ಹಾವೇರಿ: ರಾಜ್ಯದಲ್ಲಿ ರಸ್ತೆ ಅಪಘಾತಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತಿರುವ ಜಿಲ್ಲೆಗಳಲ್ಲಿ ಹಾವೇರಿಯೂ ಒಂದು. ಜಿಲ್ಲೆಯಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿರುವ ಸಂಖ್ಯೆ 200ಕ್ಕೂ ಅಧಿಕ ಇದೆ. ಅದರಲ್ಲೂ ಹೆಚ್ಚಿನ ಸಾವು ಬೈಕ್ ಸವಾರರದ್ದಾಗಿದೆ. ಹೀಗಿದೆ ಅಂಕಿಅಂಶ: 2021ರಲ್ಲಿ ರಸ್ತೆ ಅಪಘಾತದಲ್ಲಿ 1,236 ಜನ ಗಾಯಗೊಂಡರೆ ಸಾವನ್ನಪ್ಪಿದವರ ಸಂಖ್ಯೆ 230 ಇತ್ತು. 2022ರಲ್ಲಿ 1385 ಜನ ರಸ್ತೆ ಅಪಘಾತಗಳಲ್ಲಿ ಗಾಯಗೊಂಡರೆ ಮೃತಪಟ್ಟವರ ಸಂಖ್ಯೆ 284. ಹಾಗೇ 2023 ರಲ್ಲಿ ಅಕ್ಟೋಬರ್ರೆಗೆ 1,134 ಜನ ರಸ್ತೆ …
Read More »ಹಣದ ಬದಲು ಅಕ್ಕಿ ವಿತರಿಸಲು ಕ್ರಮ:K.H. ಮುನಿಯಪ್ಪ
ಬೆಳಗಾವಿ/ ಬೆಂಗಳೂರು : ಆಹಾರ ಭದ್ರತೆಯಡಿ ಪಡಿತರದಾರರಿಗೆ ಕೇಂದ್ರದ 5 ಕೆ ಜಿ ಆಹಾರ ಧಾನ್ಯ ವಿತರಣೆ ಜೊತೆ ರಾಜ್ಯದಿಂದ ಪೂರೈಸಬೇಕಿದ್ದ 5 ಕೆ ಜಿ ಅಕ್ಕಿ ಬದಲು ನೀಡಲಾಗುತ್ತಿರುವ ಹಣವನ್ನು ಹೆಚ್ಚು ಮಾಡುವುದಿಲ್ಲ. ಕೇಂದ್ರ ಆಹಾರ ನಿಗಮ ನಿಗದಿಪಡಿಸಿದ ಹಣವನ್ನೇ ನಾವು ಫಲಾನುಭವಿಗಳ ಖಾತೆಗೆ ನೀಡುತ್ತಿದ್ದೇವೆ. ಆದಷ್ಟು ಬೇಗ ಹಣದ ಬದಲು ಅಕ್ಕಿಯನ್ನೇ ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ. …
Read More »ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಧೈರ್ಯ ತುಂಬಿದ ಗೃಹ ಸಚಿವರು
ಬೆಳಗಾವಿ: ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಹಲ್ಲೆಗೊಳಗಾದ ಮಹಿಳೆಯಿಂದ ಗೃಹ ಸಚಿವ ಜಿ ಪರಮೇಶ್ವರ್ ಅವರು ಘಟನೆ ಕುರಿತು ಮಾಹಿತಿ ಪಡೆದು, ಧೈರ್ಯ ತುಂಬಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ …
Read More »ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದ ಬಿ.ಕೆ ಹರಿಪ್ರಸಾದ್
ಬೆಳಗಾವಿ : ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸೂಚ್ಯವಾಗಿ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಮಾತಮಾಡಿದ ಅವರು, ಬೆಂಗಳೂರಿನಲ್ಲಿ ಬಿಲ್ಲವ ಈಡಿಗರ ಸಮಾವೇಶ ನಡೆದ ವಿಚಾರವಾಗಿ ಪ್ರತಿಕ್ರಿಯಿಸಿದರು. ಸಮುದಾಯ ಒಡೆಯಲು ಈ ಸಮಾವೇಶ ನಡೆದಿದೆ ಎಂಬ ದಾಟಿಯಲ್ಲಿ ನಾನು ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುಳಿದ ವರ್ಗಗಳ ಜಾತಿ ಗಣತಿ ಆಗಬೇಕು ಎಂದಿದ್ದಾರೆ. ಯಾವುದೇ ಸಮುದಾಯ ಒಡೆಯುವ ಕೆಲಸ ಆಗಬಾರದು. ಸಮಾವೇಶದಲ್ಲಿ ಸಮಾಜದ …
Read More »ಸುವರ್ಣಸೌಧದ ಹಾಲ್ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್ಗೆ ರಾಯರೆಡ್ಡಿ ಮನವಿ
ಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ ಭಾವಚಿತ್ರ ಸರಿಪಡಿಸುವ ಹಾಗೂ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್ ಯು ಟಿ ಖಾದರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಸಭಾಭವನದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಹಾಕಲಾಗಿದೆ. ಹಾಲಿ ಇರುವ ಭಾವ ಚಿತ್ರದ ಬದಲಾಗಿ ಮೂಲ ಕಿರೀಟ ಧರಿಸಿರುವ ಬಸವೇಶ್ವರರ …
Read More »ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಸುಳ್ಳು ಪ್ರಚಾರದಿಂದ ನಮ್ಮ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗಲ್ಲ
ಬೆಳಗಾವಿ: ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನ ಅಭದ್ರ ಮಾಡುವುದು ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕನ ಉದ್ದೇಶ ಆಗಿರಬಾರದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. 50 ರಿಂದ 60 ಮಂದಿ ಶಾಸಕರ ಜೊತೆ ಪ್ರಭಾವಿ ಸಚಿವರೊಬ್ಬರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹೆಚ್ಡಿಕೆ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಕೊಡುವ ಪ್ರಯತ್ನವಾಗಿದೆ. ಈ ರೀತಿ ಪ್ರಯತ್ನ ಮಾಡಿದವರ …
Read More »ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ, ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ ಮೇಲೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ಮೆರೆದಿದ್ದಾರೆ. 42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು. ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಕೀಚಕರು ಅಮಾನವೀಯವಾಗಿ ವರ್ತಿಸಿದ್ದಾರೆ. ಯುವತಿಗೆ ಇಂದು ನಿಶ್ಚಯವಾಗಿದ್ದ ನಿಶ್ಚಿತಾರ್ಥ: ಯುವಕ ಮತ್ತು ಯುವತಿ …
Read More »ಇಂದಿನಿಂದ ಮೂರು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ
ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಇಂದು ಚಾಲನೆ ಸಿಗಲಿದೆ. ಬಸವನಗುಡಿ ಸುತ್ತಮುತ್ತ ಪರಿಷೆ ರಂಗೇರಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ಜನ ಸಾಗರವೇ ನೆರೆದಿತ್ತು. ಇಂದು ಅಧಿಕೃತ ಚಾಲನೆ ಸಿಗಲಿದ್ದು, ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಸಚಿವರು ದೊಡ್ಡ ಗಣೇಶನ ದೇವಸ್ಥಾನಕ್ಕೆ ಆಗಮಿಸಿ ವಿಶೇಷ …
Read More »ಪುನಾರಂಭ ಆಗಲಿರುವ ಅಧಿವೇಶನ ಜಮೀರ್ ವಿವಾದಾತ್ಮಕ ಹೇಳಿಕೆ, ಡಿಕೆಶಿ ಕೇಸ್ ವಾಪಸ್ ವಿಚಾರ; ಹೆಚ್ಚಲಿದೆಯಾ ಸದನ ಕಾದಾಟ?
ಬೆಳಗಾವಿ/ಬೆಂಗಳೂರು: ಚಳಿಗಾಲದ ಅಧಿವೇಶನ ಶುರುವಾಗಿ ಮೊದಲ ಐದು ದಿನ ಕಳೆದಿದ್ದು, ಕಲಾಪ ಇನ್ನು ಐದು ದಿನ ಕಾಲ ಮಾತ್ರ ನಡೆಯಲಿದೆ. ಸೋಮವಾರದಿಂದ ಪುನಾರಂಭ ಆಗಲಿರುವ ಅಧಿವೇಶನದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಹಾಗೂ ಡಿಕೆಶಿ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ಅನುಮತಿ ವಾಪಸ್ ಪಡೆದಿರುವ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ. ಇದರಿಂದ ಸದನದಲ್ಲಿ ಕದನ ಕಾವೇರುವ ಸಾಧ್ಯತೆ ಇದೆ. ಮೊದಲ ವಾರದ ಐದು ದಿನದ ವಿಧಾನಸಭೆ ಕಲಾಪದಲ್ಲಿ ಬೆಳಗಾವಿ ಬಿಜೆಪಿ …
Read More »ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಕುಟುಂಬ ಸಮೇತ ಕುಂದಾನಗರಿ ಜನ ಆಗಮಿಸಿ ಕಣ್ತುಂಬಿಕೊಂಡರು.
ಬೆಳಗಾವಿ: ನಗರದಲ್ಲಿ ಮೂರು ದಿನ ಕಾಲ ಹಮ್ಮಿಕೊಂಡಿರುವ 64ನೇ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ವೀಕೆಂಡ್ ಇರುವ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಹೌದು, ಬೆಳಗಾವಿ ಹ್ಯೂಮ್ ಪಾರ್ಕ್ನಲ್ಲಿ ಜಿಪಂ, ತೋಟಗಾರಿಕೆ ಇಲಾಖೆ, ಕೃಷಿ , ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ವಿವಿಧ ಹೂವುಗಳಿಂದ ತಯಾರಿಸಿದ್ದ …
Read More »
Laxmi News 24×7