಳಗಾವಿ ದಕ್ಷಿಣ ಉಪನೋಂದಣಿ ಕಾರ್ಯಾಲಯದಲ್ಲಿ ನಡೆಯುತ್ತಿರುವ ಏಜೆಂಟರ ದರ್ಬಾರ ಮತ್ತು ಜನಸಾಮಾನ್ಯರಿಗಾಗಿ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ವಕೀಲ ಸಂಘಟನೆಯ ವತಿಯಿಂದ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

Read More »

ನಕ್ಷತ್ರ ಆಮೆಗಳನ್ನು ಸಾಗಿಸುತ್ತಿದ್ದ ಮೂವರ ಬಂಧನ

ಕೊಳ್ಳೇಗಾಲ,ಸೆ.19- ನಕ್ಷತ್ರ ಆಮೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕು ಕುಳ್ಳೂರು ಗ್ರಾಮದ ಮಾದೇಶ್‌ (32) , ತಮಿಳುನಾಡು ಮೂಲದ ಶಿವಕುಮಾರ್‌ (22), ಪಿರಿಯಪಟ್ಟಣದ ಮೂಲದ ಜಾಕಿರ್‌ ಷರೀಪ್‌ (31) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಪಟ್ಟಣದ ಮುಡಿಗುಂಡ ಆದರ್ಶ ಶಾಲೆಯ ಮಾರ್ಗದಲ್ಲಿ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ …

Read More »

ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ವಾಟ್ಸಾಪ್​​​​ನಲ್ಲೇ ಬುಕಿಂಗ್ ವ್ಯವಸ್ಥೆ

ತಿರುಪತಿ,ಅ.4-ತಿರುಮಲ ಶ್ರೀಗಳ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಶಿಫಾರಸ್ಸುಗಳಿಲ್ಲದೆ ಜನಸಾಮಾನ್ಯರು ಸುಲಭವಾಗಿ ತಿರುಮಲ ಶ್ರೀಕ್ಷೇತ್ರಕ್ಕೆ ಭೇಟಿ ನೀಡುವಂತೆ ಮುಂಗಡ ಬುಕಿಂಗ್‌ ವ್ಯವಸ್ಥೆ ಜಾರಿಗೆ ತರಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇತ್ತೀಚಿನ ಪರಿಶೀಲನೆಯಲ್ಲಿ ಹಲವು ಸಲಹೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.   ವಿಶ್ವಾದ್ಯಂತ ಲಕ್ಷಾಂತರ ಜನರ ದೈನಂದಿನ ಜೀವನದ ಭಾಗವಾಗಿರುವ ವಾಟ್ಸಾಪ್‌ ಮೂಲಕವೇ ಟಿಕೆಟ್‌ ಬುಕ್‌ ಮಾಡಲು ಅನುಕೂಲವಾಗುವಂತೆ ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ವಾಟ್ಸಾಪ್‌ …

Read More »

ತೀವ್ರಗೊಂಡ ಪಿಡಿಒ,ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು, ಅ.4- ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.   ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ …

Read More »

ಮಂತ್ರಾಲಯ’ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಮಂತ್ರಾಲಯ(ಸಚಿವಾಲಯ)ದ ಛಾವಣಿಯಿಂದ ಜಿಗಿದಿದ್ದು, ಕೆಳಗೆ ಸುರಕ್ಷತಾ ನೆಟ್ ಅಳವಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರವಾದ ಮಂತ್ರಾಲಯದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಅವರು ಜಿಗಿದಿದ್ದಾರೆ ಎನ್ನಲಾಗಿದೆ. ಮೂರನೇ ಮಹಡಿಯಿಂದ ಜಿಗಿದ ಬಳಿಕ ನೆಟ್​ನಲ್ಲಿ ಸಿಲುಕಿದ್ದ ಜಿರ್ವಾಲ್ ಅವರನ್ನು …

Read More »