Breaking News

ರಾಜಕೀಯ

ಮಕ್ಕಳಿಗೆ ಸಂಸ್ಕಾರ-ಸಂಸ್ಕೃತಿ ಕಲಿಸೋಣ: ಹಂಚಲಿ

ಅಡಹಳ್ಳಿ: ಒಂದಿಷ್ಟು ದೇಶಗಳು ಹಣ ಬಲ, ಶಸ್ತ್ರ ಬಲ ಮತ್ತು ಭಯೋತ್ಪಾದನೆಯಿಂದ ಜಗತ್ತನ್ನಾಳಲು ಹೊರಟರೆ, ಆಧ್ಯಾತ್ಮಿಕ ಬಲದಿಂದ ಭಾರತ ವಿಶ್ವವನ್ನೇ ಗೆಲ್ಲಲು ಹೊರಟಿದೆ ಎಂದು ತಾಳಿಕೋಟಿಯ ವಾಗ್ಮಿ ಅಶೋಕ ಹಂಚಲಿ ಹೇಳಿದರು. ಅವರು ಸಮೀಪದ ನದಿ ಇಂಗಳಗಾಂವ ಗ್ರಾಮದಲ್ಲಿ 63ನೇ ಶರಣ ಸಂಸ್ಕೃತಿ ಉತ್ಸವ ನಿಮಿತ್ತ ಮುತ್ತೈದೆಯರಿಗೆ ಉಡಿ ತುಂಬುವ, ಮಹಾಂತ ಅಪ್ಪಗಳ ತೃತೀಯ ಪುಣ್ಯಸ್ಮರಣೋತ್ಸವ ಹಾಗೂ ಶರಣ ದಂಪತಿಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸ್ಕೃತಿ ಉಳಿವು ಕುರಿತು ಉಪನ್ಯಾಸ ನೀಡಿ, …

Read More »

ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಮಾರ್ಚ್‌ 14: ಬಿಸಿಲಿನ ಕಾವು ಜೋರಾಗುತ್ತಿದ್ದಂತೆ ರಾಜ್ಯದಲ್ಲೂ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನ ರಾಜಕೀಯ ಪಕ್ಷಗಳು ನಡೆಸಿದಿದ್ದು, ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ1.ಡಾ. ಅಜಯ್ ನಾಗಭೂಷಣ್ ಎಂ.ಎನ್: …

Read More »

ಪ್ರತಿಜೀವಕ ಔಷಧ ದುರ್ಬಳಕೆ ತಡೆಗಟ್ಟಿ’

ಚನ್ನಮ್ಮನ ಕಿತ್ತೂರು: ‘ಪ್ರತಿಜೀವಕ (ಆಯಂಟಿ ಬಯೊಟಿಕ್) ಔಷಧಗಳನ್ನು ಹೆಚ್ಚು ಉಪಯೋಗ ಮಾಡುತ್ತಿರುವ ಕ್ರಮದಿಂದಾಗಿ ರೋಗಿಗಳ ಪಾಲಿಗೆ ತಂದೊಡ್ಡುವ ಅಪಾಯ ತಪ್ಪಿಸಬೇಕಿದೆ. ಇವುಗಳ ದುರ್ಬಳಕೆಯನ್ನೂ ತಡೆಗಟ್ಟಬೇಕಿದೆ’ ಎಂದು ಬೆಳಗಾವಿ ವಿಭಾಗದ ಔಷಧ ಉಪನಿಯಂತ್ರಕ ಎಸ್. ನಾಗರಾಜ್ ಸಲಹೆ ನೀಡಿದರು.   ತಾಲ್ಲೂಕಿನ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ನಿರಂತರ ಕಲಿಕಾ ಕಾರ್ಯಕ್ರಮದಡಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರತಿಜೀವಕ ಔಷಧಗಳ ದುರುಪಯೋಗ ಪಡೆಯಲು ಔಷಧ ವ್ಯಾಪಾರಿಗಳು ಮತ್ತು ವೈದ್ಯರ ಸಹಕಾರ ಹೆಚ್ಚಾಗಿ …

Read More »

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …

Read More »

ಗಡಿ ಸಂರಕ್ಷಣಾ ಆಯೋಗ: ಬೆಳಗಾವಿಯಲ್ಲಿ ಕಚೇರಿ’

ಬೆಳಗಾವಿ: ‘ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗವನ್ನು ಪುನರ್ ರಚಿಸಲಾಗುವುದು. ಅದಕ್ಕೂ ಮುನ್ನ, ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕಚೇರಿ ಆರಂಭಿಸಲಾಗುವುದು. ಆಯೋಗದ ಒಬ್ಬ ಸದಸ್ಯ ಇಲ್ಲಿದ್ದು ಜನರ ಕುಂದುಕೊರತೆಗೆ ಸ್ಪಂದಿಸಲಿದ್ದಾರೆ’ ಎಂದು ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಹೇಳಿದರು.   ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಇರುವ ಆಯೋಗ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ರಾಜ್ಯದ ವಿವಿಧೆಡೆಯ ಸದಸ್ಯರನ್ನು ಸೇರಿಸಿ, ನಾಲ್ಕೇ ತಿಂಗಳಲ್ಲಿ ಪುನರ್ …

Read More »

ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ಅಸಲಿ ಕಾರಣ ಇಲ್ಲಿದೆ ನೋಡಿ!

ಬಿಜೆಪಿ ಲೋಕಸಭಾ ಚುನಾವಣೆ 2024ರ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಮೊದಲೇ ಅಂದುಕೊಂಡಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಲ್ಲೂ ಈ ಪಟ್ಟಿಯಲ್ಲಿ ಮೈಸೂರು & ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಈಗ, ಮಾಜಿ ಸಂಸದ ಆಗೋದು ಪಕ್ಕಾ ಆಗಿದೆ. ತಮ್ಮದೇ ತಪ್ಪಿಗೆ ಬೆಲೆ ಕಟ್ಟಿದ ಸಿಂಹ?ಹೊರಗಡೆ ಈಗ ಓಡಾಡುತ್ತಿರುವ ವಿಚಾರ ಏನು ಅಂದ್ರೆ, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಸ್. ಯಡಿಯೂರಪ್ಪ …

Read More »

ಅತಂತ್ರ ಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ

ಬೆಂಗಳೂರು,ಮಾ.14- ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಡೋಲಾಯಮಾನ ಸ್ಥಿತಿಗೆ ಬಂದಿದೆ. ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವುದರಿಂದ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಹುತೇಕ ತೀರ್ಮಾನಿಸಿದ್ದು, ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯಕ್ಕೆ ಮಂಕು ಆವರಿಸಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲೇಬಾಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಮಂಡ್ಯ …

Read More »

ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್ ಶೆಟ್ಟರ್​ ಕಾರು ವಾಪಸ್ ಹುಬ್ಬಳ್ಳಿಯತ್ತ ತಿರುಗಿದೆ.

ಹುಬ್ಬಳ್ಳಿ, (ಮಾರ್ಚ್ 13): ಲೋಕಸಭಾ ಚುನಾವಣೆಗೆ (Loksabha Elections 2024) ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕ ಒಟ್ಟು 8 ಹಾಲಿ ಬಿಜೆಪಿ(BJP) ಸಂಸದರಿಗೆ ಟಿಕೆಟ್​ ಮಿಸ್ ಆಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish shettar) ಅವರ ಕಾರು ವಾಪಸ್ ಹುಬ್ಬಳ್ಳಿ ಕಡೆ ತಿರುಗಿದೆ. ಹೌದು.. ಜಗದೀಶ್ ಶೆಟ್ಟರ್ ಬೆಳಗಾವಿ(Belagavi) ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದ್ರೆ, 2ನೇ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದು …

Read More »

ಇಬ್ಬರು ಹಾಲಿ ಶಾಸಕರ ಸ್ಪರ್ಧೆ: ಗೆದ್ದರೆ ಉಪ ಚುನಾವಣೆ ಖಚಿತ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದ್ದು, ಅದರಲ್ಲಿ ಇಬ್ಬರು ಹಾಲಿ ಶಾಸಕರೂ ಇದ್ದಾರೆ. ಅವರು ಗೆದ್ದರೆ ಆ ಕ್ಷೇತ್ರಗಳ ಮತದಾರರು ಮತ್ತೊಂದುಚುನಾವಣೆಗೆ ಸಜ್ಜಾಗಬೇಕಾಗುತ್ತದೆ! ಬುಧವಾರ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರೂ ಇದೆ.ಅವರು ಕ್ರಮವಾಗಿ ಹಾವೇರಿ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ. …

Read More »

ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುರುಬ ಸಮುದಾಯ ಮರೆತ ಬಿಜೆಪಿ ಹೈಕಮಾಂಡ್

ಬೆಂಗಳೂರು, ಮಾರ್ಚ್‌ 14: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಸರಿ ಪಡೆ ಈಗಾಗಲೇ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್‌ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಲವು ಜಾತಿ ಲೆಕ್ಕಾಚಾರದಿಂದ ಬಿಜೆಪಿ ಟಿಕೆಟ್‌ ಘೋಷಿಸಿದೆ.ಬಿಜೆಪಿ ಲೋಕಸಭೆ ಟಿಕೆಟ್‌ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರು ನಿರ್ಣಾಯಕರಾಗಿರುವ ಕಾರಣ ಬಿಜೆಪಿಯ ಪ್ರಕಟಿತ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದವರಿಗೆ ಸಿಂಹಪಾಲು ಸಿಕ್ಕಿದ್ದು, …

Read More »