ದಾವಣಗೆರೆ: ಸಾಹಿತಿಗಳಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ ಎಂಬ ಆರೋಪ ಎದುರಿಸುತ್ತಿರುವ ದಾವಣಗೆರೆಯ ಶಿವಾಜಿ ರಾವ್ ಜಾಧವ್ ಬಂಧನವಾಗಿದೆ. ಸಿಸಿಬಿ ಪೊಲೀಸರು ದಾವಣಗೆರೆ ನಗರದ ಈಡ್ಲ್ಯೂಎಸ್ ಕಾಲೋನಿಯ ಆರೋಪಿಯ ನಿವಾಸದಲ್ಲಿಂದು ಮಹಜರು ಮಾಡಿದರು. ಎರಡು ಕಾರುಗಳಲ್ಲಿ ಆಗಮಿಸಿದ ಸಿಸಿಬಿ ಅಧಿಕಾರಿಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಮಹಜರು ಮಾಡಿ ಮಾಹಿತಿ ಕಲೆ ಹಾಕಿ ಆರೋಪಿಗೆ ಸೇರಿದ ಪೆನ್ನು, ಡೈರಿ ಕೆಲ ಪುಸ್ತಕಗಳನ್ನು …
Read More »‘ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ.
ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ …
Read More »ಈ ವಾರದ ರಾಶಿ ಭವಿಷ್ಯ
ಮೇಷ: ಈ ವಾರವು ನಿಧಾನ ಗತಿಯಲ್ಲಿ ಪ್ರಾರಂಭಗೊಳ್ಳಲಿದ್ದು, ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಗಮನ ನೀಡಬೇಕು. ಇಲ್ಲದಿದ್ದರೆ ನೀವು ಸಮಸ್ಯೆಗೆ ಈಡಾಗಬಹುದು. ನಿಮ್ಮ ವಿರುದ್ಧ ಯಾವುದೇ ಪ್ರಕರಣವು ಬಾಕಿ ಇದ್ದಲ್ಲಿ, ಈ ವಾರದಲ್ಲಿ ನಿರ್ಣಯವು ನಿಮ್ಮ ಪರವಾಗಿ ಬರಲಿದೆ. ಇದರಿಂದ ನಿಮಗೆ ಲಾಭವಾಗಲಿದೆ. ಆರ್ಥಿಕವಾಗಿ ಸಮಯವು ಅನುಕೂಲಕರವೆನಿಸಲಿದೆ. ಸರ್ಕಾರ ಮತ್ತು ಆಡಳಿತಕ್ಕೆ ಸಂಬಂಧಿಸ ಜನರೊಂದಿಗೆ ನೀವು ಪಾಲ್ಗೊಳ್ಳಲಿದ್ದೀರಿ. ಉದ್ಯೋಗದಲ್ಲಿರುವವರಿಗೆ ಇದು ಉತ್ತಮ ಕಾಲ. ನೀವು ಉತ್ತಮ ಸ್ಥಾನದಲ್ಲಿರಲಿದ್ದು ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. …
Read More »ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ
ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …
Read More »ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶನಿವಾರದಂದು ಜರುಗಿದ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನಕ್ಕೆ …
Read More »ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ
ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …
Read More »ಶಕ್ತಿಸೌಧಕ್ಕೆ ತಟ್ಟಿದ ಕರ್ನಾಟಕ ಬಂದ್ ಬಿಸಿ: ಪ್ರತಿಭಟನೆಗೆ ಬೆಂಬಲ ಸೂಚಿಸಿದ 89ರ ವೃದ್ಧ
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಖ್ಯೆ ವಿರಳವಾಗಿದೆ. ಹೀಗಾಗಿ, ಬಂದ್ ಬಿಸಿ ಶಕ್ತಿಸೌಧಕ್ಕೂ ತಟ್ಟಿದ್ದು, ಸಚಿವಾಲಯದ ಹಲವು ಸಿಬ್ಬಂದಿ ಇಂದು ಕೆಲಸಕ್ಕೆ ಗೈರಾಗಿದ್ದಾರೆ. ವಾರದಲ್ಲಿ ಎರಡನೇ ಬಂದ್ ಇದಾಗಿದ್ದು, ವಿಧಾನಸೌಧದ ಕಾರಿಡಾರ್ಗಳು ಖಾಲಿ ಖಾಲಿ ಇವೆ. ಕರ್ನಾಟಕ ಬಂದ್ ಹಿನ್ನೆಲೆ ಹಲವು ಸಿಬ್ಬಂದಿ ಕೆಲಸಕ್ಕೆ ಆಗಮಿಸಿಲ್ಲ. ನಿನ್ನೆ ಈದ್ ಮಿಲಾದ್ ಇದ್ದ ಕಾರಣ ಸರ್ಕಾರಿ ರಜೆ ಇದ್ದು, ಇಂದು ಬಂದ್ ಇರುವುದರಿಂದ ಸಚಿವಾಲಯದ ಸಿಬ್ಬಂದಿ ಕೆಲಸಕ್ಕೆ …
Read More »ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ದ ವಿಡಂಬನಾತ್ಮಕ ಪೋಸ್ಟರ್ವೊಂದನ್ನು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾ
ಬೆಂಗಳೂರು: ಕಾವೇರಿ ವಿವಾದ ಹಿನ್ನೆಲೆ ಪ್ರಧಾನಿ ಮೋದಿ ನಡೆದುಕೊಂಡು ಹೋಗುತ್ತಿರುವ ಪಯಣದ ದಿಕ್ಕಿನ ವಿಡಂಬನಾತ್ಮಕ ಪೋಸ್ಟರ್ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ಎಂದೂ ತುಳಿಯದ ಹಾದಿ ಎಂಬ ಶೀರ್ಷಿಕೆಯಡಿ ಚುನಾವಣೆ ಪ್ರಚಾರ ಮತ್ತು ಕಾವೇರಿ ಸಮಸ್ಯೆ ಇತ್ಯರ್ಥ ಎಂಬ ಪಯಣದ ದಿಕ್ಕಿನ ನಾಮಫಲಕ ಬಿಂಬಿಸುವ ಪೋಸ್ಟರ್ ಹಾಕಿದ್ದಾರೆ. ಪ್ರಧಾನಿ …
Read More »ಕಾವೇರಿ’ದ ಬಂದ್: ಸ್ಯಾಂಡಲ್ವುಡ್ ನಟ-ನಟಿಯರಿಂದ ಪ್ರತಿಭಟನೆ.
ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್ ನೀಡಿದರು. ಈಗಾಗಲೇ ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ …
Read More »ಬುರ್ಖಾ ಧರಿಸಿ, ಖಾಲಿ ಬಿಂದಿಗೆ ಹೊತ್ತು ಪ್ರತಿಭಟನೆಗೆ ಬಂದ ವಾಟಾಳ್ ನಾಗರಾಜ್..
ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಾಟಾಳ್ ನಾಗರಾಜ್, ಸಾ ರಾ ಗೋವಿಂದು ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್ಗೆ ಕರೆದೊಯ್ದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, “ಇವತ್ತು ಎರಡು ಬಂದ್ ನಡೆಯುತ್ತಿದೆ. ಒಂದು ಕಾವೇರಿಗಾಗಿ ನಾವು ಕರೆ ಕೊಟ್ಟಿರುವ …
Read More »
Laxmi News 24×7