ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್ ಹೇಳಿದ್ದಾರೆ. 402 ಪಿಎಸ್ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …
Read More »ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್ ಹಾನಿ,1 ಕಾರು ಜಖಂ
ನಾಗಮಂಗಲ (ಮಂಡ್ಯ): ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭ ಕೋಮುಸಂಘರ್ಷ ಏರ್ಪಟ್ಟ ಪರಿಣಾಮ ನಾಗಮಂಗಲ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದರೂ ಸೆ. 14ರ ವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗಲಭೆಯಲ್ಲಿ 6 ಅಂಗಡಿಗಳು ಸುಟ್ಟು ಕರಕಲಾಗಿವೆ. 7 ಬೈಕ್ ಹಾನಿಗೀಡಾಗಿವೆ. 1 ಕಾರಿನ ಗಾಜು ಪುಡಿಗೈಯಲಾಗಿದೆ. ಪ್ರಕರಣ ಸಂಬಂಧ ಗುರುವಾರ 150 ಮಂದಿ ವಿರುದ್ಧ ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 53ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ …
Read More »ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
ಕುಷ್ಟಗಿ (ಕೊಪ್ಪಳ): ಗಣೇಶ ಮೂರ್ತಿ ವಿಸರ್ಜನೆ ವೇಳೆ ನಟರಾದ ದರ್ಶನ್, ಸುದೀಪ್ ಹಾಡು ಹಾಕುವ ವಿಚಾರಕ್ಕೆ ಉಂಟಾದ ಅಭಿಮಾನಿಗಳ ವಾಗ್ವಾದದಿಂದ ವಿಸರ್ಜನ ಮೆರವಣಿಗೆ ಮೊಟಕುಗೊಂಡು ಗಣೇಶ ಮೂರ್ತಿ ಬೆಳಗಿನವರೆಗೂ ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಉಳಿದ ಘಟನೆ ಕಂದಕೂರು ಗ್ರಾಮದಲ್ಲಿ ನಡೆದಿದೆ. ಈಶ್ವರ ದೇವಸ್ಥಾನದಲ್ಲಿ ಐದನೇ ದಿನ ಬುಧವಾರ ರಾತ್ರಿ ಗಣೇಶ ವಿಸರ್ಜನ ಮೆರವಣಿಗೆ ವೇಳೆ ಡಿಜೆ ಧ್ವನಿಗೆ ಯುವಕರು ಕುಣಿಯುತ್ತಿದ್ದ ವೇಳೆ ದರ್ಶನ್, ಸುದೀಪ್ ಹಾಡು ಮೊದಲು ಹಾಕಬೇಕೆಂದು ಎರಡು ಬಣಗಳು …
Read More »ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ
ಹೊಸದಿಲ್ಲಿ: ಪುಣೆಯಲ್ಲಿ ಗಣೇಶ ವಿಗ್ರಹ ವಿಸರ್ಜನೆ ಆಚರಣೆಗಳು ಸೇರಿದಂತೆ ಉತ್ಸವದಲ್ಲಿ ಭಾಗಿಯಾಗಿರುವ ‘ಡೋಲು-ತಾಸೆ’ (dhol-tasha)ತಂಡಗಳಲ್ಲಿ 30 ಜನರ ಸಂಖ್ಯೆಯನ್ನು ನಿರ್ಬಂಧಿಸುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ( NGT) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ(ಸೆ12) ತಡೆಯಾಜ್ಞೆ ನೀಡಿದೆ. ಎನ್ಜಿಟಿ ಆದೇಶದ ವಿರುದ್ಧ ಪುಣೆ ಮೂಲದ ‘ಧೋಲ್-ತಾಶಾ’ ಗುಂಪಿನ ಅರ್ಜಿಯನ್ನು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರ್ಧರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ …
Read More »ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ ಕಚ್ಚಾತೈಲದ ದರ ಸ್ವಲ್ಪ ಸಮಯದವರೆಗೆ ನಿರಂತರವಾಗಿ ಕಡಿಮೆಯಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾತೈಲ ದರ ದೀರ್ಘಕಾಲದವರೆಗೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಲು ಪರಿಗಣಿಸಬಹುದು ಎಂದು ಹೇಳಿದ್ದಾರೆ. ಸರ್ಕಾರ ಪೆಟ್ರೋಲ್, …
Read More »ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಬೆಂಗಳೂರು: ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ಮುಕ್ತಾಯಗೊಂಡಿದ್ದು, ಅರ್ಜಿ ಕುರಿತು ಹೈಕೋರ್ಟ್ ಸದ್ಯ ತೀರ್ಪು ಕಾಯ್ದಿರಿಸಿದೆ. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್, ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತ್ತು. ರಾಜ್ಯಪಾಲರ ಹಾಗೂ ಮುಖ್ಯಮಂತ್ರಿಗಳ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಸುದೀರ್ಘ ವಿಚಾರಣೆಯ ಬಳಿಕ ಇದೀಗ ತೀರ್ಪನ್ನು ಕಾಯ್ದಿರಿಸಿದೆ. ಸಿಎಂ …
Read More »ಹಾರ್ದಿಕ್ ಮಾಜಿ ಪತ್ನಿ ಮುಂಬೈನಲ್ಲಿ ಬಾಯ್ ಫ್ರೆಂಡ್ ಜೊತೆ ತಿರುಗಾಟ!
ಮುಂಬೈ: ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ, ಮಾಡೆಲ್ ನತಾಶಾ ಸ್ಟಾಂಕೋವಿಕ್ ಮುಂಬೈನಲ್ಲಿದ್ದು, ಆಕೆ ಗೆಳೆಯ ಅಲೆಕ್ಸಾಂಡರ್ ಇಲಾಕ್ ಜೊತೆ ಸುತ್ತಾಟ ನಡೆಸುತ್ತಿದ್ದು ಗಮನಸೆಳೆಯುತ್ತಿದ್ದಾಳೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿದೆ. ನತಾಶಾ ಎರಡು ತಿಂಗಳ ಕಾಲ ಸರ್ಬಿಯಾದಲ್ಲಿ ತಂಗಿದ್ದು ಆಕೆ ಈಗ ಮುಂಬೈಗೆ ಬಂದಿದ್ದಾಳೆ. ಆದರೆ, ಆಕೆಯ ಜೊತೆ ಆಕೆಯ ಗೆಳೆಯ ಅಲೆಕ್ಸಾಂಡರ್ ಇಲಾಕ್ ಕೂಡ ಇರುವುದು ಗಮನಾರ್ಹ ಸಂಗತಿಯಾಗಿದೆ. ಇಬ್ಬರೂ ಮುಂಬೈನ ಬೀದಿಗಳಲ್ಲಿ …
Read More »ಹಿಂದೂ ಹಬ್ಬಗಳಿಗೆ ಯಾಕಿಷ್ಟು ತಾತ್ಸಾರ: ಕರ್ನಾಟಕ ಪಾಕಿಸ್ತಾನ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ
ಬೆಂಗಳೂರು, ಸೆಪ್ಟಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಗಲಭೆ ನಡೆದಿದೆ. ಇದೆಲ್ಲ ನೋಡಿದರೆ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ಹಿಂದೂಗಳ ಹಬ್ಬದಂದು ನಡೆದ ಈ ದುಷ್ಕೃತ್ಯ ಅತ್ಯಂತ ಖಂಡನೀಯ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಂಡ್ಯ ಗಲಭೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ …
Read More »ನಾಗಮಂಗಲ ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ‘CM ಸಿದ್ದರಾಮಯ್ಯ’ ಎಚ್ಚರಿಕೆ
ಬೆಂಗಳೂರು : ನಾಗಮಂಗಲ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ …
Read More »ಕನ್ನಡದ ಔಷಧ ಚೀಟಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು, ಸೆಪ್ಟೆಂಬರ್, 12: ನಿಯಮ ಜಾರಿಯಾಗುವ ಮೊದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದಕ್ಕೆ ಆರೋಗ್ಯ ಸಚಿವರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದೆ ಆ ನಿರ್ಧಾರ ಏನು ಎಂದು ಇಲ್ಲಿ ತಿಳಿಯಿರಿ. ರಾಜ್ಯದ ಹಲವು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ …
Read More »
Laxmi News 24×7