Breaking News

ರಾಜಕೀಯ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಹೆಡ್‌ ಕಾನ್ಸ್‌ಟೇಬಲ್‌

ಗುಬ್ಬಿ: ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ. ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ …

Read More »

ರಾಜ್ಯದಲ್ಲಿ ವಾಡಿಕೆಗಿಂತ ಶೇ.50ರಷ್ಟು ಅಧಿಕ ಮಳೆ

 ಜು.20-ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಜುಲೈ ಒಂದರಿಂದ ಇದುವರೆಗೆ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಹವಾಮಾನ ಮುನ್ಸೂನೆಗಳಿವೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡ ರೆಡ್ ಅಲರ್ಟ್ ನೀಡಲಾಗಿದ್ದು, ನಾಳೆಯಿಂದ ಮೂರು ದಿನಗಳ ಆರೆಂಜ್ ಅಲರ್ಟ್‍ನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ನೈಸರ್ಗಿಕ …

Read More »

ದುಬಾರಿ ಆಗುತ್ತಾ ಸಿನಿಮಾ ಟಿಕೆಟ್?

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ (Sandalwood) ಗರಬಡಿದಂತೆ ಆಗಿದ್ದು ಜನರು ಥಿಯೇಟರ್​ಗೆ (Theater) ಬರದ ಕಾರಣ ಹಲವು ಸಿನಿಮಾಗಳು ಬಾಕ್ಸ್​ ಆಫೀಸ್ (Box Office) ಕಲೆಕ್ಷನ್ ಇಲ್ಲದೆ ಮಕಾಡೆ ಮಲಗುತ್ತಿವೆ. ದೊಡ್ಡ ದೊಡ್ಡ ನಟರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿಲ್ಲ, ಇನ್ನು ದರ್ಶನ್ (Darshan) ಕೊಲೆ ಆರೋಪದಲ್ಲಿ ಜೈಲು ಸೇರಿದ್ದು ಇಂತಾ ಸಮಯದಲ್ಲಿ ಜನರನ್ನು ಥಿಯೇಟರ್​ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಸಿನಿಮಾ ಟಿಕೆಟ್ (Movie …

Read More »

ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

ಧಾರವಾಡ: ಸರ್ಕಾರಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲು ಕಟ್ ಆಗಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಲಘಟಗಿಯ ರಾಮನಾಳ ಕ್ರಾಸ್ ಬಳಿ ಬಸ್ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಬಸ್ ಚಾಲಕನ ಎರಡೂ ಕಾಲುಗಳು ಕಟ್ ಆಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಕುಮಟಾಗೆ …

Read More »

ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

ಬೆಳಗಾವಿ : ಹಳ್ಳಿ ಕಡೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಸಿಡಿಮದ್ದು ಸಿಡಿಸುವ ಸಾಂಪ್ರದಾಯವಿದೆ. ಇದೀಗ ಬೆಳಗಾವಿಯಲ್ಲಿ ಈ ಒಂದು ಸಿಡಿಮದ್ದುನಿಂದ ಓರ್ವ ಬಲಿಯಾಗಿದ್ದು, ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಮದ್ದು ತಯಾರಿಕ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಪಂಚಮಿ ಹಬ್ಬದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಮಲ್ಲಪ್ಪ ಈ ಒಂದು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟಗೊಂಡು ಮಲ್ಲಪ್ಪ …

Read More »

ಧಾರಾಕಾರ ಮಳೆಗೆ ಧರೆಗುರುಳಿದ ಮನೆಗಳು

ಬೆಂಗಳೂರು,ಜು.20- ಕಳೆದ 15 ದಿನಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಹುಬ್ಬಳ್ಳಿ, ಬೆಳಗಾವಿ, ಹಾಸನ, ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮನೆಗಳು ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿವೆ. ಎರಡು ಗ್ರಾಮಗಳಲ್ಲಿ ಮನೆ ಕುಸಿದು ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮನೆ ಕುಸಿಯುವ ಮುನ್ನ 2 ಇಟ್ಟಿಗೆಗಳು ಬಿದ್ದಿದ್ದು ಎಚ್ಚೆತ್ತ ಕುಟುಂಬಸ್ಥರು ಓಡಿ ಆಚೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. …

Read More »

ವಿಟಿಯು: 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಗುರುವಾರ ನಡೆದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಹಾಗೂ 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರು ಚಿಕ್ಕಬಳ್ಳಾಪುರದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್‌ ಸಾಯಿ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ.ಮರಾರ್‌ ಅವರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಪ್ರದಾನ ಮಾಡಿದರು.ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್‌.ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ …

Read More »

ರಾಕಸಕೊಪ್ಪ ಜಲಾಶಯದ ನೀರು ಹೊರಕ್ಕೆ

ಬೆಳಗಾವಿ: ತಾಲ್ಲೂಕಿನ ರಾಕಸಕೊಪ್ಪ ಜಲಾಶಯ ಭರ್ತಿಯಾಗಲು ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಹಾಗಾಗಿ, ಶುಕ್ರವಾರದಿಂದಲೇ ಎರಡು ಕ್ರಸ್ಟ್‌ಗೇಟ್‌ಗಳನ್ನು ತೆರೆದು ಆರು ಇಂಚು ಅಂತರದಿಂದ ನೀರು ಹೊರ ಹರಿಸಲಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶ ಮತ್ತು ಮಾರ್ಕೆಂಡೇಯ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಾರ್ಕೆಂಡೇಯ ನದಿಗೆ ಕಟ್ಟಿರುವ ರಾಕಸಕೊಪ್ಪ ಅಣೆಕಟ್ಟೆ ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಭರ್ತಿಯಾಗಿದೆ. ಜಲಾಶಯದ ಕೆಳಹಂತದ ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು …

Read More »

ಖಾನಾಪುರ | ಮುಂದುವರಿದ ಮಳೆ: ಪ್ರವಾಹ ಪರಿಸ್ಥಿತಿ

ಖಾನಾಪುರ: ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಳೆರಾಯನ ಅಬ್ಬರ ಮುಂದುವರೆದಿದೆ. ಗುರುವಾರ ಇಡೀ ರಾತ್ರಿ ಮತ್ತು ಶುಕ್ರವಾರ ಇಡೀ ದಿನ ಪಟ್ಟಣ ಸೇರಿದಂತೆ ತಾಲ್ಲೂಕಿನ ಲೋಂಡಾ, ಕಣಕುಂಬಿ, ಹೆಮ್ಮಡಗಾ, ಜಾಂಬೋಟಿ, ಶಿರೋಲಿ, ಗುಂಜಿ ಅರಣ್ಯದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಮುಳುಗಿದ್ದ ಸೇತುವೆಗಳು ಶುಕ್ರವಾರವೂ ಸಂಚಾರಕ್ಕೆ ತೆರೆದುಕೊಳ್ಳಲಿಲ್ಲ. ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇಟಗಿ, ಗಂದಿಗವಾಡ, ಬೀಡಿ, ಪಾರಿಶ್ವಾಡ, ದೇವಲತ್ತಿ ಸುತ್ತಮುತ್ತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲ್ಲೂಕಿನಾದ್ಯಂತ ಮೋಡ ಮುಸುಕಿದ ಶೀತ ವಾತಾವರಣ …

Read More »

ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ. ಬ್ರಿಜ್‌ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್‌ ಕಲ್ಪಿಸಲು ಗೋಕಾಕ ಶಹರ ಮತ್ತು …

Read More »