ಮಂಗಳೂರು: ನಗರದಲ್ಲಿ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ಪಂಪ್ ವೆಲ್ ಸಂಪೂರ್ಣ ಜಲಾವೃತಗೊಂಡಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. 2 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪಂಪ್ವೆಲ್ ಫ್ಲೈಓವರ್ ಅಡಿಭಾಗ ಸಂಪೂರ್ಣ ಜಲಾವೃತಗೊಂಡಿದೆ. ಎಡ ಬಿಡದೇ ಮಳೆ ಸುರಿಯುತ್ತಿದ್ದು, ಫ್ಲೈಓವರ್ ಅಡಿ ನಿಂತ ನೀರಿನಿಂದಾಗಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯುಂಟಾಗಿದೆ. ಪರಿಣಾಮ ರಸ್ತೆ ಉದ್ದಕ್ಕೂ ವಾಹನಗಳು ನಿಲುಗಡೆಯಾಗಿ ಟ್ರಾಫಿಕ್ ಜಾಮ್ ಆಗಿದೆ. ಮಂಗಳೂರಿನ ಪ್ರಮುಖ …
Read More »ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ. ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ‘ಕುರಿಕೋಟಾ ಗ್ರಾಮದ …
Read More »ಇತಿಹಾಸದಲ್ಲೇ ಮೊದಲ ಬಾರಿಗೆ ಅಧಿಕೃತ ಪ್ರತಿಪಕ್ಷದ ನಾಯಕನ ಆಯ್ಕೆಯಾಗದೇ ಅಧಿವೇಶನ
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು
ಬೆಂಗಳೂರು: ಹೊಸ ಸರ್ಕಾರದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ, ಮತ್ತೊಂದೆಡೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು ಜೋರಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಮಳೆಯ ಅಭಾವವಾಗಿರುವುದರಿಂದ ರಾಜ್ಯದಲ್ಲಿ ಬರಗಾಲ ಎಂದು ಘೋಷಿಸುವ ಮೂಲಕ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ …
Read More »ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾದ ಎಮ್ಎಲ್ಸಿಗಳ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಮತ್ತು ಎನ್.ಎಸ್. ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನೂತನ ಸದಸ್ಯರುಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು …
Read More »ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನ ಆತ್ಮಹತ್ಯೆ
ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಸ್ ಡಿಪೋದಲ್ಲಿ ನಡೆದಿದೆ. ರಾಣೆಬೆನ್ನೂರು ನಗರದ ಹೊರ ವಲಯದ ಮಾಗಡಿ ರಸ್ತೆಯಲ್ಲಿರುವ NWKRTC ಬಸ್ ಡಿಪೋದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನೌಕರನನ್ನು ಡ್ರೈವರ್ ಕಂ ಕಂಡಕ್ಟರ್ 48 ವರ್ಷದ ಮಲ್ಲನಗೌಡ ಬಡಿಗೇರ ಎಂದು ಗುರುತಿಸಲಾಗಿದೆ. ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲನಗೌಡ ಒಂದು ವಾರದಿಂದ ರಜೆಯಲ್ಲಿದ್ದು, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ …
Read More »1000 ಎಕರೆ ಜಮೀನಿನ ಮೇಲ್ವಿಚಾರಣೆಗೆ 7 ಕೋಟಿ ರೂ. ಮೌಲ್ಯದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ರೈತ
(ಛತ್ತೀಸ್ಗಢ): ಇತ್ತೀಚೆಗೆ ಹೊಲಗಳಿಗೆ ಕ್ರಿಮಿನಾಶಕ ಸಿಂಪಡಿಸಲು ಡ್ರೋನ್ಗಳನ್ನು ಬಳಸುವುದು ಹೆಚ್ಚಿದೆ. ಅಲ್ಲದೇ ಇದರ ಉಪಯೋಗವನ್ನು ಮನಗಂಡಿರುವ ಕೆಲವು ರೈತರು ಇವುಗಳನ್ನು ಸ್ವಂತಕ್ಕೆ ಖರೀದಿಸುತ್ತಿದ್ದಾರೆ. ಆದರೆ ಛತ್ತೀಸ್ಗಢದ ರೈತರೊಬ್ಬರು ತಮ್ಮ ಜಮೀನಿನ ಮೇಲ್ವಿಚಾರಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. ತೆಲಂಗಾಣದಿಂದ ಸುಮಾರು 300 ಕಿ. ಮೀ ದೂರದಲ್ಲಿರುವ ಕೊಂಡಗಾಂವ್ ಜಿಲ್ಲೆಯ ರಾಜಾರಾಂ ತ್ರಿಪಾಠಿ ತಮ್ಮ 1000 ಎಕರೆ ಜಮೀನಿನ ಮೇಲ್ವಿಚಾರಣೆಗಾಗಿ 7 ಕೋಟಿ ರೂ. ಮೌಲ್ಯದ ಹೆಲಿಕಾಪ್ಟರ್ ಖರೀದಿಸಲು ಹೊರಟಿದ್ದಾರೆ. ಈಗಾಗಲೇ ಹಾಲೆಂಡ್ ನ …
Read More »ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ …
Read More »ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ
ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …
Read More »
Laxmi News 24×7