ಸುವರ್ಣ ವಿಧಾನಸೌಧ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯುತ್ ತಂತಿ ಸೇರಿ ಉಳಿದ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಹದೇವನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ವರ್ಷದ ಬಾಲಕ ಅದೇ ಶಾಲೆಯ ಕುಡಿಯುವ ನೀರಿಕ ಘಟಕದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ. …
Read More »ಟಾಪ್ಲೆಸ್ ಆಗಿ ಬಂದ ಉರ್ಫಿ! ತಿಂಡಿ ಪ್ಲೇಟ್-ಜ್ಯೂಸ್ ಗ್ಲಾಸ್ ಹಿಡಿದು ಮೈಮಾಟ ಪ್ರದರ್ಶಿಸುತ್ತಾ ಬ್ರೇಕ್ಫಾಸ್ಟ್ ಎಂದ ನಟಿ.
ಮುಂಬೈ: ವಿಚಿತ್ರ ಫ್ಯಾಷನ್ ಸೆನ್ಸ್ನಿಂದ ಬಹಳಷ್ಟು ಜನಪ್ರಿಯತೆ ಪಡೆದ ನಟಿ ಊರ್ಫಿ ಜಾವೇದ್, ತಾವು ಧರಿಸುವ ಬಟ್ಟೆಯಿಂದಲೇ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈಕೆ ಯಾವ ಬಟ್ಟೆ ತೊಟ್ಟರೂ ಅದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಉರ್ಫಿ ಅಂದಾಕ್ಷಣ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್ ಹಾಟ್ ಕಾಣಿಸಿಕೊಳ್ಳುವ ಉರ್ಫಿಯನ್ನು ಕಳೆದ ಮಂಗಳವಾರ (ಡಿ.20) ದುಬೈ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿ …
Read More »ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ
ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು. ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು …
Read More »ವಿಧಾನಪರಿಷತ್ ನಲ್ಲಿ `ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕ’ ಅಂಗೀಕಾರ
ಬೆಳಗಾವಿ : ವಿಧಾನಪರಿಷತ್ ನಲ್ಲಿ ಸುದೀರ್ಘ ಚರ್ಚೆ ಬಳಿಕ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ-2022 ಕ್ಕೆ ಅಂಗೀಕಾರ ದೊರೆಯಿತು. ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಈ ಕುರಿತು ಮಾತನಾಡಿದ್ದು, 2005 ಕ್ಕಿಂತ ಪೂರ್ವದಲ್ಲಿ ಕೃಷಿ ಮಾಡಿಕೊಂಡು ಬಂದಿರುವವರಿಗೆ 25 ಎಕರೆ ಭೂಮಿಯನ್ನು 30 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡುವ ಪ್ರಸ್ತಾಪ ಇದರಲ್ಲಿದೆ. ಆದರೆ ಇದ್ದವರಿಗೆ ಕೊಡುವ ಬದಲು ಇಲ್ಲದ ರೈತರಿಗೆ ಭೂಮಿ ನೀಡಿದರೆ ಅವರ ಜೀವನ …
Read More »ಕರ್ನಾಟಕದ ವಿರುದ್ಧ ಮಹಾರಾಷ್ಟ್ರದ ನಿರ್ಣಯಕ್ಕೆ ರಾಜ್ಯದಲ್ಲಿ ರೋಷಾಗ್ನಿ
ನಾಗ್ಪುರ/ಬೆಳಗಾವಿ: ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ, ಈಗ “ನಿರ್ಣಯ’ದ ಮೂಲಕ ಕರ್ನಾಟಕವನ್ನು ಕೆಣಕಿದೆ. ಮಂಗಳವಾರ ಮಹಾರಾಷ್ಟ್ರ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಕರ್ನಾಟಕದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಇದಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜತೆಗೆ, ಗಡಿ ತಂಟೆ ಕುರಿತು ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ವಿಧಾನ ಪರಿಷತ್ನಲ್ಲಿ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿದೆ. ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಇತ್ತೀಚೆಗೆ ವಿಧಾನಸಭೆಯಲ್ಲಿ ನಿರ್ಣಯ …
Read More »ಕುಕ್ಕರ್ ಪ್ರಕರಣ : ಹಗುರಗೊಳಿಸುವ ಯತ್ನ : ಸಿಎಂ ಬೊಮ್ಮಾಯಿ
ಬೆಳಗಾವಿ: ಕುಕ್ಕರ್ ಪ್ರಕರಣದಂತಹ ಗಂಭೀರ ವಿಚಾರವನ್ನೂ ಮತಬ್ಯಾಂಕ್ ಉದ್ದೇಶದಿಂದ ಹಗುರಗೊಳಿಸುವಂತಹ ಹೇಳಿಕೆ ಖಂಡನೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಅವರು ಶಾಸಕ ಸಿ.ಟಿ.ರವಿ ಅವರ ಭಯೋತ್ಪಾದನೆ ಕುರಿತ ನಿಯಮ 69ರಡಿಯ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಕುಕ್ಕರ್ ಬ್ಲಾಸ್ಟ್ ಆಕಸ್ಮಿಕವಾಗಿ ನಡೆದಿದೆ. ಒಂದು ವೇಳೆ ಅದು ಜನನಿಬಿಡ ಪ್ರದೇಶದಲ್ಲಿ ಸ್ಫೋಟಿಸಿ ದೊಡ್ಡ ಪ್ರಮಾಣದ ಸಾವುನೋವು ಉಂಟಾಗಿದ್ದರೆ ಏನಾಗುತ್ತಿತ್ತು ಎನ್ನುವುದನ್ನು ಗಮನದಲ್ಲಿರಿಸಬೇಕು ಎಂದು ತಿಳಿಸಿದರು. ಪೊಲೀಸರ ದೊಡ್ಡ ಲೋಪ ಉಪನಾಯಕ …
Read More »ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆಗೆ ಅಂಗೀಕಾರ
ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಹೂಡಿಕೆದಾರರ ಪ್ರಾಧಿಕಾರ ರಚಿಸುವ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು. ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ದೊಡ್ಡ-ಅತಿದೊಡ್ಡ ಅಥವಾ ಬೃಹತ್ ಗಾತ್ರದ ಅಂದರೆ 1,250 ಎಕರೆಗೂ ಮೀರಿದ ಹೂಡಿಕೆ ಪ್ರದೇಶ, ಕೈಗಾರಿಕಾ …
Read More »ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ: ಸಿಎಂ ಬೊಮ್ಮಾಯಿ
ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. …
Read More »ಹಳೇ ಪಿಂಚಣಿ ವ್ಯವಸ್ಥೆ ಜಾರಿ ಇಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್ಬಿಐ …
Read More »ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು
ಬೆಳಗಾವಿ: ‘ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಸುಸ್ಥಿರ ಸಮಾಜ ನಿರ್ಮಾಣಕ್ಕೆ ಇದೇ ಮೊದಲ ಹೆಜ್ಜೆ’ ಎಂದು ನಿವೃತ್ತ ಮುಖ್ಯಶಿಕ್ಷಕ ವೈ.ಎಂ.ಕಾಮಕರ ಕಿವಿಮಾತು ಹೇಳಿದರು. ಇಲ್ಲಿನ ಫುಲಬಾಗ್ ಗಲ್ಲಿಯಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ-ನಂಬರ್ 7ರಲ್ಲಿ ಭಾನುವಾರ ನಡೆದ, 1994ರಿಂದ 2000ರವರೆಗಿನ ವಿದ್ಯಾರ್ಥಿಗಳ ಒಕ್ಕೂಟದಿಂದ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಹಳೆಯ …
Read More »
Laxmi News 24×7