ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನಮುನಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಚಿಕ್ಕೋಡಿಯಲ್ಲಿ ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಿಐಡಿ ಐಜಿ ಪ್ರವೀಣ ಮಧುಕರ್ ಪವಾರ್ ಹಾಗೂ ಎಫ್ಎಸ್ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಸೇರಿ ಇತರ ಹಿರಿಯ ಅಧಿಕಾರಿಗಳು ಜೈನಮುನಿಗಳು ಇದ್ದ ಕೊಠಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ …
Read More »ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಜನರಿಂದ ಹಣ ಪಡೆದರೆ ಕ್ರಿಮಿನಲ್ ಪ್ರಕರಣ:ಹೆಬ್ಬಾಳ್ಕರ್
ಬೆಳಗಾವಿ: “ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರಾದರು ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ಮೂವರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” …
Read More »ಐವರು I.A.S. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ. ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ. ಗಂಗಾಧರಸ್ವಾಮಿ ಜಿ.ಎಂ- ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಎಂದು ಪೋಸ್ಟ್ ಮಾಡಲಾಗಿದೆ. ಶ್ರೀ ನಾಗೇಂದ್ರ ಪ್ರಸಾದ್ ಕೆ.- ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ. ಅಶ್ವಿಜಾ ಬಿ. ವಿ- ಆಯುಕ್ತರು, ತುಮಕೂರು …
Read More »ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಕಥೆ ಸೃಷ್ಟಿಸಿ ಕಣ್ಣೀರು ಹಾಕಿದ್ದ ಹಂತಕಿ ಪತ್ನಿ ಜೈಲು ಪಾಲಾಗಿರುವ ಘಟನೆ ನಡೆದಿದೆ. ಕಳೆದ ಜೂ. 15 ರಂದು ಕಾಶೆಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕೊಂಕಲ್ ಗ್ರಾಮದ ಜಮೀನಿನ ಮರವೊಂದಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಕಾಶೆಪ್ಪ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಹೀಗಾಗಿ, ಸಾವಿನ ಬಗ್ಗೆ …
Read More »ಜೆಡಿಎಸ್ – ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ H.D.D.
ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಶಾಸಕ ಜಿ ಟಿ ದೇವೇಗೌಡ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಗೆಲ್ಲುವ ಸಾಮರ್ಥ್ಯ ಇದೆಯೋ ಅಲ್ಲಿ ನಿಲ್ಲುತ್ತೇವೆ. ಅಧಿಕೃತ ವಿರೋಧ ಪಕ್ಷ ಬಿಜೆಪಿ, ಅನಧಿಕೃತ …
Read More »ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್ ಸೆನ್ಸ್ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್ ಸೆನ್ಸ್ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ. ಸೋಮವಾರ ಮುಂಜಾನೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಪ್ರತಿ ಬಾರಿಯೂ ತಮ್ಮ ಟ್ರೆಂಡಿ ಬಟ್ಟೆಗಳಿಂದ ಎಲ್ಲರನ್ನೂ ಆಶ್ಚರ್ಯಗೊಳಿಸುತ್ತಾರೆ. ಈ ಬಾರಿಯೂ ಸ್ಟೈಲಿಶ್ ಅವತಾರದಲ್ಲಿ ಗಮನ ಸೆಳೆದರು. ಪಾಪರಾಜಿಗಳ ಕೋರಿಕೆಯ ಮೇರೆಗೆ ನಟಿ ತನ್ನ ಮಿಲಿಯನ್ ಡಾಲರ್ ಸ್ಮೈಲ್ ಅನ್ನು ನೀಡಿದರು. …
Read More »ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಹಾಮಳೆಗೆ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಕಲಬುರಗಿ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಗಂಡ ಬಸವರಾಜ ಬಳಗಾರ (35) ಮೃತಪಟ್ಟ ಮಹಿಳೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆಯ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದು …
Read More »ರಾಜ್ಯದಲ್ಲಿ ಮಳೆ – ಬೆಳೆ ಪರಿಸ್ಥಿತಿ : ಜುಲೈ 26 ರಂದು ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ
ಬೆಂಗಳೂರು: ರಾಜ್ಯದಲ್ಲಿನ ಹವಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ತಿಂಗಳ 26 ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳು ಮತ್ತು ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿ ಇರುವ ಜಿಲ್ಲೆಗಳೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರದ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು, ಕೃಷಿ ಸಚಿವರು ಸೇರಿದಂತೆ …
Read More »ಅಸಲಿ ಪಾಸ್ ಪೋರ್ಟ್ ಬಳಸಿಯೇ ವಿದೇಶಕ್ಕೆ ಪರಾರಿ
ಬೆಂಗಳೂರು: ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಮೊಹಮ್ಮದ್ ಜುನೈದ್ ಪತ್ತೆಗೆ ಈಗಾಗಲೇ ಲುಕ್ ಔಟ್ ನೊಟೀಸ್ ಜಾರಿಯಾಗಿದೆ. ಈ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಬೆಂಗಳೂರು ಕೇಂದ್ರಿಯ ಅಪರಾಧ ವಿಭಾಗ (ಸಿಸಿಬಿ) ಶಂಕಿತನ ಹಿನ್ನೆಲೆ ಬಗ್ಗೆ ಮಾಹಿತಿ ಕಲೆ ಹಾಕಿದೆ. 2021ರಲ್ಲಿ ರಕ್ತಚಂದನ ಸಾಗಾಟ ಪ್ರಕರಣದಡಿ ಜೈಲಿಗೆ ಹೋಗಿ ಬಂದಿದ್ದ ಜುನೈದ್, ಬೆಂಗಳೂರು ಬಿಟ್ಟು ವಿದೇಶದಲ್ಲಿ ಅಡಗಿಕೊಂಡಿದ್ದಾನೆ. ಕೊಲ್ಲಿ ರಾಷ್ಟ್ರವಾಗಿರುವ ಅಜೆರ್ಭೈಜಾನ್ ದೇಶದ …
Read More »ಮಹಿಳೆಯ ಹೊಟ್ಟೆಯಲ್ಲಿ ಜೋಡಿ ಫೋರ್ಸ್ಪ್ಸ್: ಪೊಲೀಸರ ತನಿಖಾ ವರದಿಯಿಂದ ದೃಢ
ಕೋಯಿಕ್ಕೋಡ್ (ಕೇರಳ): ಕೋಯಿಕ್ಕೋಡ್ನ ಹರ್ಷಿನಾ ಮಲಯಿಲ್ ಕುಲಂಗರ ಎಂಬುವವರ ಹೊಟ್ಟೆಯಲ್ಲಿದ್ದ ಜೋಡಿ ಫೋರ್ಸ್ಪ್ಸ್ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸೇರಿದ್ದು ಎಂದು ಪೊಲೀಸ್ ತನಿಖಾ ವರದಿ ದೃಢಪಡಿಸಿದೆ. ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ವೇಳೆ ಹರ್ಷಿನಾ ಅವರ ಹೊಟ್ಟೆಯಲ್ಲಿ ಕತ್ತರಿ ಸಿಲುಕಿತ್ತು ಎಂದು ತನಿಖಾ ವರದಿ ತಿಳಿಸುತ್ತದೆ. ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಮೂರನೇ ಹೆರಿಗೆ ವೇಳೆ ಹರ್ಷಿನಾ ಅವರ ದೇಹದಲ್ಲಿ ಫೋರ್ಸ್ಪ್ಸ್ ಸಿಲುಕಿರುವುದು ಪತ್ತೆಯಾಗಿದೆ. ಈ ಗಂಭೀರ ವೈದ್ಯಕೀಯ …
Read More »
Laxmi News 24×7