Breaking News

ರಾಜ್ಯ

ಅಂಗಾಂಗ ದಾನ ಮಾಡದ ವ್ಯಕ್ತಿಗೆ ಸರ್ಕಾರಿ ಗೌರವ ಸಲ್ಲಿಸಿದ ತಮಿಳುನಾಡು ಸರ್ಕಾರ

ಚೆನ್ನೈ (ತಮಿಳುನಾಡು): ರಸ್ತೆ ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬಸ್ಥರು ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ತಿರುಪತಿಯ ಚಿತ್ತೂರು ರಾಘವೇಂದ್ರ ನಗರದ ನಿವಾಸಿಯಾದ ಯುವರಾಜುಲು ನಾಯ್ಡು (61) ಅವರು, ನವೆಂಬರ್ 3 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಾಶತ್​ ಅವರು ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 7ರ ಸಂಜೆ 5.52ಕ್ಕೆ ನಿಧನರಾಗಿದ್ದರು. ನಂತರ ಯುವರಾಜುಲು ನಾಯ್ಡು …

Read More »

ಬರ ಪರಿಹಾರ ಒದಗಿಸಲು ಸರ್ಕಾರ ರೈತರ ಬೆನ್ನೆಲುಬಾಗಿ ನಿಂತಿದೆ: ಸಚಿವ ಬಿ ನಾಗೇಂದ್ರ

ಬಳ್ಳಾರಿ: ಈ ಬಾರಿಯ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಯಾರೂ ಆತಂಕ ಪಡಬಾರದು. ಸರ್ಕಾರ ಮತ್ತು ಜಿಲ್ಲಾಡಳಿತ ನಿಮ್ಮ ಜತೆಗಿದೆ ಎಂದು ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ ಅವರು ರೈತರಿಗೆ ಧೈರ್ಯ ತುಂಬಿದರು. ಇಂದು ಜಿಲ್ಲೆಯ ಸಿರುಗುಪ್ಪ-ಕುರುಗೋಡು ತಾಲೂಕುಗಳ ವ್ಯಾಪ್ತಿಯ ವಿವಿಧ ಗ್ರಾಮಗಳಾದ ರಾರಾವಿ, ಅಗಸನೂರು, ಬೊಮ್ಮಲಾಪುರ, ಕೊತ್ತಲಚಿಂತೆ, ಮಿಟ್ಟೆ ಸುಗೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ …

Read More »

ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕರ ಆಯ್ಕೆ

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿದ್ದಾರೆ. ಈ ವೇಳೆ, ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡ ಅವರು, ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದ ದಿನವೇ, ಪ್ರತಿಪಕ್ಷ ನಾಯಕರ ಆಯ್ಕೆಯ ದಿನಾಂಕದ ಬಗ್ಗೆ ಘೋಷಿಸಿದ್ದಾರೆ. ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಅಭಿಪ್ರಾಯ ಪಡೆದು ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಕ್ಕಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ನೇತೃತ್ವದಲ್ಲೇ ಎಲ್ಲ ಶಾಸಕರ ಅಭಿಪ್ರಾಯ ಪಡೆದು, ಅವರ ಎದುರಲ್ಲೇ ಹೆಸರು ಘೋಷಣೆ …

Read More »

ಸಿದ್ದರಾಮಯ್ಯ ಅತೀ ಹೆಚ್ಚು ಸುಳ್ಳು ಹೇಳುವ ಸಿಎಂ: ಮಾಜಿ ಎಂಎಲ್​ಸಿ ರಮೇಶ್

ಚಾಮರಾಜನಗರ: “ರಾಜ್ಯದಮುಖ್ಯಮಂತ್ರಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ರಮೇಶ್ ಕಿಡಿಕಾರಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಿಂದೆ ಹೆಚ್ಚು ಸುಳ್ಳು ಹೇಳುವ ಮುಖ್ಯಮಂತ್ರಿ ಎಂದರೆ ವೀರಪ್ಪ ಮೊಯ್ಲಿ ಎಂದು ಹೇಳುತ್ತಿದ್ದರು, ಆದರೆ ಸಿದ್ದರಾಮಯ್ಯ ಅವರ ದುಪ್ಪಟ್ಟು ಸುಳ್ಳು ಹೇಳುತ್ತಾರೆ” ಎಂದು ಟೀಕಿಸಿದರು. “ಪ್ರಜಾಪ್ರಭುತ್ವದ ಬಗ್ಗೆ, ರಾಜ್ಯ ಸರ್ಕಾರದ ನಿಯಮಗಳ ಬಗ್ಗೆ ಅವರು ಬಹಳಷ್ಟು ಮಾತನಾಡುತ್ತಾರೆ. ಅವರ …

Read More »

ಅವಳಿ ನಗರಕ್ಕೆ ಬಂತು “ಭಾರತ್ ಬ್ರಾಂಡ್” : ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ

ಹುಬ್ಬಳ್ಳಿ : ದೀಪಾವಳಿಯ ಉಡುಗೊರೆಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ “ಭಾರತ್ ಬ್ರಾಂಡ್” ಬೇಳೆ, ಈರುಳ್ಳಿಯಂತಹ ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿಕೊಂಡಿದೆ.   ಹುಬ್ಬಳ್ಳಿ ಧಾರವಾಡದಲ್ಲಿ ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದಿಂದ ಒಟ್ಟು ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಅತ್ಯಂತ ಕಡಿಮೆ‌ ದರದಲ್ಲಿ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ₹80 ಇದ್ದರೆ, ಭಾರತ್ ಬ್ರಾಂಡ್ ಸಂಚಾರಿ ವಾಹನದಲ್ಲಿ ₹25ಗೆ …

Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕಿಂತ ಮುಂಚೆ ತುಘಲಕ್ ದರ್ಬಾರ್​​ನ ರೈತ ವಿರೋಧಿ ಆದೇಶಗಳನ್ನು ವಾಪಸ್​ ಪಡೆದು ಮುಖ್ಯಮಂತ್ರಿಗಳು ಬೆಳಗಾವಿಗೆ ಬರಬೇಕು. ಇಲ್ಲದಿದ್ದರೆ ರೈತರು ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ. ಅಲ್ಲದೇ ವಿದ್ಯುತ್ ಖಾತೆ ಬಗ್ಗೆ ಜ್ಞಾನವಿಲ್ಲದ ಕೆ. ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ …

Read More »

ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್​​ನ​ನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.

ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್​ನ್ನು ಕೊನೆಗೂ ಬಂಧನ ಮಾಡಲಾಗಿದೆ. ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್​ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್​ 6 ರಂದು ಕಲಬುರಗಿ ನಗರದ …

Read More »

ಹಾಡಹಗಲೇ ರಸ್ತೆಯಲ್ಲಿ ಮಹಿಳೆ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಹಾಡಹಗಲೇ ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಇಟ್ಟಿಗೆ, ಚಪ್ಪಲಿಯಿಂದ ಥಳಿಸಿದ ಘಟನೆ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಗುರುವಾರ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್​ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಹಿಳೆ ಮೇಲೆ ವ್ಯಕ್ತಿ ಸೇರಿದಂತೆ ಕೆಲ ಮಹಿಳೆಯರು ಹಲ್ಲೆ ನಡೆಸಿದ್ದು, ಕಾರಣ ಏನೆಂಬುದು ತಿಳಿದು ಬಂದಿಲ್ಲ. ವ್ಯಕ್ತಿಯ ಕುಟುಂಬಸ್ಥರೂ ಸೇರಿಕೊಂಡು ಮಹಿಳೆಗೆ ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದರಿ ಮಧ್ಯ …

Read More »

ಹೊಸ ಸಂಸತ್​ ಭವನದಲ್ಲಿ ಡಿಸೆಂಬರ್​ 4 ರಿಂದ ಚಳಿಗಾಲದ ಅಧಿವೇಶನ

ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್​ ಅಧಿವೇಶನ ಡಿಸೆಂಬರ್​ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ.     ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ (ಟ್ವಿಟರ್​) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು …

Read More »

ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ

ಗಂಗಾವತಿ (ಕೊಪ್ಪಳ) : ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಸುರಿದ ಅಕಾಲಿಕ ಮಳೆ ಹಾಗೂ ಬೀಸಿದ ಭಾರಿ ಗಾಳಿಗೆ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ 3500ಕ್ಕೂ ಅಧಿಕ ಹೆಕ್ಟೇರ್​ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದೆ.   ಕೊಯ್ಲಿನ ಹಂತಕ್ಕೆ ಬಂದಿದ್ದ ಸೋನಾಮಸೂರಿ ತಳಿಯ ಭತ್ತದ ಬೆಳೆ ಹೆಚ್ಚಿನ ಹಾನಿಯಾಗಿದೆ. ಕಾರಟಗಿ ತಾಲೂಕು ಒಂದರಲ್ಲಿಯೇ ಅತಿಹೆಚ್ಚು ಹಾನಿಯಾಗಿದ್ದು, ಸುಮಾರು ಮೂರು ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಭತ್ತ ಹಾನಿಯಾಗಿದೆ. ಗಂಗಾವತಿ ತಾಲೂಕಿನಲ್ಲಿ …

Read More »