Breaking News

ರಾಜ್ಯ

ಸಿಎಂ ರೇಸ್ ನಲ್ಲಿದ್ದವರಿಗೆ ಟಿಕೆಟ್ ಸಿಗದಂತೆ ಮಾಡಿದ್ದು ಜೋಶಿ :ಯು.ಟಿ.ಖಾದರ್,

ಮಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣ ಅಕಣ ರಂಗೇರಿದೆ. ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರವಾಗಿ ಮಾತನಾಡಿರುವ ಪರಿಷತ್ ಉಪನಾಅಕ ಯು.ಟಿ.ಖಾದರ್, ಹಿಂದೆಲ್ಲ ಬಿಜೆಪಿಯಲ್ಲಿ ಮೂರು ಬಾಗಿಲಿತ್ತು, ಈಗ 25 ಬಾಗಿಲುಗಳಾಗಿವೆ ಎಂದು ಟಾಂಗ್ ನೀಡಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಈಬಾರಿ ಟಿಕೆಟ್ ಘೋಷಣೆಯಲ್ಲಿಯೇ ಎಲ್ಲವೂ ಗೊತ್ತಾಗುತ್ತದೆ. ಯಾರೆಲ್ಲ ಮುಖ್ಯಮಂತ್ರಿ ರೇಸ್ ನಲ್ಲಿದ್ದರು, ಅವರೆಲ್ಲರಿಗೂ ಟೆಕೆಟ್ ಸಿಗದಂತೆ ಪ್ರಹ್ಲಾದ್ ಜೋಶಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಯಾರೂ ಮುಖ್ಯಮಂತ್ರಿ …

Read More »

ಬೆಂಬಲಿಗರ ಸಭೆ ಕರೆದ ಬೆನ್ನಲ್ಲೇ ಶೆಟ್ಟರ್​ ಅವರ ಮನವೊಲಿಸುವ ಜೋಶಿ ಯತ್ನ

ಹುಬ್ಬಳ್ಳಿ: ವಿಧಾನಾಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ಕೆಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ರಿಲೀಸ್​ ಮಾಡಿದ್ದು, ಅನೇಕರಿಗೆ ಪಕ್ಷದಿಂದ ಟಿಕೆಟ್​ ದೊರೆತ್ತಿದೆ. ಇನ್ನು ಕೆಲವರಿಗೆ ಟಿಕೆಟ್​ ದೊರೆತ್ತಿಲ್ಲ. ಇದರ ಮಧ್ಯೆ ಇನ್ನು ಕೆಲ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಆಗಿಲ್ಲ. ಹೀಗಾಗಿ ಶೆಟ್ಟರ್ ಟಿಕೆಟ್ ಘೋಷಣೆ ವಿಳಂಬ ಹಿನ್ನೆಲೆ ಬೆಂಬಲಿಗರ ಸಭೆಗೆ ತಯಾರಿ ನಡೆಸಿದ್ದರು. ಇದರ ಮಧ್ಯೆ ಶೆಟ್ಟರ್​ ನಿವಾಸಕ್ಕೆ ಜೋಶಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ …

Read More »

ಹಿಡಕಲ್ ಡ್ಯಾಂ ನೀರು ಪೂರೈಕೆ ಪೈಪ್ ಭಗ್ನ; 50 ಅಡಿ ಎತ್ತರ ಪುಟಿದ ನೀರು

ಬೆಳಗಾವಿ: ಹಿಡಕಲ್ ಡ್ಯಾಂನಿಂದ ಬೆಳಗಾವಿ ನಗರಕ್ಕೆ ನೀರು ಪೂರೈಸುವ ಪೈಪ್ ಲೈನ್ ಶನಿವಾರ ಒಡೆದ ಪರಿಣಾಮ ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗಿದೆ. ಖನಗಾಂವ ಬಿ.ಕೆ. ಗ್ರಾಮದ ಬಳಿ ಒತ್ತಡದಿಂದ ಒಡೆದ ಪೈಪ್ ಪೈನ್ ನಿಂದ ನೀರು ಸುಮಾರು 50 ಅಡಿ ಎತ್ತರಕ್ಕೆ ಚಿಮ್ಮಿತ್ತು. ಹಲವರು ಇದನ್ನು ಕಂಡು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದರೆ ಬಿರು ಬೇಸಿಗೆಯಲ್ಲಿ ನೀರಿನ ಅಪವ್ಯಯವಾಗುತ್ತಿರುವುದಕ್ಕೆ ಮರುಗಿದರು. ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಈ ಭಾರಿ ಪ್ರಮಾಣದ ನೀರಿನ ಹೊರಹೊಮ್ಮುವಿಕೆಯಿಂದ ಕೆಲ ಕಾಲ …

Read More »

ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವೆಚ್ಚ ವೀಕ್ಷಕ ಸುಬೋಧ ಸಿಂಗ್ ಮಾತನಾಡಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಲಾಗಿರುವ ವಿವಿಧ ತಂಡಗಳು …

Read More »

ಶಿಗ್ಗಾಂವಿಯಲ್ಲಿ ಗ್ರಾಮದೇವತೆ ದರ್ಶನ ಪಡೆದು ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ/ಧಾರವಾಡ: ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ‌ ಇಂದು ನಾಮಪತ್ರ ಸಲ್ಲಿಸಿದರು. ಇಂದು ಸಿಎಂ ಬೆಂಗಳೂರಿನಿಂದ ಶಿಗ್ಗಾಂವಿಗೆ ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿ.ಸಿ ಪಾಟೀಲ್, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಮತ್ತು ಕುಟುಂಬಸ್ಥರು ಸಿಎಂ ಬೊಮ್ಮಾಯಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಸಿಎಂ, ಕ್ಷೇತ್ರದಲ್ಲಿ ಈ ಹಿಂದಿನಕ್ಕಿಂತಲೂ ಹೆಚ್ಚಿನ ಬೆಂಬಲ ಇದೆ. ತಾಲೂಕಿನ ಅಭಿವೃದ್ಧಿಯನ್ನು …

Read More »

ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ. ಧೂಳುಮಯವಾದ ಹೆದ್ದಾರಿಯ ಸಮಸ್ಯೆಯ ಕುರಿತು ಸ್ಥಳೀಯರು ಹಾಗು ಸವಾರರು ಆರೋಪ ಮಾಡುತ್ತಿರುವುದು.ಕಾರವಾರ: ಅದು ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿ. ಇಲ್ಲಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಉರುಳಿದರೂ ಈವರೆಗೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಅರೆ ಬರೆ ಕಾಮಗಾರಿಯಾಗಿರುವ ಹೆದ್ದಾರಿಯಲ್ಲಿ ತಗ್ಗು, ದಿನ್ನೆ, ಧೂಳಿನ ಮಧ್ಯ ಅನಿವಾರ್ಯವಾಗಿ ವಾಹನಗಳು ಸಂಚಾರ ಮಾಡುವಂತಾಗಿದೆ. …

Read More »

ಜೆಡಿಎಸ್​ ಭರವಸೆ ಪತ್ರ ಬಿಡುಗಡೆ: ಮಾತೃಶ್ರೀ, ಮಹಿಳಾ ಸಬಲೀಕರಣ, ರೈತ ಚೈತನ್ಯ ಸೇರಿ 12 ಭರವಸೆ ನೀಡಿದ ಜೆಡಿಎಸ್​​

ಬೆಂಗಳೂರು: ಕರುನಾಡ ಜನತೆಗಾಗಿ ಜೆಡಿಎಸ್ 12 ಭರವಸೆಯ ಪತ್ರ ಸಿದ್ದಪಡಿಸಿದ್ದು, ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸದಲ್ಲಿ ಇಂದು ಭರವಸೆ ಪತ್ರ ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಜನತಾ ಪ್ರಣಾಳಿಕೆ ಕರುಡು ರಚನಾ ಸಮಿತಿಯ ಅಧ್ಯಕ್ಷ ಬಿ.ಎಂ.ಫಾರೂಕ್ ಅವರು, ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎನ್. ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಜೆಡಿಎಸ್ ಪಕ್ಷ ಅಧಿಕಾರಕ್ಕೆ …

Read More »

ಚೆಕ್ ಬೌನ್ಸ್ ಪ್ರಕರಣ-ವೈಎಸ್‌ವಿ ದತ್ತಾಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

ಬೆಂಗಳೂರು: ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ …

Read More »

ಕಾಂಗ್ರೆಸ್​ ಮೂರನೇ ಪಟ್ಟಿ ರಿಲೀಸ್​: ಲಕ್ಷ್ಮಣ್​ ಸವದಿಗೆ ಟಿಕೆಟ್​.. ಸಿದ್ದರಾಮಯ್ಯಗೆ ಕೋಲಾರ ಮಿಸ್​

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಬಹುನಿರೀಕ್ಷಿತ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 43 ಅಭ್ಯರ್ಥಿಗಳನ್ನು ಹೆಸರನ್ನು ಅಖೈರು ಮಾಡಲಾಗಿದ್ದು, ಇನ್ನೂ 15 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಂಡಿದೆ. ವರುಣ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ನೀಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ.ಮಂಜುನಾಥ್​ಗೆ ಟಿಕೆಟ್​ ನೀಡಲಾಗಿದೆ. ಬಿಜೆಪಿಗೆ ರಾಜೀನಾಮೆ ನೀಡ ನಿನ್ನೆಯಷ್ಟೇ ಕಾಂಗ್ರೆಸ್​ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಅಥಣಿ …

Read More »

ಪರಿಷತ್ ನಲ್ಲಿ ಬಹುಮತ ಕುಸಿತದ ಚಿಂತೆಯಲ್ಲಿ ಬಿಜೆಪಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಗೊಂದಲದಲ್ಲಿ ಅತೃಪ್ತಿಯ ಭುಗಿಲೆಬ್ಬಿಸಿಕೊಂಡಿರುವ ಬಿಜೆಪಿ ಇದೀಗ ವಿಧಾನ ಪರಿಷತ್ ನಲ್ಲಿ ಬಹುಮತ ಕಳೆದುಕೊಳ್ಳುವ ಆತಂಕದಲ್ಲಿ ಮುಳುಗಿದೆ. 75 ಸದ್ಯಬಲ ಹೊಂದಿರುವ ವಿಧಾನ ಪರಿಷತ್ ನಲ್ಲಿ ಬಹುಮತಕ್ಕೆ 38 ಸ್ಥಾನಗಳನ್ನು ಹೊಂದುವುದು ಅಗತ್ಯ. ಪ್ರಸ್ತುತ ಕಾಂಗ್ರೆಸ್ 26, ಜೆಡಿಎಸ್ 8 ಸದಸ್ಯರನ್ನು ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಒಬ್ಬರು ಸಭಾಪತಿ ಇದ್ದು, ಮೂರು ಸ್ಥಾನಗಳು ಖಾಲಿ ಇವೆ. ಹಲವು ವರ್ಷಗಳ ನಂತರ 39 ಸದಸ್ಯಬಲದೊಂದಿಗೆ ಬಹುಮತ …

Read More »