Breaking News

ರಾಜ್ಯ

ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ:R.B. ತಿಮ್ಮಾಪೂರ

ಬಾಗಲಕೋಟೆ: ”ಜನರ ಆಶೀರ್ವಾದ ಇಲ್ಲಎಂದಾಗಲು ಅಧಿಕಾರದ ಹಪಾಹಪಿ ಬಿಜೆಪಿಯವರಿಗೆ ಜಾಸ್ತಿಯಾಗಿದೆ” ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಕೆಪಿಡಿ ಸಭೆ ನಡೆಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, ಸಿಂಗಪುರದಲ್ಲಿ ಆಪರೇಷನ್‌ ಸರ್ಕಾರ ಕೆಡವಲು ಯೋಚನೆ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ”ಬಿಜೆಪಿಯವರಿಗೆ ಜನರ ಆಶೀರ್ವಾದ ದೊರೆತಿಲ್ಲ. ಜನ ತಿರಸ್ಕರಿಸಿದರೂ ಬಿಜೆಪಿಯವರು ಅಧಿಕಾರದ ದಾಹದಿಂದ ಈ ಪ್ರಯತ್ನ ನಡೆದಿರಬಹುದು” ಎಂದು ಹೇಳಿದರು. …

Read More »

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಜೀವ ಜೀವಾವಧಿ ಶಿಕ್ಷೆ ವಿಧಿಸಿದೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹನಮಂತ ಮಾಗುಂಡಪ್ಪ ಹುಲಸಗೇರಿ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವನಾದ ಈತ 2019ರ ಮೇ.17 ರಂದು ಗ್ರಾಮದಲ್ಲಿ ದ್ಯಾಮವ್ವ ದೇವಿಯ ಉಡಿ ತುಂಬುವ ಕಾರ್ಯಕ್ರಮ ಇತ್ತು, ಗ್ರಾಮದ ಮನೆಯೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆ ಒಬ್ಬಳೇ ಇದ್ದಾಗ ಮಧ್ಯಾಹ್ನ …

Read More »

ವಿದೇಶಿ ರಾಜಕೀಯಕ್ಕೆ ಹೊಸ ತಿರುವು ಯುರೋಪ್​ ಪ್ರವಾಸದಲ್ಲಿ ಹೆಚ್​ಡಿಕೆ ಕುಟುಂಬ

ಬೆಂಗಳೂರು: ಸರ್ಕಾರ ಕೆಡವಲು ಸಿಂಗಪುರ್​ನಲ್ಲಿ ಕುಳಿತು ತಂತ್ರ ಹೆಣೆಯಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಫೋಟೋಗಳ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತರಾಗಿ ಯೂರೋಪ್ ಪ್ರವಾಸದಲ್ಲಿರುವ ಫೋಟೋಗಳನ್ನು ಜೆಡಿಎಸ್‌ ನಾಯಕರು ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಯುರೋಪ್‌ನ ಫಿನ್‌ಲ್ಯಾಂಡ್​​ನಲ್ಲಿ ಹೆಚ್​ಡಿಕೆ ಹಾಗೂ ಕುಟುಂಬ ಸದಸ್ಯರು ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಅಧಿವೇಶನ ಮುಗಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಸಹೋದರ ಬಾಲಕೃಷ್ಣ …

Read More »

ಧಾರಾಕಾರ ಮಳೆ ರಭಸಕ್ಕೆ ಭೂತರಾಮನಹಟ್ಟಿಯಲ್ಲಿ ಮನೆಯ ಗೋಡೆ, ಛಾವಣಿ ಕುಸಿದು ಬಿದ್ದಿದೆ.

ಬೆಳಗಾವಿ ಭಾಗದಲ್ಲಿ ಕಳೆದ 10-12 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಅವಾಂತರ ಸೃಷ್ಟಿಸಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮನೆಗಳ ಕುಸಿತ ಮುಂದುವರಿದಿದೆ. ತಾಲೂಕಿನ ಭೂತರಾಮನಹಟ್ಟಿಯಲ್ಲಿ ಮಳೆಯ ರಭಸಕ್ಕೆ ಮನೆಯ ಗೋಡೆ, ಛಾವಣಿ ಕುಸಿದು ಬಿದ್ದಿದೆ.   ಬೆಳಗಾವಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಮಳೆಯಿಂದ ಮರಗಳು ಮತ್ತು ಮನೆಗಳ ನೆಲಕೆ ಉರುಳುತ್ತಿವೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಶಬ್ಧ ಕೇಳಿದ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಎರಡನೇ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.

ನಿರಂತರ ಮಳೆಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಸೋರುತ್ತಿರುವ ಘಟನೆ ನಡೆದಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಎರಡನೇ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ. ಆಸ್ಪತ್ರೆ ಕಟ್ಟಡ ಸೋರುತ್ತಿರುವ ಹಿನ್ನೆಲೆ ಅಲ್ಲಿಯ ಸಿಬ್ಬಂದಿಗಳು ಬಕೆಟ್, ಬುಟ್ಟಿಗಳನ್ನು ಇಟ್ಟಿದ್ದಾರೆ.   ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗ ಇರುವ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.ಗರ್ಭಿಣಿ, ಬಾಣಂತಿಯರು ಬೆಚ್ಚಗಿನ ವಾತಾವರಣದಲ್ಲಿ ಇರಬೇಕು. ಈ ರೀತಿ ತಂಪಾದ ವಾತಾವರಣದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಕಷ್ಟ ಆಗುತ್ತೆ. ಸಂಬಂಧ ಪಟ್ಟ ಅಧಿಕಾರಿಗಳು …

Read More »

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 165.00 ಮಿ ಮೀ ಮಳೆಯಾಗಿದೆ.

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲದೇ ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿದ್ದು, ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರಿ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ಆದೇಶಿಸಿದ್ದಾರೆ. ತಕ್ಷಣದಿಂದ …

Read More »

ಗೃಹ ಸಚಿವರ ನಿವಾಸದೆದುರು ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

ಬೆಂಗಳೂರು: ಗೃಹ ಸಚಿವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚಾದ 14 ಮಂದಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149 (ಕಾನೂನು ಬಾಹಿರವಾಗಿ ಒಗ್ಗೂಡುವಿಕೆ) ಆರೋಪದಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.   ಪ್ರಕರಣದ ಹಿನ್ನೆಲೆ: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕೆಲವು ಆರೋಪಿಗಳ ಕುರಿತ ಹಾಗೂ ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿಂಪಡೆಯಬೇಕೆಂದು …

Read More »

ಸುಲಿಗೆ ಪ್ರಕರಣದಲ್ಲಿ 23 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಶೀರ್​ ಬಂಧಿತ ಆರೋಪಿ. ಜುಲೈ 26ರಂದು ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವೇನು? : 2000ರ ಡಿಸೆಂಬರ್​ 17ರಂದು ರಾತ್ರಿ 8:45ರ ಹೊತ್ತಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಸೇನ್ ಯಾನೆ …

Read More »

ತ್ಯಾಂಶ ನೋಡಿ ಕಾನೂನಾತ್ಮಕ ಅವಕಾಶಗಳಿದ್ದರೆ ಕೇಸ್‌ ವಾಪಸ್: ಜಿ.ಪರಮೇಶ್ವರ್‌

ಬೆಂಗಳೂರು : ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್‌ ವಾಪಸ್‌ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ್‌, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್​ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ.‌ ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ದತಿ ಇದೆ. ಕ್ಯಾಬಿನೆಟ್​​ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ …

Read More »

ಧಾರವಾಡದಲ್ಲಿ ನಿರಂತರ ಮಳೆ; 198 ಮನೆಗಳಿಗೆ ಹಾನಿ

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ …

Read More »