ಸುರೇಶ ಯಾದವ ಪೌoಡೇಶನ್ ಹಾಗೂ KLE ಬ್ಲಡ್ ಬ್ಯಾಂಕ್ ಮತ್ತು ರೋಹನ್ ಸ್ಪೆಷಲಿಟಿ ಕ್ಲಿನಿಕ್ ಇವರ ಸಂಯುಕ್ತ ಆಶ್ರಯ ದಲ್ಲಿ ಸುರೇಶ ಯಾದವ ಅವರ 25 ನೇ ಮದುವೆಯ ವಾರ್ಷಿಕೋತ್ಸವದ ನಿಮಿತ್ಯ ರಾಮತೀರ್ಥ ನಗರದ ಸಭಾಭವನದಲ್ಲಿ ರಕ್ತದಾನ ಮತ್ತು ಅರೋಗ್ಯ ಶಿಬಿರದ ದಿವ್ಯ ಸಾನಿದ್ಯ ವನ್ನುವಹಿಸಿ ಉದ್ಘಾಟನೆ ನೆರೆವೇರಿಸಿ ಮಾತನಾಡಿದ ನಾಗನೂರಿನ ಶ್ರೀ ಮ ನಿ ಪ್ರ ಡಾ: ಅಲ್ಲಮಪ್ರಭು ಮಹಾಸ್ವಾಮಿಗಳು ರಕ್ತದಾನವು ಜೀವಗಳನ್ನು ಉಳಿಸುವುದಲ್ಲದೆ, ದಾನಿಗಳ ಅರೋಗ್ಯಕ್ಕೂ ಪ್ರಯೋಜನಕಾರಿ, …
Read More »ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ
ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ, ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟವು (ರಿ) ಬೆಳಗಾವಿಯಲ್ಲಿ ಶ್ರದ್ಧಾ ಭಕ್ತಿಯಿಂದ ಪಾದಯಾತ್ರೆ ಮತ್ತು ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಪಾದಯಾತ್ರೆಯು ‘ನೂರು ಕಾಯಕ ಪಂಗಡದ ಮನೆಗಳಿಗೆ ಪೂಜ್ಯರ ನಡೆ’ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಭಾಗವಹಿಸಿ ಭಕ್ತರನ್ನು ಆಶೀರ್ವದಿಸಿದರು. ಶ್ರೀ ಜಗದ್ಗುರು …
Read More »ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ
ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಸುಮಾರು 10ರಿಂದ 15 ಜನರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ತೀವ್ರತೆಯಿಂದ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ರವಾನೆ …
Read More »ಬೆಳಗಾವಿಯ ಚವ್ಹಾಟ ಗಲ್ಲಿ ಗಣೇಶನ ಮಂಟಪದಲ್ಲಿ ಶುದ್ಧಿಕರಣ…ಹೋಮ ಹವನ…
ಬೆಳಗಾವಿಯ ಚವ್ಹಾಟ ಗಲ್ಲಿ ಗಣೇಶನ ಮಂಟಪದಲ್ಲಿ ಶುದ್ಧಿಕರಣ…ಹೋಮ ಹವನ… ಬೆಳಗಾವಿಯ ಚವಾಟ ಗಲ್ಲಿಯಲ್ಲಿರುವ ‘ಬೆಳಗಾವಿ ರಾಜ’ ಎಂದೇ ಪ್ರಸಿದ್ಧವಾಗಿರುವ ಶ್ರೀ ಗಣೇಶ ಮೂರ್ತಿಯ ಮಂಟಪವನ್ನು ಭಾನುವಾರದಂದು ಮಂತ್ರಗಳ ಘೋಷಗಳೊಂದಿಗೆ ವಿಧಿಪೂರ್ವಕವಾಗಿ ಪೂಜಿಸಲಾಯಿತು. ಈ ಸಂದರ್ಭದಲ್ಲಿ ಹೋಮ-ಹವನ ಮತ್ತಿತರ ಪೂಜೆಗಳನ್ನೂ ನಡೆಸಲಾಯಿತು. ಈ ಸಂದರ್ಭದಲ್ಲಿ ರಂಗೋಲಿ, ಹೂವುಗಳ ಅಲಂಕಾರದೊಂದಿಗೆ, ಶುಭಕರವಾದ ಹಣ್ಣು-ಹೂವು-ಎಲೆಗಳಿಂದ ಉತ್ಸಾಹದ ವಾತಾವರಣ ನಿರ್ಮಾಣವಾಗಿತ್ತು. ಪೂಜಾರಿ ವಿಠ್ಠಲ್ ಅವರು ಮಂಡಳಿಯ ಕಾರ್ಯಾಧ್ಯಕ್ಷ ಸುನಿಲ್ ಜಾಧವ್ ಮತ್ತು ಉಪಾಧ್ಯಕ್ಷ ಸೌರಭ್ ಪವಾರ್ …
Read More »“ಒಂದು ಊರು ಒಂದೇ ಗಣಪ” ಗಣೇಶ ಚತುರ್ಥಿಯ ಇತಿಹಾಸವೇ ವಿಭಿನ್ನ
ಬೆಳಗಾವಿ: ಮಹಾರಾಷ್ಟ್ರ ಬಿಟ್ಟರೆ ಗಣೇಶ ಚತುರ್ಥಿ ಅದ್ಧೂರಿ ಆಚರಣೆಗೆ ಬೆಳಗಾವಿ ಪ್ರಸಿದ್ಧಿ. ಹಾಗಾಗಿ, ನಗರ ಸೇರಿದಂತೆ ಪ್ರತಿಯೊಂದು ಹಳ್ಳಿಗಳ ಓಣಿ ಓಣಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಭರದ ಸಿದ್ಧತೆ ನಡೆದಿದೆ. ಆದರೆ, ಜಿಲ್ಲೆಯ ಈ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ಊರಿಗೆ ಒಂದೇ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾ, ಭಕ್ತಿಯಿಂದ ಪೂಜಿಸಿಕೊಂಡು ಬರುತ್ತಿರುವುದು ಗಮನಾರ್ಹ. ಗಣೇಶ ಹಬ್ಬ ಬಂತು ಎಂದರೆ ಸಾಕು ಸಾರ್ವಜನಿಕ ಗಣೇಶ ಮಂಡಳಿಗಳು ಫುಲ್ ಆಕ್ಟಿವ್ ಆಗುತ್ತವೆ. ಗಲ್ಲಿ …
Read More »ಗೌರಿ – ಗಣೇಶ ಹಬ್ಬ; ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ
ಬೆಂಗಳೂರು : ಸುದೀರ್ಘ ರಜೆ, ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳತ್ತ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 25 ರಿಂದ 31ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆಯನ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಕಲ್ಪಿಸಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರ್ ರಾಜ್ಯಗಳ ವಿವಿಧ ಸ್ಥಳಗಳಿಗೆ ಒಟ್ಟು 1500 ಬಸ್ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ಬೆಂಗಳೂರು, ಮಂಗಳೂರು, ಮುಂಬೈ, ಪುಣೆ, ಗೋವಾ ಮತ್ತಿತರ ಕಡೆಗಳಿಗೆ …
Read More »ಧರ್ಮಸ್ಥಳ ಕೇಸ್: ಬಂಧಿತ ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಯಾರು?
ಮಂಗಳೂರು, ಆಗಸ್ಟ್ 23: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್ಮ್ಯಾನ್ (Masked man) ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್ಮ್ಯಾನ್ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು …
Read More »ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು
ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್ನಲ್ಲಿ ಫ್ರಾನ್ಸ್ನಲ್ಲಿ ನಡೆಯಲಿದೆ. ಇಲ್ಲಿ ನಡೆಯುವ ಗಾಳಿಪಟ ಉತ್ಸವಕ್ಕೆ ಮಂಗಳೂರಿನ ಗಾಳಿಪಟ ಆಸಕ್ತರ ತಂಡವೊಂದು ವಿಶೇಷ ಗಾಳಿಪಟವನ್ನು ತಯಾರಿಸಿ, ಸಿದ್ಧವಾಗಿದೆ. ಫ್ರಾನ್ಸ್ನಲ್ಲಿ ಸೆಪ್ಟಂಬರ್ 13 ರಿಂದ ಪ್ರಪಂಚದ ಅತೀ ದೊಡ್ಡ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ಗಾಳಿಪಟ ಹಾರಿಸಲು ‘ಟೀಮ್ ಮಂಗಳೂರು’ ತಂಡ ವಿಶೇಷವಾದ ಗಾಳಿಪಟವನ್ನು ತಯಾರಿಸಿದೆ. ಇದೇ ಗಾಳಿಪಟ ಫ್ರೆಂಚರ …
Read More »ಲಕ್ಕಿ ಸ್ಕೀಮ್ ಹೆಸರಲ್ಲಿ ಜನರಿಗೆ ನಂಬಿಸಿ ₹14 ಕೋಟಿಗೂ ಅಧಿಕ ವಂಚನೆ: ನಾಲ್ವರ ಬಂಧನ
ಮಂಗಳೂರು: ಲಕ್ಕಿ ಸ್ಕೀಮ್ ಮೂಲಕ ಗ್ರಾಹಕರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚನೆ ಮಾಡಿದ ಎರಡು ಸಂಸ್ಥೆಗಳ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅಹಮದ್ ಖುರೇಶಿ, ನಝೀರ್ ಯಾನೆ ನಾಸಿರ್, ಮುಹಮ್ಮದ್ ಅಶ್ರಫ್, ಮುಹಮ್ಮದ್ ಹನೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ 1: ನ್ಯೂ ಶೈನ್ ಎಂಟರ್ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ನಲ್ಲಿ 9 ತಿಂಗಳು 1,000 ರೂ. ಹಾಗೂ ಕೊನೆಯ 2 …
Read More »ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್. ಜಗದೀಶ್ ಬಂಧನ
ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ, ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಎಂಬುವವರು ನೀಡಿದ ದೂರಿನನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …
Read More »