Breaking News

ರಾಜ್ಯ

ಕರ್ನಾಟಕ &ಮಹಾರಾಷ್ಟ್ರದ ಗಡಿ ಖ್ಯಾತೆ ಮಹಾಜನ್ ಆಯೋಗದ ವರದಿ ಒಪ್ಪೋದೇ ಪರಿಹಾರ

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಖ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇದೇ ರೀತಿಯ ಖ್ಯಾತಿಯನ್ನು ತೆಗೆದುಕೊಂಡು ಬಂದಿದೆ. ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಒಪ್ಪಿಲ್ಲಾ, ಮಹಾಜನ್ ಆಯೋಗವನ್ನ ರಚನೆ ಮಾಡಿಸಿದವರು ಮಹಾರಾಷ್ಟ್ರದವರು. ನಂತರ ಮಹಾಜನ್ ಆಯೋಗದ ವರದಿಗೆ ತಕರಾರು ಮಾಡಿದರು ಎಂದರು.‌ ಅಲ್ಲದೇ ದೇಶದಲ್ಲಿ ಶಾಂತಿಯಿಂದ …

Read More »

ವಿದ್ಯಾರ್ಥಿಗಳು ತಮ್ಮಲ್ಲಿರುವ ಸದನಶೀಲತೆ ಮತ್ತು ಕೌಶಲ್ಯಗಳನ್ನ ಸಶಕ್ತ ಗೊಳ್ಳಬೇಕು: ಬಸವರಾಜ್ ನಾಲತವಾಡ

ವಿದ್ಯಾರ್ಥಿಗಳು ತಮ್ಮಲ್ಲಿರುವ ಸದನಶೀಲತೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಮಾಜಿಕ ಉತ್ಪಾದನಾ ಕಾರ್ಯದಲ್ಲಿ ಸಶಕ್ತ ಗೊಳ್ಳಬೇಕು ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್ ನಾಲತವಾಡ ಹೇಳಿದರು. ಅವರು ಇಂದು ನಗರದ ಕೆಎಲ್ಇ ಜಿ.ಎ.ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ಮತ್ತು ಪಠ್ಯಧಾರಿತ ವಸ್ತು ಪ್ರದರ್ಶನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರತಿ ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆ ಹಂತದಲ್ಲಿ …

Read More »

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು. ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ …

Read More »

ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 8 ರಂದು ದಲಿತ ಸಮುದಾಯಗಳ ಐಕ್ಯತಾ ಸಮಾವೇಶ!

ಕಾಂಗ್ರೆಸ್ ಪಕ್ಷದ ವತಿಯಿಂದ ಚಿತ್ರದುರ್ಗದಲ್ಲಿ ಜನವರಿ 8 2023 ರಂದು ಹಮ್ಮಿಕೊಳ್ಳಲಾದ ದಲಿತ ಸಮುದಾಯಗಳ ಐಕ್ಯತಾ ಸಮಾವೇಶದ ಬಗ್ಗೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದರು. ಮೀಸಲಾತಿ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು. ಇದರ ರಾಜಕೀಯ ಲಾಭಪಡೆಯಲು ಬಿಜೆಪಿ ಮುಂದಾಗಿದೆ.ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯವನ್ನು ಬಿಜೆಪಿ ಒಡೆದಾಳಲು ಹೊರಟಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ. ಮೀಸಲಾತಿಗೆ ಕೇಂದ್ರ ಸರ್ಕಾರ ಕಾನೂನಿನ ಚೌಕಟ್ಟು …

Read More »

ಅವಿಶ್ವಾಸ ನಿರ್ಣಯ: ವಿಮಾನದಲ್ಲಿ ಬಂದ ಗ್ರಾ.ಪಂ ಸದಸ್ಯರು

ರಾಣೆಬೆನ್ನೂರು (ಹಾವೇರಿ): ಬೆಂಗಳೂರಿನ ರೆಸಾರ್ಟ್‌ನಲ್ಲಿ 40 ದಿನ ತಂಗಿದ್ದ ತಾಲ್ಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯ 9 ಸದಸ್ಯರು ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿದ್ದು, ಮಂಗಳವಾರ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಪಾಲ್ಗೊಂಡರು. ಗ್ರಾಮ ಪಂಚಾಯಿತಿ ಸದಸ್ಯ ಬಲ 13 ಆಗಿದ್ದು, ಅಧಿಕಾರಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ನಡೆದಿತ್ತು. ಗ್ರಾ.ಪಂ. ಅಧ್ಯಕ್ಷ ಮಾಲತೇಶ ನಾಯರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಾಕಿ ಉಳಿದಂತಾಗಿದೆ. ಮಾಲತೇಶ ನಾಯರ್‌ 15 …

Read More »

ಟೀಕೆಗೆ ಮುಸ್ಲಿಮರ ಹೆಸರು ಬಳಕೆ: ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ

ಬೆಂಗಳೂರು: ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಫೋಟೋಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್‌ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.   ‘ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ‘ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ತುಚ್ಛವಾಗಿ ಕಾಣಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ …

Read More »

ಯಶ್ ಶಿವಾಜಿ ಪಾತ್ರ ಮಾಡ್ತಾರಾ? ಆ ಫೋಟೋ ಗುಟ್ಟೇನು?

ಕನ್ನಡದ ರಾಕಿಂಗ್ ಸ್ಟಾರ್ (Rocking Star Yash)​ ಯಶ್ ಯಾವ ಪಾತ್ರ ಮಾಡಿದ್ರೆ ಚೆನ್ನಾಗಿರುತ್ತದೆ. ಈ ಒಂದು ಕ್ವಶ್ಚನ್ ಇದ್ದೇ ಇದೆ. ಕೆಜಿಎಫ್ ರಾಕಿ ಭಾಯ್ ಬಿಯರ್ಡ್ (Beard Look) ಲುಕ್​​ ನಲ್ಲಿ ಕಾಣಿಸಿಕೊಂಡಿದ್ದೇ ತಡ, ಎಲ್ಲರಿಗೂ ಅದು ಕ್ರೇಜ್ (Craze) ರೂಪದಲ್ಲಿಯೇ ಕಾಣಿಸಿಕೊಂಡಿತು. ಈಗಲೂ ಈ ಬೀಯರ್ಡ್ ಲುಕ್ ಟ್ರೆಂಡಿಯಾಗಿಯೇ ಇದೆ. ಬಿಯರ್ಡ್ ಜಾಹೀರಾತಿನಲ್ಲೂ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. 2022 ರಲ್ಲಿ ಬಂದ ಕೆಜಿಎಫ್-2 ಬಂದ್ಮೇಲಂತೂ ಬಿಯರ್ಡ್ …

Read More »

ವಿದ್ಯುತ್​ ಕಂಬಕ್ಕೆ ಬೈಕ್​ ಡಿಕ್ಕಿಯಾಗಿ ದೇಹ ಇಬ್ಭಾಗ: ಹುಟ್ಟುಹಬ್ಬದಂದೇ ಬಾಗಲಕೋಟೆ ಯುವಕ ದುರಂತ ಸಾವು, ಸ್ನೇಹಿತನೂ ಮೃತ್ಯು

ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟು ಹಬ್ಬದ ದಿನವೇ ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ನೇಹಿತನೂ ಮೃತಪಟ್ಟಿದ್ದಾನೆ. ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ ಕಿರಣ (21) ಮೃತ ದುರ್ದೈವಿಗಳು. ನಿನ್ನೆ (ಡಿ.6) ಸಂಗಮೇಶ್​ ಹುಟ್ಟುಹಬ್ಬವಿತ್ತು. ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಸ್ನೇಹಿತ ಕಿರಣ್​ ಜೊತೆ ಬೈಕ್​ನಲ್ಲಿ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಲ್ಲಿ ಒಬ್ಬನ …

Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಡಿಸೆಂಬರ್ 7ರಿಂದ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 9 ರಂದು ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಡಿಸೆಂಬರ್ 10 ಮತ್ತು 11ರಂದು ಎಲ್ಲಾ ಜಿಲ್ಲೆಗಳಲ್ಲಿಯೂ ಬಾರಿ ಮಳೆಯಾಗುವ …

Read More »

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ

ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ನವದೆಹಲಿ: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ಹೌದು.. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. …

Read More »