Breaking News

ರಾಜ್ಯ

ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ.

ವಿಜಯಪುರ… ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಕಂಡು ಹರಿಯಲು ಹೋಗಿ ಬಾಲಕ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಖೈನೂರ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಗಡಗಿಮನಿ (10) ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ಮರದ ಪಕ್ಕದಲ್ಲಿ ವಿದ್ಯುತ್ ಕಂಬದಲ್ಲಿನ ವಿದ್ಯುತ್ ಸ್ಪರ್ಶಿಸಿ ಮರದಿಂದ ಬಿದ್ದು ಶಾಂತಪ್ಪ ಮೃತಪಟ್ಟಿದ್ದಾನೆ. ಸಿಂದಗಿ …

Read More »

ಬಸವ ತತ್ವವೇ ಉಸಿರು: ನಾಗನೂರು ‘ಶ್ರೀಗಳ ನಡೆ ಭಕ್ತರ ಕಡೆ’

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನಾಗನೂರು ರುದ್ರಾಕ್ಷಿ …

Read More »

ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ.. ಕಾಮಾಕ್ಷಿಪಾಳ್ಯ ಪೊಲೀಸರಿಂದ ಔಟರ್ ರಿಂಗ್ ರೋಡ್ ರಾಬರ್ಸ್ ಬಂಧನ

ಬೆಂಗಳೂರು: ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ನಂಜುಂಡ, ಗಿರೀಶ್ ಹಾಗೂ ನವೀನ್ ಬಂಧಿತ ಆರೋಪಿಗಳು. ಗೊರಗುಂಟೆಪಾಳ್ಯ – ನಾಯಂಡಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಕೃತ್ಯ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚಾಲಕ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ರಾತ್ರಿ ವೇಳೆ ಬಸ್ಸಿಗಾಗಿ ಕಾಯುವವರನ್ನು ಗುರಿಯಾಗಿಸಿಕೊಂಡು ‘ಲಿಫ್ಟ್ ಕೊಡುವುದಾಗಿ’ ಕಾರು ಹತ್ತಿಸಿಕೊಳ್ಳುತ್ತಿದ್ದರು. ಸ್ವಲ್ಪ ದೂರ ಹೋಗುತ್ತಿದ್ದಂತೆ ಹಿಂಬದಿ ಸೀಟಿನಲ್ಲಿದ್ದ ಇನ್ನಿಬ್ಬರು ಆರೋಪಿಗಳು ಕತ್ತಿನ ಬಳಿ …

Read More »

15 ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯ, ಕೇಂದ್ರ ಸರ್ಕಾರಗಳಿಂದ ಶೂನ್ಯ ಅನುದಾನ!

ಬೆಂಗಳೂರು: ರಾಜ್ಯದಲ್ಲಿ ಹಲವು ಕೇಂದ್ರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಯೋಜನೆ ಜಾರಿಯಾಗುತ್ತದೆ.‌ ಆದರೆ, ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಮಾತ್ರವಲ್ಲ ಇತ್ತ ರಾಜ್ಯ ಸರ್ಕಾರವೂ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಹಲವು ಇಲಾಖೆಗಳಲ್ಲಿ ಕೇಂದ್ರ ಅನುದಾನದೊಂದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅನೇಕ ಪ್ರಮುಖ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯದ ಅನುದಾನದೊಂದಿಗೆ ಅನುಷ್ಠಾನವಾಗುತ್ತಿದೆ. ರಾಜ್ಯದ 28 ಇಲಾಖೆಗಳಲ್ಲಿ ವಿವಿಧ ಯೋಜನೆಗಳು ಕೇಂದ್ರ ಪುರಸ್ಕೃತ ಯೋಜನೆಗಳಾಗಿವೆ. …

Read More »

ಜೆಡಿಎಸ್ ಏಕಾಂಗಿಯಾಗಿ ಆದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ,

ಬೆಂಗಳೂರು: ಜೆಡಿಎಸ್ ಏಕಾಂಗಿಯಾಗಿ ಆದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡುತ್ತಾ, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿದೆ. ಅವರು ನಮ್ಮ ಮೈತ್ರಿ ಬಗ್ಗೆ …

Read More »

ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತಾರೆ :ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಿಜೆಪಿ – ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ.‌ ಜನರ ಆಶೋತ್ತರಗಳೇನು ಎಂಬ ಬಗ್ಗೆಯೂ ಗೊತ್ತು. ಅವುಗಳನ್ನೆಲ್ಲ ಈಡೇರಿಸುತ್ತಿದ್ದು, ಒಳ್ಳೆಯ ರೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಹಾಗಾಗಿ ಅವರು ಮೈತ್ರಿ ಮಾಡಿಕೊಂಡರೆ ನಾವು ಸ್ವಾಗತಿಸುತ್ತೇವೆ ಎಂದರು.   ಬಿಜೆಪಿ-ಜೆಡಿಎಸ್‌ನವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಿರುವ …

Read More »

ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಹೆಸರು ಹೇಳದೆಯೇ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡದೇ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ …

Read More »

ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ​ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಚುನಾವಣಾ ಅಕ್ರಮದ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ತೀರ್ಪು ಕಾಯ್ದಿರಿಸಿತು. ಅಲ್ಲದೆ, ಮುಂದಿನ ಸೋಮವಾರ ಅಥವಾ ಮಂಗಳವಾರ ತೀರ್ಪು ಪ್ರಕಟಿಸಲಾಗುವುದು ಎಂದು ನ್ಯಾಯಮೂರ್ತಿಗಳು …

Read More »

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಳಿಕೆಯಾದ ಅಪಘಾತ ಪ್ರಕರಣ: ಪೊಲೀಸರ ಕಾರ್ಯ ಯಶಸ್ವಿ

ಬೆಂಗಳೂರು: ಸಾವಿನ ಹೆದ್ದಾರಿ ಎಂದೇ ಬಿಂಬಿತವಾಗಿದ್ದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಕೊನೆಗೂ ಅಪಘಾತ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇದೇ ವರ್ಷ ಮಾರ್ಚ್​ನಲ್ಲಿ‌ ಪ್ರಧಾನಿ ನರೇಂದ್ರ ಮೋದಿ ಅವರು ಹೈವೇ ಉದ್ಘಾಟಿಸಿದ್ದರು. ಈ ಮಾರ್ಗದ ಮೂಲಕ ಬೆಂಗಳೂರಿಂದ ಮೈಸೂರಿಗೆ ತೆರಳಬೇಕಾದರೆ ಮೂರುವರೆ ಗಂಟೆಯಿಂದ ಒಂದೂವರೆ ಗಂಟೆಗೆ ಇಳಿಕೆಯಾಗಿತ್ತು.‌     ಜೊತೆಗೆ ಉದ್ಘಾಟನೆಯಾದ ಆರಂಭದಿಂದಲೂ ಡೆಡ್ಲಿ ಹೆದ್ದಾರಿ ಎಂದು ಕುಖ್ಯಾತಿ ಪಡೆದಿತ್ತು. ವಾಹನಗಳ ಮಿತಿ ಮೀರಿದ ವೇಗ, ಅಗತ್ಯ …

Read More »

ಅನೈತಿಕ ಪೊಲೀಸ್​ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ತಕ್ಕ ಕಾನೂನಿನ ಶಾಸ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ನಲ್ಲಿ ತಾಯಿ ಮೇರಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ, ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತಿದೊಡ್ಡ ಭಾವೈಕ್ಯತಾ ಕೇಂದ್ರ. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ನಾನು ಈ ಜಯಂತ್ಯುತ್ಸವ ಮತ್ತು …

Read More »