Breaking News

ರಾಜ್ಯ

ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್‌ಐಆರ್‌ಗಳನ್ನು 24 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.   ಈ ವಿಚಾರವಾಗಿ ವಕೀಲ ಎಸ್‌. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ …

Read More »

ಹಾಲಿ ಶಾಸಕರಲ್ಲಿ ಗೆಲ್ಲೋರ್‍ಯಾರು? ಸೋಲೋರ್‍ಯಾರು? 40 ಶಾಸಕರ ಮರು ಆಯ್ಕೆ ಸುಲಭವಲ್ಲ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಂತರಿಕ ಸಮೀಕ್ಷೆ ಮಾಡಿಸಿದ್ದ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಿಗೆ ಹಾಲಿ ಶಾಸಕರ ಪೈಕಿ ಮತ್ತೆ ಗೆಲ್ಲೋರೆಷ್ಟು-ಸೋಲೋರೆಷ್ಟು ಎಂಬ ಆತಂಕ ಶುರುವಾಗಿದೆ.   ಮೂರೂ ಪಕ್ಷಗಳು ಆಂತರಿಕವಾಗಿ ನಡೆಸಿರುವ ಸಮೀಕ್ಷೆಯಲ್ಲಿ ಈಗಿರುವ ಹಾಲಿ ಶಾಸಕರ ಪೈಕಿ ಬಿಜೆಪಿ 20, ಕಾಂಗ್ರೆಸ್‌ 15 ಹಾಗೂ ಜೆಡಿಎಸ್‌ನ 5 ಶಾಸಕರ ಗೆಲುವು ಕಷ್ಟ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಆ ಕ್ಷೇತ್ರಗಳಲ್ಲಿ ಗೆಲುವಿಗೆ …

Read More »

ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್

ಹಾವೇರಿ: ‘ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.   ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ …

Read More »

ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ಸಂತ್ರಸ್ತ ಮಹಿಳೆಯರಿಂದ ಅಹೋರಾತ್ರಿ ಧರಣಿ

ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾಗಿದ್ದ ಮಹಿಳೆಯರು ‘ವಿಶೇಷ ಆರ್ಥಿಕ ಪ್ಯಾಕೇಜ್’ ಘೋಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಅಹೋರಾತ್ರಿ ಧರಣಿ ನಡೆಸಿದರು. ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ.ಪಿ. ಶಾಂತ ಅವರು 1522 ಬಡ ಮಹಿಳೆಯರ ಗರ್ಭಕೋಶವನ್ನು ಅನಧಿಕೃತವಾಗಿ ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಮಹಿಳೆಯರು ಆಗ್ರಹಿಸಿದರು. ಕಳೆದ …

Read More »

ಅಜ್ಜಿಯ ಶವ ತಿಂದ ನಾಯಿಗಳು: ಅನಾಥ ವೃದ್ಧರನ್ನು ವೃದ್ದಾಶ್ರಮಕ್ಕೆ ಸೇರಿಸಿ -ಡಿ.ಸಿ

ಕಲಬುರಗಿ: ವೃದ್ದೆಯ ದೇಹವನ್ನು ಶನಿವಾರ ರಾತ್ರಿ ಬೀದಿ ನಾಯಿಗಳು ಎಳೆದಾಡಿ ತಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ‌ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ‌ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಸುಮಾರು 68 ವರ್ಷದ …

Read More »

ಬಿಜೆಪಿಯಲ್ಲಿ ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲರು: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು, ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.   ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 …

Read More »

ಕಾಂಗ್ರೆಸ್‌ನಿಂದ ‘ಪೇಸಿಎಂ’ ಬಳಿಕ ‘ಸೇಸಿಎಂ’ ಅಭಿಯಾನ ಆರಂಭ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ‘ಪೇಸಿಎಂ’ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್, ಪ್ರಶ್ನೆಗಳನ್ನು ಮುಂದಿಟ್ಟು ‘ಸೇಸಿಎಂ’ ಅಭಿಯಾನ ಶುರು ಮಾಡಿದೆ. ಅಲ್ಲದೆ, ಈ ಪ್ರಶ್ನೆಗಳಿಗೆ ಉತ್ತರಿಸಲು ಕೂಡಾ ‘ಪೇಸಿಎಂ’ ಬೇಕೆ ಎಂದೂ ಪ್ರಶ್ನಿಸಿದೆ.   ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ?’ ಎಂಬ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಈವರೆಗೂ ಒಂದು ಪ್ರಶ್ನೆಗೂ …

Read More »

ಮುರುಘಾ ಮಠದಲ್ಲಿದೆ ಶಾಮನೂರು, ಯಡಿಯೂರಪ್ಪನವರ ದುಡ್ಡು’ : ಮಾಜಿ ಸಚಿವೆಯ ಸ್ಪೋಟಕ ಆಡಿಯೋ ವೈರಲ್

ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ ನಂತರ ದಾವಣಗೆರೆಯ ವಿರಕ್ತ ಮಠದ ಶ್ರೀ ಬಸವಪ್ರಭು ಅವರನ್ನು ಮುರುಘಾ ಮಠದ ಉಸ್ತುವಾರಿ ಪೀಠಾಧಿಪತಿಯಾಗಿ ನೇಮಿಸಲಾಗಿದೆ.   ಇದರ ನಡುವೆ ಮಾಜಿ ಸಚಿವೆ ರಾಣಿ ಸತೀಶ ಆಡಿಯೋ ಸಂಭಾಷಣೆಯೊಂದು ವೈರಲ್ ಆಗಿದೆ. ಮಠದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಶಾಮನೂರು ಶಿವಶಂಕರಪ್ಪನವರ ಹಣವಿದೆ ಎನ್ನುವ ವಿಚಾರ ಈ ಆಡಿಯೋದಲ್ಲಿದೆ. …

Read More »

ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ

ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ. ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ …

Read More »

ಮೀಸಲಾತಿ ಹೋರಾಟಕ್ಕೆ ಸಜ್ಜಾಗಿ: ನಿರ್ಮಲಾನಂದನಾಥ ಶ್ರೀ

ಕೋಲಾರ: ಮೀಸಲಾತಿ ಹೋರಾ ಟಕ್ಕೆ ಸ್ವಾಮೀಜಿಗಳು ಕರೆ ನೀಡಿದಾಗ ಬರಲು ಒಕ್ಕಲಿಗರು ಸಿದ್ಧರಿರಬೇಕು ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಕರೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ 1993 ರಲ್ಲಿ ದೊಡ್ಡ ಚಳವಳಿ ನಡೆದಿತ್ತು. ಅಂಥ ಮತ್ತೊಂದು ಹೋರಾಟದ ಅಗತ್ಯ ಇರುವ ಬಗ್ಗೆ ಸಮುದಾಯದ ಮುಖಂಡರು ಮಾತನಾ ಡುತ್ತಿದ್ದಾರೆ. ಜತೆಗೆ ಬೆಂಗಳೂರು ಸುತ್ತಮುತ್ತಲಿನ ಭಾಗದಲ್ಲಿ ಒಕ್ಕಲಿಗರ ಭೂಮಿ ಕೈ ತಪ್ಪುತ್ತಿದೆ. ಮುಂದೆ ಹೋರಾಟ ಅನಿವಾರ್ಯ …

Read More »