ಬಾಗಲಕೋಟೆ : ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವುದನ್ನು ಬಿಟ್ಟು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ತರುವ ಪ್ರಯತ್ನ ಮಾಡಿ ಎಂದು ಅಬಕಾರಿ ಸಚಿವ ಆರ್. ಬಿ ತಿಮ್ಮಾಪೂರ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರಿಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಟೀಲ್ ಸಾಹೇಬರೆ ಬರೀ ಮಾತನಾಡುವುದು, ಗಲ್ಲಿ ಗಲ್ಲಿ ಸಂಚಾರ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ ಹಣ ತೆಗೆದುಕೊಂಡು ಬನ್ನಿ ಎಂದು ತಿರುಗೇಟು ನೀಡಿದರು. …
Read More »ನೌಕರರಿಗೆ ಸರ್ಪ್ರೈಸ್ ಆಗಿ ರಾಯಲ್ ಎನ್ಫೀಲ್ಡ್ ಬುಲೆಟ್ ಗಿಫ್ಟ್ ನೀಡಿದ ಮಾಲೀಕ
ಚೆನ್ನೈ (ತಮಿಳುನಾಡು): ದೀಪಾವಳಿ ಹಬ್ಬದ ನಿಮಿತ್ತ ತಮಿಳುನಾಡಿನ ಉದ್ಯಮಿ, ಟೀ ಎಸ್ಟೇಟ್ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ಸರ್ಪ್ರೈಸ್ ಆಗಿಯೇ ಭರ್ಜರಿ ಗಿಫ್ಟ್ ನೀಡಿದ್ದಾರೆ. ದೀಪಾವಳಿ ಬೋನಸ್ ಆಗಿ ತಮ್ಮ 15 ಜನ ನೌಕಕರಿಗೆ ರಾಯಲ್ ಎನ್ಫೀಲ್ಡ್ ಬುಲೆಟ್ ಸೇರಿದಂತೆ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತಿರುಪುರ ಮೂಲದ ಉದ್ಯಮಿ ಶಿವಕುಮಾರ್ ಎಂಬುವವರೇ ಈ ಬಾರಿ ದೀಪಾವಳಿ ಹಬ್ಬದ ಖುಷಿಗೆ ತಮ್ಮ ಕಾರು ಚಾಲಕನಿಂದ ಹಿಡಿದು ಮ್ಯಾನೇಜರ್ವರೆಗೆ ಯಾರಿಗೂ ತಾರತಮ್ಯ …
Read More »ಶಿವಮೊಗ್ಗ ರೈಲು ನಿಲ್ದಾಣದ ಬಳಿ 2 ಅನುಮಾನಾಸ್ಪದ ಬಾಕ್ಸ್ ಪತ್ತೆ
ಶಿವಮೊಗ್ಗ : ನಗರದ ಮುಖ್ಯ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದ ಬಳಿ ಎರಡು ಅನುಮಾನಾಸ್ಪದ ಬಾಕ್ಸ್ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆಂತಕ ಉಂಟು ಮಾಡಿದೆ. ಪತ್ತೆಯಾದ ಎರಡು ಬಾಕ್ಸ್ಗಳು ನಿನ್ನೆಯಿಂದಲೂ ಅದೇ ಜಾಗದಲ್ಲಿದ್ದು, ಇಂದು ಆಟೋ ಚಾಲಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಕ್ಸ್ ಸುತ್ತಲೂ ಮರಳಿನ ಚೀಲ ಹಾಕಿದ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಯನಗರ ಠಾಣೆ ಪೊಲೀಸರು ಬಾಕ್ಸ್ ಪರಿಶೀಲನೆಗೆ ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಅನ್ನು ಕರೆಯಿಸಿ …
Read More »ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು
ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ ಗುಂಪು ಬೇಟೆಗೆ ಬಂದಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದರು. ಆಗ ಅರಣ್ಯ …
Read More »ಯಾರಿಗೆಲ್ಲ ಸೆಮಿಫೈನಲ್ ಪ್ರವೇಶಿಸುವ ಅವಕಾಶ? ಹೀಗಿದೆ ಲೆಕ್ಕಾಚಾರ
ಚೆನ್ನೈ: ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಅದ್ಭುತ ಪ್ರದರ್ಶನ ತೋರುತ್ತಿದ್ದು ಈಗಾಗಲೇ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡವೂ ಸೆಮಿಫೈನಲ್ ಸುತ್ತು ಪ್ರವೇಶಿಸಿದೆ. ಸತತ ಗೆಲುವಿನಿಂದ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಈಗಾಗಲೇ ಏಳು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನೂ ಗೆದ್ದಿರುವ ಟೀಮ್ ಇಂಡಿಯಾ, ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈಗಾಗಲೇ ಎರಡೂ ತಂಡಗಳು ಸೆಮಿಫೈನಲ್ ಪ್ರವೇಶಿಸಿರುವುದರಿಂದ ಈ ಗೆಲುವು ಇತ್ತಂಡಗಳಿಗೂ ಮುಖ್ಯ. ಭಾರತ ಏಳು …
Read More »ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚುವರಿ 2,000 ಬಸ್ಗಳ ವ್ಯವಸ್ಥೆ
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿಯಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 12ರಂದು ನರಕ ಚತುರ್ದಶಿ, ನವೆಂಬರ್ 14ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯಾಗಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ …
Read More »ಅಂಗಾಂಗ ಕಸಿಗೆ ಹೆಚ್ಚಿನ ಬೇಡಿಕೆ: ಕೊರತೆ ನಿವಾರಿಸಲು ”ಆರ್ಗನ್ ಡೋನರ್ಸ್ ನೀತಿ” ಜಾರಿಗೆ ಸರಕಾರದ ಸಿದ್ಧತೆ
ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ಕಸಿಗೆ ಸಾವಿರಾರು ಜನ ರೋಗಿಗಳು ಹಲವಾರು ವರ್ಷಗಳಿಂದ ಕಾಯತೊಡಗಿದ್ದು, ಸಾರ್ವಜನಿಕರಲ್ಲಿ ಅಂಗಾಂಗ ದಾನ ವನ್ನು ಪ್ರೇರೇಪಿಸಲು ”ಆರ್ಗನ್ ಡೋನರ್ಸ್ ನೀತಿ” ಅನುಷ್ಠಾನಕ್ಕೆ ತರಲು ರಾಜ್ಯ ಸರಕಾರ ಸಿದ್ಧತೆ ನಡೆಸಿದ್ದು ಅದಕ್ಕಾಗಿ ರೂಪುರೇಷೆ ಅಂತಿಮಗೊಳಿಸುತ್ತಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಿಡ್ನಿ, ಲಿವರ್, ಹೃದಯ, ಶ್ವಾಸಕೋಶ, ಸಣ್ಣ ಕರಳು, ಕಾರ್ನಿಯಾ ಸೇರಿದಂತೆ ಜೀವ ರಕ್ಷಕ ಅಂಗಾಂಗಳ ಕಸಿಗಾಗಿ ರಾಜ್ಯದಲ್ಲಿ ಸುಮಾರು 8000 ರೋಗಿಗಳು …
Read More »ಈ ವಾರದ ರಾಶಿ ಭವಿಷ್ಯ ಹೀಗಿದೆ..
ಮೇಷ : ವಿವಾಹಿತ ವ್ಯಕ್ತಿಗಳು ಕೌಟುಂಬಿಕ ಬದುಕಿನ ಸಮಸ್ಯೆಗಳಿಂದ ಹೊರಬರಲಿದ್ದು ನಿರಾಳತೆಯನ್ನು ಅನುಭವಿಸಲಿದ್ದಾರೆ. ನೀವು ಮತ್ತು ನಿಮ್ಮ ಕುಟುಂಬದ ನಡುವೆ ಒಂದಷ್ಟು ಅಂತರ ಮತ್ತು ಕೆಲವೊಂದು ತಾತ್ವಿಕ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳಬಹುದು. ಮನೆಗೆ ಸಂಬಂಧಿಸಿದಂತೆ ವೆಚ್ಚಗಳು ಉಂಟಾಗಬಹುದು. ನಿಮ್ಮ ಜವಾಬ್ದಾರಿಗಳು ನಿಮ್ಮ ಗಮನ ಸೆಳೆಯಲಿವೆ. ಇದೇ ವೇಳೆ ನಿಮ್ಮ ಕೆಲಸದಲ್ಲಿ ಸಮನ್ವಯ ಕಾಪಾಡಲು ಯತ್ನಿಸಲಿದ್ದೀರಿ. ಮನೆ ಮತ್ತು ಕಚೇರಿ ಎರಡೂ ಕಡೆಯಲ್ಲಿ ನಿಮ್ಮ ಅಗತ್ಯವಿದೆ. ಇವುಗಳನ್ನು ಚೆನ್ನಾಗಿ ನಿಭಾಯಿಸಿದಾಗಲೇ ಪರಿಸ್ಥಿತಿಯಲ್ಲಿ ಸುಧಾರಣೆ …
Read More »ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಬರದ ತೀವ್ರತೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೆ ಏಳು ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಶನಿವಾರ ಸರ್ಕಾರ ಘೋಷಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ …
Read More »ಡಿ.ಕೆ.ಶಿವಕುಮಾರ್ ಹೆಸರಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ದುಡ್ಡು ವಸೂಲಿ: ಕೆಂಪಣ್ಣ ಆರೋಪ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಇಂಜಿನಿಯರ್ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಲಂಚದ ಆರೋಪ ಮಾಡಿದ್ದಾರೆ. ಸದಾಶಿವನಗರದಲ್ಲಿ ಶನಿವಾರ ಖಾಸಗಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಬಳಿಕ ಮಾತನಾಡಿದ ಅವರು, “ನಾನು ಸಿನಿಯಾರಿಟಿ ಪ್ರಕಾರ ಹಣ ಕೊಡಿ ಅಂತ ಕೇಳಿದ್ದೇನೆ. ಸ್ವಲ್ಪ ಹಣ ರಿಲೀಸ್ ಮಾಡಿದ್ದಾರೆ. ನಮಗೆ ತೃಪ್ತಿ ಇದೆ ಅಂತ ಹೇಳಲ್ಲ, ಗುತ್ತಿಗೆದಾರರ ಹಣವನ್ನು ಪೂರ್ತಿಯಾಗಿ ಕ್ಲಿಯರ್ ಮಾಡೋಕೆ ಹೇಳಿದ್ದೇನೆ. ಡಿಸೆಂಬರ್ ಒಳಗಡೆ …
Read More »
Laxmi News 24×7