Breaking News

ರಾಜ್ಯ

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಆಹಾರದಲ್ಲಿ ಹುಳು

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು. ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ …

Read More »

ಬಾಗಲಕೋಟೆಯಲ್ಲಿ ಗಮನ ಸೆಳೆದ ಛಪ್ಪನ್ ಭೋಗ್​ ಆಚರಣೆ

ಬಾಗಲಕೋಟೆ : ದಸರಾ ಹಬ್ಬದ ನಿಮಿತ್ತ ನಗರದಲ್ಲಿರುವ ಜಗದಂಬಾ ದೇವಸ್ಥಾನದಲ್ಲಿ ಛಪ್ಪನ್ ಭೋಗ್​ ಎಂಬ ವಿಶೇಷ ಪೂಜೆ ನೆರವೇರಿಸಲಾಯಿತು. 56 ಬಗೆಯ ತಿಂಡಿ ತಿನಿಸು ಹಾಗೂ ಹಣ್ಣು ಹಂಪಲುಗಳನ್ನು ದೇವಿಯ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಎಲ್ಲ ತಿಂಡಿಗಳನ್ನು ಒಂದೆಡೆ ಸೇರಿಸಿ ಪ್ರಸಾದ ವಿತರಣೆ ಮಾಡಲಾಯಿತು. ಯಾವುದೇ ಜಾತಿ, ಮತ, ಪಂಥ ಎನ್ನದೇ ಎಲ್ಲ ತರಹದ ಭಕ್ತರು ತಂದಿರುವ ಪ್ರಸಾದ ವಿತರಿಸುವ ಮೂಲಕ ಗಮನ ಸೆಳೆಯಲಾಯಿತು. ದಸರಾ ಹಬ್ಬ …

Read More »

ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಕ್ರಮಗಳು ಆರಂಭ

ಮೈಸೂರು: ನವರಾತ್ರಿಯ ನವಮಿಯ ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಗಳು ಬೆಳಗ್ಗಿನಿಂದಲೇ ಆರಂಭವಾಗಿವೆ. ಬೆಳಗ್ಗೆ 5:30ಕ್ಕೆ ಅರಮನೆ ಒಳಗಡೆ ಚಂಡಿಕಾ ಹೋಮ ನೆರವೇರುತ್ತಿದೆ. ಬೆಳಗ್ಗೆ 5:20 ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು …

Read More »

ಉಪಾಧ್ಯಕ್ಷ’ ಟೀಸರ್​ ರಿಲೀಸ್​: ನಾನು ‘ಹೀರೋ’ ಎಂದಾಗ ಜನ ಚುಚ್ಚುಮಾತಿನಿಂದ ನೋಯಿಸಿದ್ದಾರೆ – ಚಿಕ್ಕಣ್ಣ

ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟೀಸರ್​ ಅನ್ನು ನಟರಾದ ದುನಿಯಾ ವಿಜಯ್​, ನೆನಪಿರಲಿ ಪ್ರೇಮ್​ ಹಾಗೂ ಅಭಿಷೇಕ್​ ಅಂಬರೀಶ್​ ಬಿಡುಗಡೆಗೊಳಿಸಿದರು. ಕಾಮಿಡಿ ಶೋಗಳಲ್ಲಿ ಅಭಿನಯಿಸುತ್ತಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಹುಬೇಡಿಕೆಯ ಹಾಸ್ಯ ನಟನಾಗಿ ಗುರುತಿಸಿಕೊಂಡವರು ಚಿಕ್ಕಣ್ಣ. ಇವರ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಉಪಾಧ್ಯಕ್ಷ’. ಈ ಸಿನಿಮಾದ ಮೂಲಕ ಚಿಕ್ಕಣ್ಣ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್​ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ‘ಉಪಾಧ್ಯಕ್ಷ’ ಚಿತ್ರದ ಟೀಸರ್​ ಬಿಡುಗಡೆಯಾಗಿದೆ. ‘ಉಪಾಧ್ಯಕ್ಷ’ …

Read More »

ಕಾವೇರಿ ವಿವಾದ ಪ್ರಧಾನಿ ಮಧ್ಯಪ್ರವೇಶಿಸಿ 2 ಸರ್ಕಾರಗಳ ನಡುವೆ ಮಾತುಕತೆ ನಡೆಸಲಿ : ಶಿವರಾಜ್‌ ಕುಮಾರ್

    ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ನಡುವೆ ಮಾತುಕತೆ ನಡೆಸಬೇಕು ಎಂದು ನಟ ಡಾ.ಶಿವರಾಜ್‌ ಕುಮಾರ್ ತಿಳಿಸಿದ್ದಾರೆ.   ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಷ್ಟಕಾಲದ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಮಾತುಕತೆಗೆ ಮುಂದಾಗಬೇಕು. ಎರಡೂ …

Read More »

ಹಾವೇರಿಯ 8 ತಾಲೂಕುಗಳಲ್ಲಿ ಬರ: ಜಾನುವಾರು ಸಾಕಲಾರದೆ ಮಾರಾಟ ಮಾಡಲು ಮುಂದಾದ ರೈತರು

ಹಾವೇರಿ: ಈ ಬಾರಿ ಮಳೆ ಕೊರತೆಯಿಂದಜಿಲ್ಲೆಯ ಎಂಟು ತಾಲೂಕುಗಳನ್ನು ಭೀಕರ ಬರಗಾಲ ಆವರಿಸಿದೆ. ಜಾನುವಾರುಗಳಿಗೆ ಮೇವು, ನೀರು ನೀಡಲಾಗದೇ ರೈತರು ಅವುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಉತ್ತರ ಕರ್ನಾಟಕದ ಅತಿದೊಡ್ಡ ಜಾನುವಾರು ಸಂತೆಗಳಲ್ಲಿ ಒಂದಾದ ಹಾವೇರಿಯಲ್ಲಿ ಈಗ ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯ ತುಂಬೆಲ್ಲಾ ಜಾನುವಾರುಗಳೇ ಕಾಣಿಸುತ್ತಿವೆ. ರೈತರು ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಮಾರಾಟಕ್ಕೆ ತರುತ್ತಿದ್ದು ಅವುಗಳ ದರವೂ ಕಡಿಮೆಯಾಗಿದೆ. ರೈತ ನಿಂಗಪ್ಪ ನೆಲೋಗಲ್ ಮಾತನಾಡಿ, “ಮಳೆ ಕೊರತೆಯಿಂದ ಹೊಲ, …

Read More »

3 ದಿನ ಕಿತ್ತೂರು ಉತ್ಸವ: ಎತ್ತ ನೋಡಿದರೂ ದೀಪಾಲಂಕಾರದಿಂದ ಕಟ್ಟಡಗಳು ಝಗಮಗಿಸುತ್ತಿವೆ.

ಬೆಳಗಾವಿ: ನಾಡಿನೆಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದರೆ, ಬೆಳಗಾವಿಯಲ್ಲಿ ಚನ್ನಮ್ಮ‌ನ ಕಿತ್ತೂರು ಉತ್ಸವದ ಸಂಭ್ರಮ ಕಳೆಗಟ್ಟಿದೆ.   ಅ.23 ರಿಂದ 25 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ರಾಜ್ಯಮಟ್ಟದ ಉತ್ಸವಕ್ಕೆ ಕಿತ್ತೂರು ಸಜ್ಜಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಶ್ವಾರೂಢ ಚನ್ನಮ್ಮನ ಪ್ರತಿಮೆ ಇರುವ ವೃತ್ತ, ಮಹಾದ್ವಾರ, ಕೋಟೆಯ ಆವರಣ ಮತ್ತು ಸರ್ಕಾರಿ ಕಚೇರಿಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಕಿತ್ತೂರು ಉತ್ಸವವನ್ನು 1997ರಿಂದ ಆಚರಿಸಲಾಗುತ್ತಿದೆ. 2022ರಲ್ಲಿ ಬಿಜೆಪಿ ಸರ್ಕಾರ …

Read More »

ಹೆಚ್.​ಡಿ.ರೇವಣ್ಣ ಆಪ್ತನ ಮೇಲೆ ದಾಳಿ ಪ್ರಕರಣ: ಪೊಲೀಸ್​ ಅಧಿಕಾರಿ ಸೇರಿ ಆರು ಮಂದಿ ಬಂಧನ

ಹಾಸನ: ಮಾಜಿ ಸಚಿವ ಹೆಚ್​​.ಡಿ.ರೇವಣ್ಣನ ಆಪ್ತ ಸಹಾಯಕರಲ್ಲಿ ಒಬ್ಬರಾಗಿರುವ ಚನ್ನರಾಯಪಟ್ಟಣದ ಉದ್ಯಮಿ ಮತ್ತು ಪ್ರಥಮ ದರ್ಜೆ ಗುತ್ತಿಗೆದಾರ ಅಶ್ವತ್ಥ ಎಂಬವರ ಮೇಲೆ ನಡೆದಿದ್ದ ದುಷ್ಕರ್ಮಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪೊಲೀಸ್​ ಅಧಿಕಾರಿ ಸೇರಿ 6 ಮಂದಿಯನ್ನು ಬಂಧಿಸಲಾಗಿದೆ. ಬೆಂಗಳೂರು ಮೂಲದ ಆರ್​ ಸತೀಶ್​ (38), ಸಿ ಮುರುಗನ್​, ಆರ್​ ಮಧುಸೂದನ್​ (38), ಚನ್ನರಾಯಪಟ್ಟಣದ ಬಿ ಎಸ್​ ತೇಜಸ್ವಿ (37), ಅರವಿಂದ್​ (40) ಹಾಗೂ ಕೋಲಾರದ ಆಂತರಿಕ ಭದ್ರತಾ ವಿಭಾಗದ ಪೊಲೀಸ್​ …

Read More »

ಶಾಲೆಗಳಿಗೆ ಹಳೆಯ ಪದ್ಧತಿಯಂತೆ ರಜೆ ಮುಂದುವರೆಸಿ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ದಸರಾ ರಜೆಯನ್ನು ವಿಸ್ತರಿಸಲು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಾನುವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಮನವಿ ಸ್ವೀಕರಿಸಿದ ಸಭಾಪತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಫೋನ್ ಕರೆಯ​ ಮೂಲಕ ಮಕ್ಕಳ ಹಿತದೃಷ್ಟಿಯಿಂದ ರಜೆ ವಿಸ್ತರಣೆ ಮಾಡಿ ಎಂದು ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೊರಟ್ಟಿ, “ಶಿಕ್ಷಣ ವ್ಯವಸ್ಥೆ ಇವತ್ತು ಸರಿಯಾದ ರೀತಿಯಲ್ಲಿಲ್ಲ. ಹಿಂದೆಲ್ಲ …

Read More »

ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಣೆ: ₹43 ಲಕ್ಷ ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಅಬಕಾರಿ ಅಧಿಕಾರಿಗಳು ಬಾನುವಾರ ಬೆಳಿಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು, ಗೋವಾದಿಂದ ತೆಲಂಗಾಣಕ್ಕೆ ದುಬಾರಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಭೇದಿಸಿದ್ದಾರೆ. 43 ಲಕ್ಷ ರೂ ಮೌಲ್ಯದ ಮದ್ಯ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಪ್ಲೈವುಡ್‌ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಮಧ್ಯೆ ಮದ್ಯದ ಬಾಟಲಿಗಳನ್ನಿಟ್ಟು ಸಾಗಣೆ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಭೇದಿಸಿದ್ದ ಅಧಿಕಾರಿಗಳು, ಇದೀಗ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದಾರೆ. ಇಂದು ಬೆಳಿಗ್ಗೆ 3.30ರ ಸುಮಾರಿಗೆ …

Read More »