ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೈಅಲರ್ಟ್ ಆಗಿದ್ದು, ರಾಜ್ಯದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣ, ಮದ್ಯ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯ ವಿವಿಧೆಡೆಗಳಲ್ಲಿ ಚುನವಣಾಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ. ಗೋಕಾಕ್ ತಾಲೂಕಿನ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ ಚುನಾವಾಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.70 …
Read More »ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಿಂಗಾಲೇಶ್ವರ ಶ್ರೀಗಳಿಗೆ ಭಕ್ತರ ಒತ್ತಾಯ
ಧಾರವಾಡ: ಲೋಕಸಭಾ ಚುನಾವಣೆಗೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ವಿಚಾರವಾಗಿ ಧಾರವಾಡದ ಸೇವಾಲಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದರು. ಸ್ವಾಮೀಜಿಗಳು ಸೇವಾಲಯಕ್ಕೆ ಬರುತ್ತಿದ್ದಂತೆ ಭಕ್ತಗಣ ಹೂವಿನ ಹಾಸಿಗೆ ಮೇಲೆ ಅವರನ್ನು ಬರಮಾಡಿಕೊಂಡರು. ನಾನು ಒಂದು ಗುರಿ ಇಟ್ಟುಕೊಂಡಿದ್ದು, ಆ ಗುರಿ ಮುಟ್ಟುವ ತನಕ ಕೊರಳಲ್ಲಿ ಮಾಲೆ ಹಾಕಿಕೊಳ್ಳುವುದಿಲ್ಲ ಎಂದು ಭಕ್ತರಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಕ್ತರೊಂದಿಗೆ ಮಾತುಕತೆ …
Read More »ಸುಮಲತಾಗೆ ಕೃತಜ್ಞತೆ ಸಲ್ಲಿಸಿ ದ ಹೆಚ್ಡಿಕೆ
ಮಂಡ್ಯ: ಕ್ಷೇತ್ರ ಬಿಟ್ಟುಕೊಟ್ಟ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ (Former CM HD Kumaraswamy) ಕೃತಜ್ಞತೆ ಸಲ್ಲಿಸಿದ್ದಾರೆ. ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ದಿವಂಗತ ಕೆಎಸ್ ಪುಟ್ಟಣ್ಣಯ್ಯ (KS Puttannaiah) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ನಾಮಪತ್ರ ಸಲ್ಲಿಕೆಗೂ ಮೊದಲು ಹಿರಿಯ ಹೋರಾಟಗಾರರಿಗೆ ಪುಷ್ಷ ನಮನ ಸಲ್ಲಿಸುತ್ತಿದ್ದೇನೆ. ನಾಳೆ ಬೆಳಗ್ಗೆ ದೇವಸ್ಥಾನಕ್ಕೆ ಪೂಜೆ …
Read More »ಕೈ’ ಅಭ್ಯರ್ಥಿ ಸಂಯುಕ್ತಾಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಬೆಂಬಲ; ಸಭೆಗೆ ವೀಣಾ ಗೈರು!
ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ತಮ್ಮ ಕ್ಷೇತ್ರಗಳಿಂದ ಎದುರಾಳಿಗೆ ಭರ್ಜರಿ ಪೈಪೋಟಿ ಕೊಡಲು ಪಕ್ಷಗಳಲ್ಲಿ ಸಕಲ ತಯಾರಿ ನಡೆಯುತ್ತಿದೆ. ಆದರೆ, ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಮಾತ್ರ ಅಸಮಾಧಾನ ಮುಗಿಯದ ಕಥೆಯಾಗಿತ್ತು.ಕೈ ಟಿಕೆಟ್ ಪಡೆದು ಚುನಾವಣೆ ಅಖಾಡಕ್ಕೆ ದುಮುಕಿದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ವಿರುದ್ಧ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ತೀವ್ರ ಅಸಮಾಧಾನ ಹೊರಹಾಕಿದ್ದರು. ಕಳೆದ ಹಲವು …
Read More »ನನಗೆ ಆಗದವರು ದ್ವೇಷದಿಂದ ನನ್ನ ಹೇಳಿಕೆಯನ್ನು ತಿರುಚಿದ್ದಾರೆ: ಶಿವಶಂಕರಪ್ಪ
ದಾವಣಗೆರೆ : ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಶಾಮನವರು ಶಿವಶಂಕರಪ್ಪ ಅವರು ಇದೀಗ ಚುನಾವಣೆ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಆಗದವರು ದ್ವೇಷದಿಂದ ಹೇಳಿಕೆಗಳನ್ನು ತಿರುವು ಸೃಷ್ಟಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.
Read More »ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.
ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ. ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳಗಾಗಿದ್ದಾರೆ. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು. ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು ಎಂದಿದ್ದಾರೆ ಎಂದು ಜೆಡಿಎಸ್ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
Read More »ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ
ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ. ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ …
Read More »ಸುಳ್ಳುಗಳ ‘ಎಲೆಕ್ಟ್ರೊಲ್ ಬಾಂಡ್’ ಸರದಾರ ಅಮಿತ್ ಷಾ
ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ.
Read More »Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್ 2.06 ಲಕ್ಷ ಮತಗಳಿಂದ ಬಿಜೆಪಿ …
Read More »ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ
ಶಿವಮೊಗ್ಗ: ‘ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ‘2014 ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದೆನು. ಗೀತಾ ಶಿವರಾಜಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆಗ …
Read More »
Laxmi News 24×7