ಹಾವೇರಿ : ತರಕಾರಿ ಮಾರಾಟ ಮಾಡಿ ಮಗಳನ್ನು ಸಾಕಿ ವಿದ್ಯಾಭ್ಯಾಸ ನೀಡಿ ಮದುವೆ ಮಾಡಿಕೊಟ್ಟಿದ್ದ ಕುಟುಂಬ ಇದೀಗ ಮಗಳ ಜತೆಗೆ ಆತ್ಮಹತ್ಯೆ ಮಾಡಿಕೊಂಡಿದೆ. ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆಗೆ ಕಾರಣ ಹೊಸ ಮನೆ, ಮಗಳ ಮದುವೆ ಎನ್ನಲಾಗಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ …
Read More »ಸೈಬರ್ ಅಪರಾಧಗಳಿಂದಾಗಿ ಪ್ರತಿ ದಿನ ಕೋಟಿ-ಕೋಟಿ ಹಣ ಕಳೆದುಕೊಳ್ಳುತ್ತಿರುವ ಕರ್ನಾಟಕದ ಜನ
ಬೆಂಗಳೂರು, ಫೆಬ್ರವರಿ 23: ಕರ್ನಾಟಕದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ, ಕರ್ನಾಟಕವು ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಕಳೆದುಕೊಳ್ಳುತ್ತಿದೆ. ಇದರಲ್ಲಿ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಮೈಸೂರು ಹಾಗೂ ಮಂಡ್ಯ ನಂತರದ ಸ್ಥಾನದಲ್ಲಿವೆ. ಬೆಚ್ಚಿಬೀಳಿಸುವ ಈ ಮಾಹಿತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಅಪರಾಧ ವರದಿ ಮಾಡುವಲ್ಲಿ ವಿಳಂಬವಾಗುತ್ತಿದೆ. ರಾಜ್ಯಗಳ ನಡುವೆ ಸಮನ್ವಯದ ಕೊರತೆ ಇದೆ. ಇದೆಲ್ಲ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸೈಬರ್ …
Read More »ಅಥಣಿಯ ಸಿಂಗಂ ಎಂದೇ ಖ್ಯಾತಿ ಹೊಂದಿರುವ ಬಸವರಾಜ ರಾಜಕಾರಣದ ಅಖಾಡಕ್ಕೆ ಎಂಟ್ರಿ
ಬೆಳಗಾವಿ: ಕುಡಚಿ ಶಾಸಕ ಪಿ.ರಾಜೀವ್ ಮಾದರಿಯಲ್ಲೇ ಅಥಣಿ ಮತಕ್ಷೇತ್ರಕ್ಕೆ ಮತ್ತೋರ್ವ ಪೋಲಿಸ್ ಅಧಿಕಾರಿ ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯಾರಂತೀರಾ ಇಲ್ಲಿದೆ ನೋಡಿ ಡೀಟೇಲ್ಸ್. ಅಥಣಿಯಲ್ಲಿ ಪಿಎಸ್ ಐ(PSI) ಆಗಿದ್ದಾಗ ಖಡಕ್ ಪೊಲೀಸ್ ಅಧಿಕಾರಿ ಎಂದೇ ಗುರಿತಿಸಿಕೊಂಡಿದ್ದ ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬೀಸನಕೊಪ್ಪ ಈಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆಯೇ ಬಸವರಾಜ ತಮ್ಮ ಪೊಲೀಸ್ …
Read More »ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
ಬೆಳಗಾವಿ: ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು …
Read More »ಬಿಸಿಯನ್ನು ತಾಳಿಕೊಳ್ಳಬಲ್ಲ ಗೋಧಿ ತಳಿ ಅಭಿವೃದ್ಧಿ: ಐಸಿಎಆರ್ನ ಹೊಸ ಸಂಶೋಧನೆ
ನವದೆಹಲಿ: ಬಿಸಿಯನ್ನೂ ತಾಳಿಕೊಳ್ಳಲು ಸಾಧ್ಯವಿರುವ ಗೋಧಿ ತಳಿಯನ್ನು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು(ಐಸಿಎಆರ್) ಅಭಿವೃದ್ಧಿಪಡಿಸಿದೆ. ಬೇಸಿಗೆ ಸಮೀಪಿಸುತ್ತಿದೆ. ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಗೋಧಿ ಬೆಳೆಯುವ ಪ್ರದೇಶಗಳಲ್ಲಿ ತಾಪಮಾನ ಸರಾಸರಿ 3-5 ಸೆಲಿÏಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಗೋಧಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಐಸಿಎಆರ್ ವಿಜ್ಞಾನಿಗಳು ಬಿಸಿಯನ್ನೂ ತಾಳಿಕೊಳ್ಳುವ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಜನವರಿಯಲ್ಲಿ ಏಕದಳ ಧಾನ್ಯಗಳ ಕೊರತೆ ದಾಖಲೆಯ ಶೇ. …
Read More »ಲಂಚಕ್ಕೆ ಕೈಯೊಡ್ದಿದ್ದ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಹರಿಹರ: ಲಂಚಕ್ಕೆ ಕೈಯೊಡ್ದಿದ್ದ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇಂಜಿನಿಯರ್ ಕರಿಬಸವಯ್ಯನನ್ನು ಬಂಧಿಸಿದ್ದಾರೆ. ಕಡತ ವಿಲೇವಾರಿಗಾಗಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರಿಬಸವಯ್ಯ, ಅದಾಗಲೇ 9ಸಾವಿರ ರೂಪಾಯಿ ಪಡೆದಿದ್ದ. ಉಳಿದ …
Read More »ಯುವತಿಯ ಸೀಟಿನ ಮೇಲೆ ಸಹ ಪ್ರಯಾಣಿಕನಿಂದ ಮೂತ್ರ ವಿಸರ್ಜನೆ
ಹುಬ್ಬಳ್ಳಿ: ಮಹಿಳಾ ಪ್ರಯಾಣಿಕಳ ಸೀಟಿನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವಿಜಯಪುರ ಮತ್ತು ಮಂಗಳೂರು ನಡುವೆ ಸಂಚರಿಸುವ ನಾನ್ ಎಸಿ ಸ್ಲೀಪರ್ ಬಸ್ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ಕಿರೇಸೂರ್ ಡಾಬಾ ಬಳಿ ಮಂಗಳೂರು-2ನೇ ಘಟಕಕ್ಕೆ ಸೇರಿದ್ದ ನಾನ್ ಎಸಿ ಸ್ಲೀಪರ್ ಬಸ್ನಲ್ಲಿ ನಡೆದಿದೆ. ಪ್ರಯಾಣಿಕರ ಊಟ, ತಿಂಡಿಗಾಗಿ ಡಾಬಾ ಬಳಿ ಬಸ್ ನಿಲ್ಲಿಸಿದಾಗ ಎಲ್ಲ ಪ್ರಯಾಣಿಕರು ಕೆಳಗೆ ಇಳಿದಿದ್ದರು. ಈ ವೇಳೆ 30 ವರ್ಷದ ವ್ಯಕ್ತಿ ಮೂತ್ರ …
Read More »ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ಅವರವರ ವೈಯಕ್ತಿಕ ಆಯ್ಕೆಗಳಾಗಿವೆ. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ …
Read More »ಹ್ಯಾಪಿ ಎಂಡಿಂಗ್ʼ ಬೇಕು ಅಂತ ಯುವತಿ ಮೇಲೆ ʼಅತ್ಯಾಚಾʼರವೆಸಗಿದ ಕಾಮುಕ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟೆಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್ನಲ್ಲಿ …
Read More »ಭಾರತದಲ್ಲೂ ಶೀಘ್ರದಲ್ಲೇ ಭಾರಿ ಭೂಕಂಪ ಸಾಧ್ಯತೆ!; ತಜ್ಞರ ಎಚ್ಚರಿಕೆ
ನವದೆಹಲಿ: ಕಳೆದ ಎರಡು ಮೂರು ವಾರಗಳಲ್ಲಿ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಭೀಕರ ಸರಣಿ ಭೂಕಂಪದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಭಾರಿ ಆಸ್ತಿ-ಪಾಸ್ತಿ ಹಾನಿಗೀಡಾಗಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಭಾರತದಲ್ಲೂ ಸದ್ಯದಲ್ಲೇ ಭಾರಿ ಭೂಕಂಪ ಸಂಭವಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್(ಎನ್ಜಿಆರ್ಐ) ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಹಿಮಾಲಯ ಭಾಗದಲ್ಲಿ ಭೂಕಂಪ ಆಗುವ ಸಾಧ್ಯತೆಗಳಿದ್ದು, ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ …
Read More »
Laxmi News 24×7