Breaking News

ರಾಜ್ಯ

ಮನೆಯಲ್ಲಿ ಮಲಗಿದ್ದ ದಂಪತಿಗೆ ಕಚ್ಚಿದ ನಾಗರಹಾವು – ಪತಿ ಸಾವು, ಪತ್ನಿ‌ ಸ್ಥಿತಿ ಗಂಭೀರ

ಬೆಳಗಾವಿ: ದಂಪತಿಗೆ ನಾಗರಹಾವು ಕಚ್ಚಿದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಸಾವು‌ ಬದುಕಿನ ಮಧ್ಯ ಹೋರಾಡುತ್ತಿರುವ ಹೃದಯವಿದ್ರಾವಕ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ. ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಸಿದ್ದಪ್ಪ ಚಿವಟಗುಂಡಿ (35) ಮೃತ ವ್ಯಕ್ತಿ. ಪತ್ನಿ ನಾಗವ್ವ (28) ಸ್ಥಿತಿ ಚಿಂತಾಜನಕವಾಗಿದೆ. ದಂಪತಿ ತಮ್ಮ ಮೂರು ಮಕ್ಕಳ ಸಮೇತ ಹೊಟ್ಟೆಪಾಡಿಗಾಗಿ ಸಾಣಿಕೊಪ್ಪದಿಂದ ಬೆಳಗಾವಿಗೆ ಬಂದು ನೆಲೆಸಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ ಕಾಮಗಾರಿಯೊಂದರಲ್ಲಿ ವಾಚ್‍ಮನ್ …

Read More »

ಕಾರಹುಣ್ಣಿಮೆಯಲ್ಲಿ ಎತ್ತು ಬೆದರಿಸುವ ಸ್ಪರ್ಧೆ, ಹತ್ತು ಜನರಿಗೆ ಗಾಯ

ವಿಜಯಪುರ: ಇನ್ನೇನು ಮುಂಗಾರು ಮಳೆ ಭೂಮಿಯನ್ನು ಸ್ಪರ್ಶ ಮಾಡುತ್ತಿದೆ. ಜೂನ್​ ತಿಂಗಳು ಬಂತೆಂದರೆ ಮಳೆಗಾಲ ಆರಂಭ ಎಂದೇ ಲೆಕ್ಕ. ರೈತ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅಣಿಯಾಗುತ್ತಾನೆ. ಎತ್ತುಗಳನ್ನು ಹೊಲಕ್ಕೆ ಇಳಿಸಿ ದುಡಿಸುವ ಮುನ್ನ ಕಾರಹುಣ್ಣಿಮೆಯಲ್ಲಿ ಮನರಂಜನೆಗಾಗಿ ಎತ್ತು ಬೆದರಿಸುವ ಸ್ಪರ್ಧೆ ಆಡುವುದು ವಾಡಿಕೆಯಾಗಿ ಬೆಳೆದುಬಂದಿದೆ. ಮಳೆ ಆರಂಭವಾಗಿ ಹೊಲ ಊಳುವುದು, ಬಿತ್ತನೆ ಎಂದು ಕೆಲಸ ಆರಂಭವಾದರೆ ರೈತನಿಗೆ ಮನರಂಜನೆ ಎಂಬುದೇ ಇರುವುದಿಲ್ಲ. ಬಿಡುವಿಲ್ಲದ ಕೆಲಸಗಳಲ್ಲಿ ರೈತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹೀಗಾಗಿ ಕಾರಹುಣ್ಣಿಮೆ …

Read More »

ಗ್ಯಾರಂಟಿ ಯೋಜನೆ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ, ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ: ಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು ಗೇಲಿ ಮಾಡಿಕೊಂಡೇ ಇರಲಿ. ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಬಡವರ, …

Read More »

ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ

ಬೆಂಗಳೂರು: ಕರ್ನಾಟಕಕ್ಕೆ ಶನಿವಾರ ಮುಂಗಾರು ಮಳೆಯ ಪ್ರವೇಶವಾಗಿದ್ದು, ಮುಂದಿನ ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜೂನ್ 14ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 13ರ ವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದೆ. ನೈರುತ್ಯ ಮುಂಗಾರು …

Read More »

ಬತ್ತಿದ ಕೃಷ್ಣಾ ನದಿ,ಒಣಗಿದ ಬೆಳೆಗಳು

ವಾಡಿಕೆಯಂತೆ ಮುಂಗಾರು ಮಳೆ‌ ಆಗದೆ ಇರುವುದರಿಂದ ಹಾಗೂ ರಣ ಬಿಸಿಲಿನ ತಾಪಕ್ಕೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಕೃಷ್ಣಾ ನದಿ ಬತ್ತಿಹೋಗಿದ್ದು, ಜಮೀನಗಳಿಗಷ್ಟೇ ಅಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೂ ಪರದಾಡುವಂತಾಗಿದೆ. .ಉತ್ತರ ಕರ್ನಾಟಕ ಜೀವನಾಡಿಯಾಗಿರುವ ಕೃಷ್ಣಾ ನದಿಯು ನೀರಿಲ್ಲದೆ ಬತ್ತಿಹೋಗಿದ್ದು,ಇದರಿಂದಾಗಿ ಜನಜಾನುವಾರುಗಳಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರೈತರು ಹಗಲು ರಾತ್ರಿ ಎನ್ನದೇ ಸಾಲಸೂಲ ಮಾಡಿ ಕಷ್ಟಪಟ್ಟು ದುಡಿದು‌ ಬೆಳೆದ ಬೆಳೆಗಳು ಸಂಪೂರ್ಣವಾಗಿ ಒಣಗಿ‌ ಹೋಗಿದ್ದು ರೈತರಿಗೆ ಗಾಯದ ಬರೆ …

Read More »

ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿ

ವಿಜಯಪುರ…  ಬೈಕ್ ಹಾಗೂ ಟಂಟಂ ಮಧ್ಯೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಗೊಳಸಂಗಿ ಬಳಿ ಘಟನೆ ನಡೆದಿದೆ‌. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ನಾಲ್ವರು ಮಹಿಳೆಯರು, ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ‌‌. ಗಾಯಾಳುಗಳನ್ನುಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಮದುವೆಯಾದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಸಂಜು ಬಸಯ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಎನ್ನುವರನ್ನು ವಿವಾಹವಾಗಿದ್ದಾರೆ. ಈ ಕುರಿತು ಇತ್ತೀಚೆಗೆ ಅವರು ತಮ್ಮ ಇನ್‌ಸ್ಟಾಗ್ರಾಂ (sanjubasayyafficial ) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಸಂಜು ಬಸಯ್ಯ ತಿಳಿಸಿದ್ದಾರೆ. ಪಲ್ಲವಿ ಅವರು ಕೆಲ ಯುಟ್ಯೂಬ್ ವಿಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ನಾವು ತೆರೆ ಎಳೆದಿದ್ದೇವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತ್ತು,ಆ …

Read More »

ಶಕ್ತಿ ಯೋಜನೆ’ಯ `ಲೋಗೋ’ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.   ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, …

Read More »

ಎಣ್ಣೆ ಪ್ರಿಯರಿಗೆ ಸರ್ಕಾರದ ಶಾಕ್​… ಶೇ. 20ರಷ್ಟು ಮದ್ಯದ ಬೆಲೆ ದಿಢೀರ್​ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವುದು ಒಂದೆಡೆ ಜನರಿಗೆ ಸಂತಸ ತಂದಿದೆ. ಆದರೆ, ಇನ್ನೊಂದೆಡೆ ಉಚಿತ ನೆಪದಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿದೆ. ಜೊತೆಗೆ ಮದ್ಯ ಪ್ರಿಯರಿಗೂ ಶಾಕ್ ನೀಡಲಾಗಿದೆ. ಆದಾಯ ಸಂಗ್ರಹಿಸಲು ಸರ್ಕಾರ ಶೇ. 20 ರಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ನಿನ್ನೆಯಿಂದಲೇ ಬಿಯರ್ ಬೆಲೆ ಹೆಚ್ಚಳವಾಗಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದೆ ಜಾರಿಗೊಳಿಸುತ್ತಿದೆ. ನಾಳೆ ಮಹಿಳೆಯರಿಗೆ ಉಚಿತ ಬಸ್ …

Read More »

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು : H.K.ಪಾಟೀಲ್

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ಪ್ರಮುಖ ಇಲಾಖೆಗಳಲ್ಲಿ ಒಂದು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಅಗತ್ಯ ಇದೆ. ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷೆ ಮಟ್ಟದಲ್ಲಿ ಆದ್ಯತೆ ಸಿಕ್ಕಿಲ್ಲ. ಅದಕ್ಕೆ ಹಲವು ಕಾರಣಗಳಿವೆ. …

Read More »