ನವದೆಹಲಿ: ಭಾರತ ಹಿರಿಯ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವೇಗಿ ಅಜಿತ್ ಅಗರ್ಕರ್ ನೇಮಕವಾಗಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಶಿಫಾರಸಿನ ಮೇರೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ ಈ ವಿಚಾರವನ್ನು ಪ್ರಕಟಿಸಿದ್ದಾರೆ. ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಪುರುಷರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರ ಸಿಎಸಿ …
Read More »ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಶಾಲಾ, ಕಾಲೇಜುಗಳಿಗೆ ಇಂದು ರಜೆ
ಕಾರವಾರ: ರಾಜ್ಯದಲ್ಲಿ ಕೆಲವೆಡೆ ಮುಂಗಾರು ಕ್ಷೀಣವಾಗಿದ್ದರೆ, ಕರಾವಳಿ ಜಿಲ್ಲೆಗಳು ಹಾಗೂ ಘಟ್ಟದ ಮೇಲ್ಭಾಗದ ಕೆಲವು ತಾಲೂಕುಗಳಲ್ಲಿ ವರ್ಷಧಾರೆ ಬಿರುಸು ಪಡೆದಿದೆ. ಮಂಗಳವಾರ ಸುರಿದ ಭಾರಿ ಮಳೆಗೆ ಭಟ್ಕಳ, ಕಾರವಾರದ ಬಳಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದೆ. ಕಾರವಾರದಲ್ಲಿ ಮಂಗಳವಾರ ಸಂಜೆ ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಜಡಿ ಮಳೆಗೆ ನಗರದ ಗ್ರೀನ್ ಸ್ಟ್ರೀಟ್ …
Read More »”ಬಿಜೆಪಿ ವಿರೋಧ ಪಕ್ಷವಾಗಿ ಬಾಳೆ ಹಣ್ಣು ತಿನ್ನುತ್ತಾ ಕೂತಿಲ್ಲ” ಎಂದವಿಜಯೇಂದ್ರ
ಬೆಂಗಳೂರು: ”ಬಿಜೆಪಿ ವಿರೋಧ ಪಕ್ಷವಾಗಿ ಬಾಳೆ ಹಣ್ಣು ತಿನ್ನುತ್ತಾ ಕೂತಿಲ್ಲ” ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ”ಕುಂತಲ್ಲಿ, ನಿಂತಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ತನಿಖೆ ಮಾಡುವುದಾಗಿ ಗೊಡ್ಡು ಬೆದರಿಕೆ ಹಾಕ್ತಿದ್ದಾರೆ. ಅವರ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಭರವಸೆಗಳನ್ನು ನೀವು ಈಡೇರಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಬಿಜೆಪಿ ಅಧಿಕಾರಾವಧಿಯಲ್ಲಿನ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿ ಗ್ಯಾರಂಟಿ …
Read More »ತಂತ್ರಜ್ಞಾನದ ಮೊರೆಹೋದ ವ್ಯಕ್ತಿ, ಸಿಸಿಟಿವಿ ಕಣ್ಗಾವಲಿನಲ್ಲಿ ವ್ಯಾಪಾರ! TOMATO
ಹಾವೇರಿ: ಒಂದು ಸಮಯದಲ್ಲಿ ಟೊಮೆಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದರು. ಎಷ್ಟೋ ಬಾರಿ ದರ ಪಾತಾಳಕ್ಕೆ ಕುಸಿದ ಪರಿಣಾಮ ಬೇಸತ್ತು ಅನ್ನದಾತರು ಮತ್ತು ವ್ಯಾಪಾರಿಗಳು ರಸ್ತೆಗೆ ಸುರಿಯುತ್ತಿದ್ದರು. ಇನ್ನೂ ಕೆಲವೆಡೆ ಟೊಮೆಟೊವನ್ನು ರೈತರು ತಿಪ್ಪೆಗೆ ಸುರಿದಿದ್ದರು. ಮತ್ತೆ ಕೆಲವರು ಅದನ್ನು ಕಿತ್ತು ಮಾರುಕಟ್ಟೆಗೆ ಸಾಗಿಸುವುದು ಮಾರಾಟದ ದರ ಕೈಸೇರದೆ ನಷ್ಟವೇ ಹೆಚ್ಚಾಗಿರುತ್ತೆ ಎಂದು ಹೊಲದಲ್ಲೇ ಬಿಟ್ಟರೆ ಗೊಬ್ಬರವಾಗುತ್ತೆ ಅಂತಾ ತಮ್ಮ ಕೈಯಾರೆ ನೆಲಸಮ ಮಾಡಿದ್ದು ಉಂಟು.. ಹೌದು, ನಾವ್ ಇಷ್ಟೆಲ್ಲ ಹೇಳಿದ್ದು …
Read More »ಗೋಹತ್ಯೆ, ಮತಾಂತರ ಕಾಯ್ದೆ ರದ್ದು ಮಾಡದಂತೆಮಠಾಧೀಶರ ಆಗ್ರಹ
ಕಲಬುರಗಿ : ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತಂದಿದ್ದು, ರಾಜ್ಯದಲ್ಲಿರುವ ಕಾಂಗ್ರೆಸ್ ಆಡಳಿತದ ಸರ್ಕಾರ ಆ ಕಾನೂನು ತೆಗೆದುಹಾಕುತ್ತಿದೆ. ಹೀಗಾಗಿ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಡಗಂಚಿಯ ಶಾಂತಲಿಂಗೇಶ್ವರ ಸಂಸ್ಥಾನ ಮಠದ ವೀರಭದ್ರ ಶಿವಾಚಾರ್ಯರು ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಮಾತೆ ದೇವರು. ದೇವರ ಹತ್ಯೆ ಮಾಡಿದವರು ಏನು ಆಗುತ್ತಾರೆ ಎಂದು …
Read More »ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ ರಾಮೋಜಿ ಫಿಲ್ಮ್ ಸಿಟಿಗೆ ಎಫ್ಟಿಸಿಸಿಐ ಪ್ರಶಸ್ತಿ ಗರಿ
ಹೈದರಾಬಾದ್: ತೆಲಂಗಾಣದ ಅಪೆಕ್ಸ್ ಟ್ರೇಡ್ ಮತ್ತು ಇಂಡಸ್ಟ್ರಿ ಮಂಡಳಿ, ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್ (ಎಫ್ಟಿಸಿಸಿಐ) ವತಿಯಿಂದ ನೀಡಲಾಗುವ ಎಕ್ಸಲೆನ್ಸ್ ಪ್ರಶಸ್ತಿ ಗರಿ ರಾಮೋಜಿ ಫಿಲ್ಮ್ ಸಿಟಿಗೆ ದೊರೆತಿದೆ. ರಾಮೋಜಿ ಫಿಲ್ಮ್ ಸಿಟಿಗೆ ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್ನಿಂದ (ಎಫ್ಟಿಸಿಸಿಐ) ಪ್ರಶಸ್ತಿ ಗರಿ ಲಭಿಸಿದೆಹೈದರಾಬಾದ್ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ತೆಲಂಗಾಣ ಸರ್ಕಾರದ ಕೈಗಾರಿಕೆಗಳು ಮತ್ತು ಐಟಿ ಸಚಿವರಾದ ಶ್ರೀ ಕೆ.ಟಿ. ರಾಮರಾವ್ …
Read More »ಜುಲೈ 7ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ; ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಬಾಗಲಕೋಟೆ, ಯಾದಗಿರಿ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ …
Read More »ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ
ಬೆಳಗಾವಿಯ ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ ನೀಡಲಾಯಿತು. ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ಕಸದ ಗಾಡಿಗಳು ಕಡಿಮೆ ಇದ್ದವು. ಮನೆಯ ತ್ಯಾಜ್ಯವನ್ನು ವಾರಕ್ಕೆ 3 ಬಾರಿ ಮಾತ್ರ ಸಂಗ್ರಹಿಸಲಾಗುತ್ತದೆ. ಇದನ್ನು ಗಮನಿಸಿದ ಕಾರ್ಪೊರೇಟರ್ ನಿತಿನ್ ಜಾಧವ್ ಅವರು ಅಭಯ ಪಾಟೀಲ ಅವರೊಂದಿಗೆ ಚರ್ಚಿಸಿ ನೂತನ ಕಸದ ವಾಹನಕ್ಕೆ ಅನುಮೋದನೆ ಪಡೆದು. ಸೋಮವಾರ ಕಸದ ವಾಹನ …
Read More »ವಂದೇ ಭಾರತ್ ರೈಲಿನ ಸಮಯಕ್ಕೆ ತಕ್ಕಂತೆ ಹುಬ್ಬಳ್ಳಿ – ಬೆಳಗಾವಿ ನಡುವೆ ವೋಲ್ವೊ ಬಸ್ ಸೌಲಭ್ಯ
ಹುಬ್ಬಳ್ಳಿ: ಬೆಂಗಳೂರು – ಧಾರವಾಡ ನಡುವೆ ಹೊಸದಾಗಿ ಆರಂಭವಾಗಿರುವ “ವಂದೇ ಭಾರತ್” ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ವೋಲ್ವೊ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ ಬೆಂಗಳೂರು ಧಾರವಾಡ ನಡುವೆ ಆರಂಭಿಸಲಾಗಿರುವ “ವಂದೇ ಭಾರತ್” …
Read More »ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಮೇಲೆ ಬಿಜೆಪಿ ಎರಡು ಪಾರ್ಟಿ ಆಗುತ್ತೆ: ಕಿಮ್ಮನೆ ರತ್ನಾಕರ್
ಶಿವಮೊಗ್ಗ: ”ವಿರೋಧ ಪಕ್ಷದ ನಾಯಕ ಹಾಗೂ ರಾಜಾಧ್ಯಕ್ಷರ ಆಯ್ಕೆಯಾದ ಬಳಿಕ ಬಿಜೆಪಿಯಲ್ಲಿ ಎರಡು ಪಾರ್ಟಿ ಆಗುತ್ತದೆ” ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ದೇಶದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎನ್ನುವ ಬಿಜೆಪಿ ಪಕ್ಷದ ಕಥೆ ಹೀಗಾಗಿದೆ. ಕರ್ನಾಟಕದಲ್ಲಿ ಎಷ್ಟು ಜಿಲ್ಲೆಯಿದೆ ಅಂತ ಗೊತ್ತಿರದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಕೊಡಲ್ಲ ಎನ್ನುತ್ತಿದ್ದಾರೆ. …
Read More »
Laxmi News 24×7