Breaking News

ರಾಜಕೀಯ

ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ

ಬೆಳಗಾವಿ/ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಲಾಯಿತು. ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು. ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು …

Read More »

ನಿಷೇಧದ ನಡುವೆ ಎಂಇಎಸ್ ಮುಖಂಡರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘೋಷಣೆ ಕೂಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿನ ಹುತಾತ್ಮ ಸ್ಮಾರಕಕ್ಕೆ ಭೇಟಿ ನೀಡಿದ ಎಂಇಎಸ್ ನಾಯಕರು, ಗೌರವ ಸಲ್ಲಿಸಿದರು. ನಿಷೇಧಾಜ್ಞೆ ಹೇರಿದ್ದರಿಂದ ಕರ್ನಾಟಕದಲ್ಲಿ ಅನುಮತಿ ಸಿಗದ ಹಿನ್ನೆಲೆ ಮಹಾರಾಷ್ಟ್ರದ ಶಿನೊಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಶಿನೊಳ್ಳಿಗೆ ತೆರಳುವ ಮುನ್ನ ಹುತಾತ್ಮರ ಸ್ಮಾರಕಕ್ಕೆ ಎಂಇಎಸ್ ನಾಯಕರು …

Read More »

ಚಳಿಗಾಲದ ಅಧಿವೇಶನ ಪ್ರಾರಂಭ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ

ಬೆಳಗಾವಿ: ಇವತ್ತಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಈ ಭಾಗವನ್ನು ಕೇಂದ್ರಸ್ಥಳವಾಗಿ ಇಟ್ಟುಕೊಂಡು ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಚರ್ಚೆಯಾಗಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಹಿನ್ನಡೆ: ತೆಲಂಗಾಣದಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ್ದಕ್ಕೆ ಸಂತೋಷವಾಗಿದೆ. ಮೂರು ರಾಜ್ಯಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ನಾವು ಈ ರೀತಿ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಹಿಂದಿ ಭಾಷೆಯ ಪ್ರಾಂತ್ಯದಲ್ಲಿ ನಮಗೆ …

Read More »

ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು

ಬೆಂಗಳೂರು: ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆಯಿತು. ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್​ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ …

Read More »

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ ನಾಯಕತ್ವ ನೀಡಿಲ್ಲ. ನಾವು ದ.ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎಂದು ಅಸಮಾಧಾನ ಹೊರಹಾಕಿದರು. ದೇಶಕ್ಕೆ ನರೇಂದ್ರ ಮೋದಿಯೇ ಗ್ಯಾರಂಟಿ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ …

Read More »

ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣದಲ್ಲಿ ಗೆದ್ದೆವಾ?: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇವತ್ತಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್​ಗಳು ಇವೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ನಮ್ಮ ಸರ್ಕಾರ ತಯಾರಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರೆಂಟಿಗಳು ವರ್ಕೌಟ್ ಆಗಲಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣ …

Read More »

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ

Read More »

ಸೂಕ್ತ ಸಮಯಕ್ಕೆ ಬರುವ ಶಾಸಕರಿಗೆ ಕಾಫಿ ಕಪ್ ಗಿಫ್ಟ್,: ಸ್ಪೀಕರ್ ಯುಟಿ ಖಾದರ್

ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಸೂಕ್ತ ಸಮಯಕ್ಕೆ ಬರುವ ಶಾಸಕರುಗಳಿಗೆ ಉಡುಗೊರೆ ಕೊಡಲಾಗುತ್ತಿದೆ. ಇನ್ನು ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಮಾತನಾಡಿದ್ದು, ಅದು ಈ ಕೆಳಗಿನಂತಿದೆ,    ಬೆಳಗಾವಿ, (ಡಿಸೆಂಬರ್ 04) : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Session)ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ …

Read More »

ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ :ಉತ್ತರ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿ (Belagavi) ಜಿಲ್ಲೆ. ಈ ಭಾಗದ ಬಡವರಿಗೆ, ರೈತರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಸುವರ್ಣಸೌಧ (Suvarna soudha) ಚಿಂತನೆ ಮಾಡಿದ್ದು ಮಾಜಿ ಸಿಎಂ ಯಡಿಯೂರಪ್ಪನವರು (B S Yediyurappa). ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನತೆ …

Read More »

ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ಅಧಿವೇಶನ (Belagavi Winter Session) ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ವಿಪಕ್ಷಗಳಿಂದ ನಿಲುವಳಿ ನೋಟಿಸ್ (Adjournment notice) ಜಾರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿ ನೋಟಿಸ್ ನೀಡಿದ್ದು, ಸದನದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ (Congress Government) ವೈಫಲ್ಯ ಚರ್ಚಿಸಲು ಆಗ್ರಹಿಸಿವೆ.   ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ …

Read More »