Breaking News

ರಾಜಕೀಯ

ಬೈಕ್ ಗೆ ಲಾರಿ ಡಿಕ್ಕಿ: ಮೂವರು ಕಾರ್ಮಿಕರ ಸಾವು

ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು ಶುಕ್ರವಾರ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಮಿಕರಾದ ಗುರುಮೂರ್ತಿ (39), ಶೇಕ್ ಅಫೀಸ್ (45) ಹಾಗೂ ವೆಂಕಟೇಶ್ (50) ಮೃತರು. ಘಟನೆಯಲ್ಲಿ ಹನುಮಂತ ಅವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಸದ ನಿಮಿತ್ತ ನಾಲ್ವರು ಕಾರ್ಮಿಕರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದರು. ಆಗ ಎದುರಿಗೆ ಬಂದ …

Read More »

ಲಕ್ಷ್ಮೇಶ್ವರ: ರೈತನ ಕೈ ಹಿಡಿದ ತರಕಾರಿ ಕೃಷಿ

ಲಕ್ಷ್ಮೇಶ್ವರ: ಅಲ್ಪಸ್ವಲ್ಪ ಭೂಮಿಯಲ್ಲೇ ಕಷ್ಪಪಟ್ಟು, ವಿವಿಧ ತರಕಾರಿಗಳನ್ನು ಬೆಳೆದು ಸೈ ಎನಿಸಿಕೊಂಡವರು ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ರಾಮನಗೌಡ ಶಂಕರಗೌಡ ದುರುಗನಗೌಡ್ರ. ಮೂಲತಃ ಲಕ್ಷ್ಮೇಶ್ವರ ತಾಲ್ಲೂಕು ಗುಲಗಂಜಿಕೊಪ್ಪದ ನಿವಾಸಿಯಾದ ರಾಮನಗೌಡ್ರ ಈಗ ಲಕ್ಷ್ಮೇಶ್ವರದ ರಂಭಾಪುರಿ ನಗರದ ಆಶ್ರಯ ಕಾಲೊನಿಯಲ್ಲಿ ವಾಸವಾಗಿದ್ದಾರೆ.   ಲಕ್ಷ್ಮೇಶ್ವರದ ಮಾನ್ವಿ ಎಂಬುವವರಿಗೆ ಸೇರಿದ ಆರು ಎಕರೆ ತೋಟವನ್ನು ವರ್ಷಕ್ಕೆ ₹50 ಸಾವಿರದಂತೆ ಇವರು ಲಾವಣಿ ಆಧಾರದ ಮೇಲೆ ಪಡೆದುಕೊಂಡು ವಿವಿಧ ತರಕಾರಿ, ಗಲಾಟೆ ಹೂವು ಬೆಳೆಯುತ್ತಿದ್ದಾರೆ. ಹದಿನೈದು ಗುಂಟೆಯಲ್ಲಿ …

Read More »

ಈಜು ರಿಲೆ: ದಾಖಲೆ ಬರೆದ ತಾಯಿ-ಮಗ

ಬೆಳಗಾವಿ: ಇಲ್ಲಿನ ಸ್ವಿಮ್ಮರ್ಸ್ ಕ್ಲಬ್ ಮತ್ತು ಅಕ್ವೇರಿಯಸ್ ಸ್ವಿಮ್ ಕ್ಲಬ್‌ನ ಈಜುಪಟುಗಳಾದ ಜ್ಯೋತಿ ಕೋರಿ (ಹೊಸಟ್ಟಿ) ಹಾಗೂ ಅವರ ಪುತ್ರ ವಿಹಾನ್‌ ಜತೆಯಾಗಿ, ಕೆಎಲ್‌ಇ ಸಂಸ್ಥೆಯ ಸುವರ್ಣ ಜೆಎನ್‌ಎಂಸಿ ಈಜುಕೊಳದಲ್ಲಿ ಗುರುವಾರ ನಡೆದ ‘ನಾನ್‌ಸ್ಟಾಪ್‌ ಸ್ವಿಮ್ಮಿಂಗ್‌ ರಿಲೆ’ಯಲ್ಲಿ 12 ಗಂಟೆ, 22 ನಿಮಿಷ ಈಜಿ ಇಂಡಿಯಾ ಅಂಡ್‌ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಮತ್ತು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಸೇರಿದರು.   44 ವರ್ಷ ವಯಸ್ಸಿನ ಜ್ಯೋತಿ ಮತ್ತು …

Read More »

ಶಿವಾಪುರ ಅಡವಿಸಿದ್ದೇಶ್ವರ ಜಾತ್ರೆ ಇಂದಿನಿಂದ

ಮೂಡಲಗಿ: ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಂಬಲಿ ಒಡೆಯ ಅಡವಿಸಿದ್ಧೇಶ್ವರ ಜಾತ್ರೆ ಸೆ. 6ರಿಂದ 9ರವರೆಗೆ ಪೀಠಾಧಿಪತಿ ಅಡವಿಸಿದ್ಧರಾಮ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. ಸೆ.6ರಂದು ಬೆಳಿಗ್ಗೆ ಜಾತ್ರೆಯು ಷಟಸ್ಥಲ್‌ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.   ಮುಖ್ಯ ಅತಿಥಿಗಳಾಗಿ ಗೋಕಾಕದ ಅಶೋಕ ಪೂಜೇರಿ, ಭೀಮಪ್ಪ ಗಡಾದ, ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಬೆಳಿಗ್ಗೆ 10ಕ್ಕೆ ಆರೋಗ್ಯ ಉಚಿತ ತಪಾಸಣೆ ಇರುವುದು. ಸಂಜೆ 4ಕ್ಕೆ ತಾಯಂದಿರಿಂದ ಬಸವ …

Read More »

ಜಿ.ಪಂ., ತಾ.ಪಂ. ಮೀಸಲು: ಸಮಯ ಕೇಳಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫ‌ಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ …

Read More »

ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.ಸಿಎಂ

ಬೆಂಗಳೂರು:- ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ವಿರುದ್ಧವೇ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು. ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ …

Read More »

ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ …

Read More »

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ

ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ …

Read More »

ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್

ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್​ ಬಿಚ್ಚುವ ಸಂದರ್ಭದಲ್ಲಿ ಲೈಟ್​ ಮ್ಯಾನ್​ ಮೋಹನ್​ ಕುಮಾರ್​ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್​ ಭಟ್​ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲು ಮಾಡಲಾಗಿದೆ. ‘ಮನದ ಕಡಲು’ ಸಿನಿಮಾದ ಶೂಟಿಂಗ್​ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ …

Read More »

ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ತಪ್ಪಾಯ್ತು ಕ್ಷಮಿಸಿ ಬಿಡು’ ಎಂದು ಪ್ರಾಣ ಭಿಕ್ಷೆ ಬೇಡಿದರೂ ಕರುಣೆ ತೋರದ ದರ್ಶನ್ ಗ್ಯಾಂಗ್

ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ತಪ್ಪಾಯ್ತು ಕ್ಷಮಿಸಿ ಬಿಡು’ ಎಂದು ಪ್ರಾಣ ಭಿಕ್ಷೆ ಬೇಡಿದರೂ ಕರುಣೆ ತೋರದ ದರ್ಶನ್ ಗ್ಯಾಂಗ್ ಬೆಂಗಳೂರು: ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ನನ್ನಿಂದ ದೊಡ್ಡ ತಪ್ಪಾಗಿದೆ. ದಯಮಾಡಿ ಬಿಟ್ಟುಬಿಡಿ. ಇನ್ನು ಮುಂದೆ ಇಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿಗೆ ಮೊದಲು ಪರಿಪರಿಯಾಗಿ ಪ್ರಾಣ ಭಿಕ್ಷೆ ಬೇಡಿದರೂ ನಟ ದರ್ಶನ್ ಮತ್ತು ಅವರ ಸಹಚರರು ನಿರ್ದಯವಾಗಿ ಹೊಡೆದು ಕೊಂದು ಹಾಕಿದ್ದಾರೆ. …

Read More »