Breaking News

ರಾಜ್ಯ

ಕಲುಷಿತ ನೀರು ಸೇವಿಸಿ ಸಾವು: ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಹೊಣೆ ಮಾಡಿ ಅಮಾನತ್ತಿಗೆ ಸೂಚಿಸಿ: ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್‌ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್‌ 10ರಂದು ಪ್ರಾರಂಭವಾಗಿದೆ. ಜೂನ್‌ 1ರಿಂದ 11ರವರೆಗಿನ ಮಾಹಿತಿ …

Read More »

ಮಹಾರಾಷ್ಟ್ರದ ನಾಸಿಕ್​ನಲ್ಲಿ ಭೀಕರ ರಸ್ತೆ ಅಪಘಾತ

ನಾಸಿಕ್​​: ಮಹಾರಾಷ್ಟ್ರದ ನಾಸಿಕ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿಯ ಶಿರಡಿ- ಭರವೀರ್ ಹೆದ್ದಾರಿಯಲ್ಲಿ ಭಾನುವಾರ ಮಧ್ಯರಾತ್ರಿ ಕಾರು ದುರಂತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ರಜಾಕ್ ಅಹ್ಮದ್ ಶೇಖ್, ಸತ್ತಾರ್ ಶೇಖ್ ಲಾಲ್ ಶೇಖ್, ಸುಲ್ತಾನ್​ ಸತ್ತಾರ್ ಶೇಖ್, ಫಿಯಾಜ್ ದಗುಭಾಯಿ ಶೇಖ್ ಮೃತರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ಮುಂಬೈನಿಂದ ಹೊರಟು ಶಿರಡಿಗೆ ವಾಪಸಾಗುತ್ತಿದ್ದರು. ಭಾನುವಾರ ಮಧ್ಯರಾತ್ರಿ …

Read More »

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.. ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರ ಕೊರತೆ

ಮಂಗಳೂರು: ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಾಡುವ ಮಾರ್ಗದಲ್ಲಿ ಖಾಸಗಿ ಬಸ್​ಗಳಿಗೆ ಮಹಿಳಾ ಪ್ರಯಾಣಿಕರ ಕೊರತೆಯನ್ನು ಸೃಷ್ಟಿಸಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಮತ್ತು ಜಿಲ್ಲೆಯಾದ್ಯಂತ ಸಂಚಾರಕ್ಕೆ ಹೆಚ್ಚಿನ ಜನರು ಖಾಸಗಿ ಬಸ್​ಗಳನ್ನು ಅವಲಂಬಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್​ಗಳ ಪ್ರಭಾವವೇ ಅಧಿಕ. ಇಲ್ಲಿನ‌ ಜನರು ನಗರದಲ್ಲಿ ಪ್ರಯಾಣಿಸಲು, ಜಿಲ್ಲೆಯಾದ್ಯಂತ ಪ್ರಯಾಣಿಸಲು ಮತ್ತು ಉಡುಪಿ …

Read More »

ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ …

Read More »

ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!

ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಸ್ಕರ್ ಅವರು ತಮ್ಮ …

Read More »

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ. ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ …

Read More »

ಒಂದು ವಾರದಲ್ಲಿ ಹೆಚ್ಚಿನ ವಿದ್ಯುತ ಬಿಲ್ ಹಿಂಪಡಿಯದಿದ್ದರೆ ಉಗ್ರ ಹೋರಾಟ

ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಬಿಲ್ ಹೆಚ್ಚಿಗೆ ಮಾಡಿರುವ ಸರಕಾರದ ನಿರ್ಧಾರವನ್ನು ಏಳು ದಿನಗಳ ಒಳಗಾಗಿ ಹಿಂಪಡೆಯಬೇಕು ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಹೇಮೇಂದ್ರ ಪೋರವಲ ಹೇಳಿದರು. ಸೋಮವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ತಮ್ಮ ಗ್ಯಾರಂಟಿ ಯೋಜನೆಯನ್ನು ನೀಡುವ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಹೆಸರಿನಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿಯ ವಿದ್ಯುತ್ ನೀಡುತ್ತಿದ್ದಾರೆ. ಆದರೆ …

Read More »

Electricity Bill : ಏಪ್ರಿಲ್​ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್​ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್​ಸಿ ಸ್ಪಷ್ಟನೆ

ಬೆಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್​ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ …

Read More »

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ

ಬೆಂಗಳೂರು: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್​ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.     ಬಸ್​ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು …

Read More »

ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವು

ಕೊಪ್ಪಳ : ಇತ್ತೀಚಿನ ದಿನಗಳಿಂದ ಕಲುಷಿತ ನೀರು ಕುಡಿದು ಕೊಪ್ಪಳ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿತ್ತು. ಈ ಸಂಬಂಧ ಭಾನುವಾರ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮೃತರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದರು. ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ನಿರ್ಮಲ ಮನೆಗೆ ಹಾಗೂ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದ ಹೊನ್ನಮ್ಮ ಹಾಗೂ ಶೃತಿ ಮನೆಗೆ ಭೇಟಿ ನೀಡಿದರು. ಈ …

Read More »