ಬೆಂಗಳೂರು, : ಅಪರಿಚಿತ ಮಹಿಳೆಯ ಮುಖ ಜಜ್ಜಿ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ (Vaddarahalli) ಗ್ರಾಮದ ಬಳಿ ನಡೆದಿದೆ. ನರಸಿಂಹಮೂರ್ತಿ ಎಂಬುವರ ಜಮೀನಿನಲ್ಲಿ ಅಂದಾಜು 35 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆನೆಲಮಂಗಲಎಎಸ್ಪಿ ಪುರುಷೋತ್ತಮ್ ಹಾಗೂ ಡಿವೈಎಸ್ಪಿ ಜಗದೀಶ್ ಭೇಟಿ ನೀಡಿ, ಸೋಕೋ ಟೀಮ್ ಹಾಗೂ ಡಾಗ್ ಸ್ಕೋರ್ಡ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಟ್ಟ ಸ್ಥಿತಿಯಲ್ಲಿ …
Read More »ಜಾತಿಗಣತಿ ವರದಿ ಸ್ವೀಕಾರ: ಈ ಬಗ್ಗೆ ತುಮಕೂರು ಸಿದ್ಧಗಂಗಾಶ್ರೀ ಹೇಳಿದ್ದಿಷ್ಟು
ತುಮಕೂರು, ಫೆಬ್ರವರಿ 29: ಜಾತಿಗಣತಿ ವರದಿ ಸಲ್ಲಿಕೆಗೆ ತೀವ್ರ ವಿರೋಧವ್ಯಕ್ತವಾಗಿತ್ತು. ಅವೈಜ್ಞಾನಿಕ ವರದಿ ಎಂದು ಒಕ್ಕಲಿಗ, ವೀರಶೈವಲಿಂಗಾತ ಸಮುದಾಯ ವಿರೋಧ ಮಾಡಿತ್ತು. ಇದೀಗ ವಿರೋಧದ ನಡುವೆಯೇ ಜಾತಿಗಣತಿ ವರದಿ ಸಿಎಂ ಸಿದ್ದರಾಮಯ್ಯ ಕೈಸೇರಿದೆ. ಸದ್ಯ ಈ ವಿಚಾರವಾಗಿ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ(Siddaganga Shree)ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು …
Read More »ಕನ್ನಡ ನಾಮಫಲಕ: ಗಡುವು ವಿಸ್ತರಿಸಿದ್ದಕ್ಕೆ ಕರವೇ ನಾರಾಯಣಗೌಡ ಗರಂ
ಬೆಂಗಳೂರು, (ಫೆಬ್ರವರಿ 29): ಕರ್ನಾಟಕದ (Karnataka) ಎಲ್ಲಾ ಅಂಗಡಿ ಮಳಿಗೆಗಳ ಬೋರ್ಡ್ಗಳಲ್ಲಿ (Kannada Board) ಶೇ.60 ರಷ್ಟು ಕನ್ನಡ ಅಳವಡಿಕೆಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಇದರಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ (karave Narayana Gowda) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ (BBMP) ಆಯುಕ್ತರ ಜತೆ ನಿನ್ನೆ(ಫೆಬ್ರವರಿ 28) ಮಾತನಾಡಿದಾಗ ಮಧ್ಯರಾತ್ರಿ ತನಕ ಗಡುವು ಅಂದಿದ್ದರು. ಅಲ್ಲದೇ ನಿಯಮ ಉಲ್ಲಂಘಿಸಿದರೆ. ಮುಲಾಜಿಲ್ಲದೇ ಕ್ರಮ ಕೈಗೊಳ್ಳುವ ಕುರಿತು ಬಿಬಿಎಂಪಿ ಕಮೀಷನರ್ ತಿಳಿಸಿದ್ದರು. …
Read More »ಮತ್ತೆ ಮುನ್ನಲೆಗೆ ಬಂದ ಗದಗಿನ ಶಿವಾನಂದ ಮಠದ ಶ್ರೀಗಳ ಪೀಠ ಗುದ್ದಾಟ! ಮಠದ ಅಂಗಳದಲ್ಲಿ ಬಿಗುವಿನ ವಾತಾವರಣ
ಗದಗ, ಫೆ.29: ಜಿಲ್ಲೆಯ ಪ್ರತಿಷ್ಟಿತ ಶಿವಾನಂದ ಮಠದ ಉಭಯ ಶ್ರೀಗಳ ಪೀಠ ಗಲಾಟೆ (Shivananda Mutt succession controversy) ಮತ್ತೆ ಜೋರಾಗಿದೆ. ಕಳೆದ ವರ್ಷದಿಂದಉಭಯ ಶ್ರೀಗಳನಡುವಿನ ಗುದ್ದಾಟ ಬಲು ಜೋರಾಗಿದೆ. ವರ್ಷಗಳು ಕಳೆದರೂ ಇನ್ನೂ ವೈಮನಸ್ಸು ದೂರವಾಗಿಲ್ಲ. ಇನ್ನು ಮಾರ್ಚ್ 8, ಶಿವರಾತ್ರಿ ದಿನದಂದು ಶಿವಾನಂದ ಮಠದ ಜಾತ್ರಾಮಹೋತ್ಸವ ನಡೆಯಲಿದೆ. ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರಾಮಹೋತ್ಸವ ನಡೆಸಲು ಸಜ್ಜಾಗಿದ್ದಾರೆ. ಇದು ಕಿರಿಯ ಶ್ರೀಗಳು ಹಾಗೂ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. …
Read More »ಸಮಾಜದ ಕಟ್ಟಕಡೆಯ ವ್ಯಕ್ತಿ ಸಹ ಉನ್ನತ ಸ್ಥಾನ ತಲುಪಬೇಕೆಂದು ಶಿವರಾಮು ಹೇಳುತ್ತಿದ್ದರು: ಸಿದ್ಧರಾಜು, ನಿವೃತ್ತ ಐಪಿಎಸ್ ಅಧಿಕಾರಿ
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತು ಕನ್ನಡದಲ್ಲಿ ಐಎಎಸ್ (IAS) ಬರೆದು ಪಾಸಾದ ನಾಡಿನ ಮೊದಲಹೆಮ್ಮೆಯ ಕುವರ ಕೆ ಶಿವರಾಮ್(K Shivaram) ಕೊನೆಯುಸಿರೆಳೆದಿದ್ದಾರೆ. ದಕ್ಷ ಆಡಳಿತಾಧಿಕಾರಿಯಾಗಿ ಹೆಸರು ಮಾಡಿದ್ದ ಶಿವರಾಮು ಸ್ಯಾಂಡಲ್ ವುಡ್ ನಟ (actor) ಕೂಡ ಆಗಿದ್ದರು ಹಾಗೂ ನಿವೃತ್ತಿಯ ಬಳಿಕ ರಾಜಕೀಯಕ್ಕಿಳಿದು ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಿಧನ ಕೇವಲ ಸಂಬಂಧಿಕರಿಗೆ ಮತ್ತು ಅಭಿಮಾನಿಗಳಿಗೆ ಮಾತ್ರವಲ್ಲ, ಅವರನ್ನು ಬಲ್ಲ ಅನೇಕರಿಗೆ ಆಘಾತಕಾರಿ ಸಂಗತಿಯಾಗಿದೆ ಎಂದು ಅವರ ಒಡನಾಡಿ …
Read More »ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ, ಹೆಗಲ ಮೇಲೆ ಹೊತ್ತು ಓಡಿ ಪ್ರಾಣ ಉಳಿಸಿದ ಕಾನ್ಸ್ಟೇಬಲ್
ಮನೆಯಲ್ಲಿ ನಡೆದ ಸಣ್ಣ ಜಗಳದಿಂದ ಯುವಕನೊಬ್ಬ ಖಿನ್ನತೆಗೆ ಒಳಗಾಗಿ ಕೀಟನಾಶಕ ಕುಡಿದು ಪ್ರಜ್ಞೆ ತಪ್ಪಿ ಬಿದ್ದಿದ್ದ. ಆತನನ್ನು ಗಮನಿಸಿದ ಪೊಲೀಸ್ ಪೇದೆಯೊಬ್ಬರು ಆತನನ್ನು ಹೆಗಲ ಮೇಲೆ ಎತ್ತಿಕೊಂಡು ಎರಡು ಕಿಲೋಮೀಟರ್ ಓಡಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಪೊಲೀಸ್ ಪೇದೆ ಹಾಘೂ ಗೃಹರಕ್ಷಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಸಣ್ಣದೊಂದು ವಿಚಾರಕ್ಕೆ ಮನೆಯಲ್ಲಿ ನಡೆದ ಜಗಳದಿಂದ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ (Young Man) ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಸಮಯ …
Read More »ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬೊಮ್ಮಾಯಿ
ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ- ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಸಾಂವಿಧಾನಿಕ ಕ್ರಮ ಕೈಗೊಳ್ಳುವಂತೆ …
Read More »ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!
ಬೆಂಗಳೂರು: ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ. ಜವಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯುವ ಮನಸ್ಸುಗಳಲ್ಲಿ …
Read More »ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ
ಬೆಂಗಳೂರು: ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ ಕಾಂಗ್ರೆಸ್ ವಿರುದ್ಧ ಕಿಡಿಕಾರುವ ಬರದಲ್ಲಿ, “ಕೇಂದ್ರ ಸರ್ಕಾರ …
Read More »ನಾಸೀರ್ ಹುಸೇನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು: ಶೋಭಾ ಕರಂದ್ಲಾಜೆ
ಉಡುಪಿ: ಪಾಕಿಸ್ತಾನ ಜಿಂದಾಬಾದ್ (Pro Pakistan Slogan) ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ (Syed Naseer Hussain) ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ (Vidhan Soudha) ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಉಡುಪಿಯಲ್ಲಿ (Udupi) ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸಯ್ಯದ್ ನಾಸೀರ್ …
Read More »
Laxmi News 24×7