Breaking News

ರಾಜ್ಯ

JDS ಪಂಚರತ್ನ ರಥಯಾತ್ರೆ ಮಳೆಯ ಕಾರಣ ನಾಲ್ಕು ದಿನ ಮುಂದಕ್ಕೆ

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭಾನುವಾರದಿಂದ (ಡಿ.11) ಮತ್ತೆ ಆರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯ ಕಾರಣ ನಾಲ್ಕು ದಿನಗಳು ಮುಂದೂಡಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆ ಸುರಿಯುತ್ತಿದೆ. ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆ ಚಿಕ್ಕನಾಯಕನಹಳ್ಳಿಯಿಂದ ಆರಂಭವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ಸಾಗಬೇಕಿತ್ತು. ತುಮಕೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ರಥಯಾತ್ರೆ ಮಾರ್ಗ, ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ. 16ರಂದು …

Read More »

ಗುರ್ಲಾಪುರ: ಯೋಧನ ಅಂತ್ಯಕ್ರಿಯೆ

ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.   ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್‌ …

Read More »

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ನಿಲುವು ತಿಳಿಸಲಿ: ಠಾಕ್ರೆ

(ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.   ಜಲ್ನಾ ಜಿಲ್ಲೆಯ ಸಂತ ರಾಮದಾಸ್ ಕಾಲೇಜಿನಲ್ಲಿ ನಡೆದ 42ನೇ ಮರಾಠವಾಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಭಾನುವಾರ ನಾಗ್ಪುರ- ಮುಂಬೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಬರುತ್ತಿದ್ದಾರೆ. ಅವರನ್ನು …

Read More »

ಗಡಿ ವಿವಾದ ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ

ಬೆಂಗಳೂರು: ಬೆಳಗಾವಿ ಗಡಿ ವಿವಾದ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ವಿವರಣೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿ. 14 ಮತ್ತು 15ರಂದು ಎರಡೂ ರಾಜ್ಯಗಳ ಮುಖ್ಯ ಮಂತ್ರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.   ಸೋಮವಾರ ರಾಜ್ಯದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದೆ. ಅಮಿತ್‌ ಶಾ ಕೂಡ ತಾವು ಹೇಳಿದಾಗ ಬರಬೇಕಾಗುತ್ತದೆ ಎಂದು ನನಗೆ ತಿಳಿಸಿದ್ದಾರೆ. ಕರ್ನಾಟಕದ ವಿಚಾರ, …

Read More »

ಸಲಾಂ ಆರತಿ: ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ; ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, …

Read More »

ಬೆಳಗಾವಿ ಕನ್ನಡ ಧ್ವಜ ವಿವಾದ ತಪ್ಪಿತಸ್ಥ ಪೋಲಿಸ್ ಅಧಿಕಾರಿಗಳ ವಿರುದ್ಧ ಡಿ.ಆಯ್ .ಜಿ ಗೆ ಮನವಿ

ಬೆಳಗಾವಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ ಸೇನೆಯ ಬೆಳಗಾವಿ ಯುವ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಸಂಪತ್ ಕುಮಾರ್ ದೇಸಾಯಿರವರ ಮೇಲೆ ದೌರ್ಜನ್ಯವೆಸಗಿದ ಪೋಲಿಸರ ವಿರುದ್ಧ ಮಾನ್ಯ ಗೌರವಾನ್ವಿತ ಪೊಲೀಸ್ ಮಹಾ ನಿರ್ದೇಶಕರಿಗೆ ಸಂಪತ್ರವರ ತಂದೆ ಮತ್ತು ತಾಯಿಯವರ ತೆರಳಿ ದೂರನ್ನು ಸಲ್ಲಿಸಿ ಸಂಪತ್ ರವರಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಪೊಲೀಸ್ ಮಹಾ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಸೂದ್ ಸರ್ ರವರು ಮುಂದಿನ ದಿನಗಳಲ್ಲಿ ನಿಮಗೆ …

Read More »

ಒಂದು ಎಕರೆಯಲ್ಲಿ ಲಕ್ಷಾಂತರ ರೂ. ಲಾಭ; ಹೊಸೂರ ರೈತನ ಸಾಧನೆ

ರಬಕವಿ-ಬನಹಟ್ಟಿ: ಒಂದೇ ಒಂದು ಎಕರೆ ಭೂ ಪ್ರದೇಶವನ್ನು ವೈಜ್ಞಾನಿಕವಾಗಿ ಬಳಸಿಕೊಂಡು ವರ್ಷದೂದ್ದಕ್ಕೂ ವೈವಿಧ್ಯಮಯವಾದ ಬೆಳೆಗಳನ್ನು ಬೆಳೆಯುತ್ತ ಲಕ್ಷಾಂತರ ರೂ. ಲಾಭ ಗಳಿಸುತ್ತಿರುವ ಸಮೀಪದ ಹೊಸೂರಿನ ರೈತ ಹನಮಂತ ಭುಜರುಕ ಚಿಕ್ಕ ಭೂಮಿಯನ್ನು ಹೊಂದಿದ ರೈತರಿಗೆ ಮಾದರಿಯಾಗಿದ್ದಾರೆ.   ಹನಮಂತ ತಮ್ಮ ಮಕ್ಕಳಾದ ಸಂಗಪ್ಪ ಮತ್ತು ಬಸವರಾಜರ ಜೊತೆಗೂಡಿ ಕಡಿಮೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಸಂಗಪ್ಪ ಬಿ.ಎ. ಪದವಿಧರ. ಬೇರೆ ಕಡೆಗೆ ನೌಕರಿಗೆ ಹೋಗದೆ ತಂದೆಗೆ ಕೃಷಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಸಂಗಪ್ಪ ಭುಜರುಕ …

Read More »

ಗಡಿ ವಿವಾದ: ಅಮಿತ್ ಶಾ ಭೇಟಿಗೆ ಕರ್ನಾಟಕದ ಸಂಸದರಿಗೆ ಸಿಎಂ ಸೂಚನೆ

ಬೆಂಗಳೂರು, ಡಿಸೆಂಬರ್ 9: ಗಡಿ ವಿವಾದದಲ್ಲಿ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರು ಬಸವರಾಜ ಬೊಮ್ಮಾಯಿ ಅವರು, ಈ ಹಿಂದೆಯೂ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರಿಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ …

Read More »

Y.S.R. ಪಕ್ಷ ಸೇರ್ತಾರಾ ಜನಾರ್ಧನ ರೆಡ್ಡಿ…!

ಕೊಪ್ಪಳ- ಸದ್ಯ ರಾಜಕೀಯ ವಿಶ್ರಾಂತಿಯಲ್ಲಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಯವರು ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಚರ್ಚೆಯಂತೂ ಶುರುವಾಗಿದೆ. ಈಗಾಗಲೇ ಅನೇಕ ಬಾರಿ ಬಿಜೆಪಿ ವಿರುದ್ಧ ಮಾತನಾಡಿದ್ದ ಜನಾರ್ಧನ ರೆಡ್ಡಿ, ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಅನುಮಾನ ಶುರುವಾಗಿದೆ. ಈ ಬೆನ್ನಲ್ಲೇ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಜನಾರ್ಧನ ರೆಡ್ಡಿ ಅನ್ನೋ ಮಾತುಗಳು ಕೇಳಿ ಬರ್ತಾ ಇವೆ. ಹೌದು, ಬಿಜೆಪಿಗೆ ಮತ್ತೆ ಮರಳೋದಿಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡ್ತಾ ಇಲ್ಲವಂತೆ. …

Read More »

ರಾಜ್ಯ ವಿಧಾನಸಭೆ ಚುನಾವಣಾ ವಿಶ್ಲೇಷಣೆ: ಕಾಂಗ್ರೆಸ್ ಪಕ್ಷಕ್ಕೆ 55-60 ಸ್ಥಾನ ಖಚಿತ; ಬಿಜೆಪಿ 70-75 ಕ್ಷೇತ್ರ ಗೆಲ್ಲಲು ಶಕ್ತ; 15-20ಕ್ಕೆ ಜೆಡಿಎಸ್ ತೃಪ್ತ!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ ಎಂದು ವಿಶ್ಲೇಷಣೆ ತಿಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ …

Read More »