ಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತಣಿಸಲು ತಾಲ್ಲೂಕಿನ ವಿವಿಧ ಭಾಗಗಳ ದಟ್ಟ ಕಾಡಿನಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾಲ್ಲೂಕಿನ ಕಾಡು ಪ್ರದೇಶದ 6 ಭಾಗಗಳಲ್ಲಿ ಕಾಂಕ್ರೀಟ್ ತೊಟ್ಟಿಗಳನ್ನು ನಿರ್ಮಿಸಲಾಗಿತ್ತು. ವೃತ್ತಾಕಾರದ ಈ ತೊಟ್ಟಿಗಳು ಒಂದು ಬದಿಯಿಂದ ಮತ್ತೊಂದು ತುದಿಗೆ …
Read More »ನರಗುಂದ: ಕೃಷಿಹೊಂಡವೇ ಜೀವನಕ್ಕೆ ಆಧಾರ, ಬಹುಹಂತದ ಕೃಷಿಯಿಂದ ಲಕ್ಷಾಂತರ ಆದಾಯ
ನರಗುಂದ: ಬರದ ನೆಪ ಒಡ್ಡಿ ಕೈ ಕಟ್ಟಿ ಕುಳಿತರೆ ಕೃಷಿ ಸಾಗಿಸಲಾಗದು. ಮನಸ್ಸಿಟ್ಟು ಕಾಯಕ ಮಾಡಿದರೆ ಕೃಷಿಯಿಂದ ಲಕ್ಷಾಂತರ ರೂಪಾಯಿ ಆದಾಯ ಪಡೆಯಲು ಸಾಧ್ಯ ಎಂದು ಕೃಷಿಯಲ್ಲಿ ಖುಷಿ ಕಾಣುತ್ತಿರುವ ತಾಲ್ಲೂಕಿನ ಹದ್ಲಿಯ ರೈತ ಯಲ್ಲಪ್ಪ ಸೋನಕೊಪ್ಪ ತಮ್ಮ ಅನುಭವದ ಮಾತುಗಳನ್ನು ಖುಷಿಯಿಂದ ಹೇಳಿಕೊಳ್ಳುತ್ತಾರೆ. ತಾಲ್ಲೂಕಿನ ಮಾದರಿ ರೈತನಾಗಿ, ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ ಅವರು. ಪದವೀಧರನಾದರೂ ಕೃಷಿಯನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಇರುವ ಕೃಷಿ ಹೊಂಡದಲ್ಲಿನ ಅಲ್ಪ ನೀರಿನಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂಪಾಯಿ …
Read More »ಲೋಕಸಭೆ ಅಖಾಡ 2024 ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬೆಳಗಾವಿ: ಟಿಕೆಟ್ ಪಡೆಯುವ ವಿಚಾರದಲ್ಲಿ ಸಾಕಷ್ಟು ಆಕ್ಷೇಪಣೆಗಳನ್ನು ಎದುರಿಸಿದ್ದ ಜಗದೀಶ ಶೆಟ್ಟರ್ ಈಗ ಒಂದು ಹಂತದ ಆತಂಕ ನಿವಾರಿಸಿಕೊಂಡಿದ್ದಾರೆ. ಪಕ್ಷದ ಪ್ರಮುಖ ಪ್ರಭಾವಿ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾ ನಾಯಕರ ಜತೆ ನಡೆದ ಸಂಧಾನ ಸಭೆ ಹಾಗೂ ಪ್ರಚಾರ ರ್ಯಾಲಿ ಶೆಟ್ಟರ್ ಅವರಿಗೆ ನೈತಿಕ ಬಲ ತಂದುಕೊಟ್ಟಿದೆ. ಸಭೆಯಲ್ಲಿ ಜಗದೀಶ ಶೆಟ್ಟರ್ ಬಗ್ಗೆ ನಿರೀಕ್ಷೆ ಮಾಡಿದಂತೆ ಸ್ಥಳೀಯ ಮುಖಂಡರಿಂದ ಹಾಗೂ ಕಾರ್ಯಕರ್ತರಿಂದ ಅಂತಹ ಅಸಮಾಧಾನಗಳು ಕಂಡು ಬರಲಿಲ್ಲ. ಆದರೆ ಟಿಕೆಟ್ …
Read More »‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:
ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಕೊಪ್ಪಳದ ಬಿ.ಟಿ. ಪಾಟೀಲ ನಗರದ ಬಾಡಿಗೆ ಮನೆ, ಗದಗದ ಮನೆ, ಕಚೇರಿ ಹಾಗೂ ರೋಣ ತಾಲೂಕಿನ ಮೆಣಸಗಿಯಲ್ಲಿರುವ ಮನೆ ಸೇರಿ ಒಟ್ಟು ಎಂಟು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಸಹದೇವ ಕೊಪ್ಪಳ …
Read More »ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ
ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು
Read More »ಕಾಂಗ್ರೆಸ್ ತೊರೆದು ಶಿಂಧೆ ಬಣ ಸೇರ್ಪಡೆಯಾದ ಬಾಲಿವುಡ್ ನಟ ಗೋವಿಂದ; ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಮುಂಬೈ: ಹಿರಿಯ ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದ ಗುರುವಾರ (ಮಾರ್ಚ್ 28) ಕಾಂಗ್ರೆಸ್ ತೊರೆದು ಶಿವಸೇನೆ (ಏಕನಾಥ್ ಶಿಂಧೆ ಬಣ) ಸೇರ್ಪಡೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೋವಿಂದಾ ಅವರು ಮುಂಬೈ ವಾಯುವ್ಯ ಕ್ಷೇತ್ರದಿಂದ ಶಿವಸೇನೆ ಟಿಕೆಟ್ ಪಡೆದು ಸ್ಪರ್ಧಿಸುವ ಇರಾದೆ ಹೊಂದಿದ್ದಾರೆಂದು ಮೂಲಗಳು ತಿಳಿಸಿವೆ. 2004ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೋವಿಂದ ಬಿಜೆಪಿಯ ಧೀಮಂತ …
Read More »ಕೆ.ಆರ್.ಎಸ್. ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದ ಹೈಕೋರ್ಟ್
ಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ತಜ್ಞರ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಣೆಕಟ್ಟೆಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಮೊದಲಿಗಿಂತಲೂ ಈಗ ಹೆಚ್ಚಿದೆ ಎಂದು ನ್ಯಾಯಾಲಯ ತಿಳಿಸಿದೆ.ಸ್ಟೋನ್ ಕ್ರಷರ್ ಗೆ ಅವಕಾಶ ಕೋರಿ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಮಂಚಮ್ಮದೇವಿ ಸ್ಟೋನ್ ಕ್ರಶರ್ ಮತ್ತು ಎಂ ಸ್ಯಾಂಡ್ ಮಾಲೀಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಮುಖ್ಯ …
Read More »ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್ವೆಲ್ಗಳು ಬತ್ತಿವೆ.
ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್ವೆಲ್ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ. ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ. ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ …
Read More »ಅನಧಿಕೃತ ಆನ್ಲೈನ್ ಕೇಂದ್ರಕ್ಕೆ ಬೀಗ
ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್ಲೈನ್ ಕೇಂದ್ರದ ಮೇಲೆ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಹಾಕಿದೆ. ಸರ್ಕಾರದಿಂದ ಅನುಮತಿ ಪಡೆಯದೇ ಅರಭಾವಿ ಗ್ರಾಮದ ಆನಂದ ಕಡ್ಡಿ ಎಂಬುವವರಿಗೆ ಸೇರಿದ ಕೇಂದ್ರ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿತ್ತು. ಆಧಾರ್, ಪಡಿತರ, ಪಾನ್ ತಿದ್ದುಪಡಿ ಹಾಗೂ ಹೊಸ ಅರ್ಜಿಗಳನ್ನು ಪಡೆಯಲು ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ತಹಶೀಲ್ದಾರ್ಗೆ ದೂರು …
Read More »ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ
ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Read More »
Laxmi News 24×7