Breaking News

ರಾಜ್ಯ

ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ , ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ ವ್ಯಕ್ತವಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ವಾಲ್ಮೀಕಿ ಸಮುದಾಯದ ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ. ನಮ್ಮ ಸಮುದಾಯಕ್ಕೆ ಗ್ರಾಪಂ ಸಿಬ್ಬಂದಿಗಳು ಅವಮಾನ ಮಾಡಿದ್ದಾರೆಂದು ಹಾಗೂ ಅಧಿಕಾರಿಗಳು …

Read More »

ವಾಲ್ಮೀಕಿ ಜಯಂತಿ ವಿಜಯೋತ್ಸವ ಮಾದರಿಯಲ್ಲಿ ಆಚರಣೆ..!!

ಬೆಳಗಾವಿಯ ನೆಹರು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಐತಿಹಾಸಿ ನಿರ್ಧಾರ ಕೈಗೊಂಡಿದಕ್ಕೆ ಹರ್ಷ ವ್ಯಕ್ತಪಡಿಸಲಾಯಿತು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬೆಳಗಾವಿಯ ನೆಹರು ನಗರದ ನಿವಾಸಿಗಳು ವಿಜಯೋತ್ಸವ ರೀತಿಯಲ್ಲಿ ಆಚರಿಸಿದರು.ಶ್ರೀ ಮಹರ್ಷಿ ವಾಲ್ಮೀಕಿ ಯುವಕ ಮಂಡಳ ವತಿಯಿಂದ ಆಯೋಜಿಸಿದ್ದ ಜಯಂತೋತ್ಸವ ಕಾರ್ಯಕ್ರಮದಲ್ಲಿ ನಗರದ ನೂರಾರು ಯುವಕರು ಪಾಲ್ಗೊಂಡು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ …

Read More »

,ಕಬ್ಬು ತುಂಬಿದ ಟ್ರ‍್ಯಾಕ್ಟರಗಳ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ಎಸಿ ಸಂತೋಷ ಕಾಮಗೌಡರ

ಸದ್ಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದೆ.ಇದರಿಂದಾಗಿ ಟ್ರ‍್ಯಾಕ್ಟರಗಳು ಲೋಡಾಗಿ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವದರಿಂದ ಇದು ಜನರ ಪ್ರಾಣಕ್ಕೆ ಕುತ್ತು ತರಬಹುದು .ಇದನ್ನು ತಪ್ಪಿಸಲು‌‌ ಚಿಕ್ಕೋಡಿ ಎಸಿ ಸಂತೋಷ ಕಾಮಗೌಡರ ಹೊಸ ಪ್ಲ್ಯಾನಯೊಂದನ್ನು ಹಾಕಿದ್ದಾರೆ…ಅದೇನೂ ಅಂತೀರಾ ಹಾಗಾದರೆ ಈ ವರದಿಯನ್ನು ನೋಡಿ… ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈಗಾಗಲೇ ಕೆಲ ದಿನಗಳ ಹಿಂದೆ ಕೆಲ‌ ಸಕ್ಕರೆ ಕರ‍್ಖಾನೆಗಳು ಪ್ರಾರಂಭವಾಗಿವೆ. ಸಕ್ಕರೆ ಕರ‍್ಖಾನೆಗಳು ಮರುಪ್ರಾರಂಭ ಅಗುತ್ತಿದ್ದಂತೆ ಎಲ್ಲ ಕಡೆಗಳಲ್ಲೂ ಸಹ …

Read More »

ರಾಜ್ಯ ಸರ್ಕಾರದಿಂದ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು : ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ

ಬೆಂಗಳೂರು: ಈವರೆಗೆ ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದ್ರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government ) ಬ್ರೇಕ್ ಹಾಕಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ …

Read More »

ತೆಲುಗು ನಟನ ಆಫೀಸ್ ನಲ್ಲಿ ಅಪ್ಪು ಪುತ್ಥಳಿ

ಕನ್ನಡ ಚಿತ್ರರಂಗ ಕಂಡ ಅಸಾಧಾರಣ ಪ್ರತಿಭೆ, ಕರುನಾಡಿನ ನಮ್ಮೆಲ್ಲರ ಪ್ರೀತಿಯ ನಟ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷ ಸಮೀಪವಾಗುತ್ತಿದೆ. ದಿನಗಳು ಉರುಳಿದರೂ ಅಪ್ಪು ನೆನಪು ಮಾತ್ರ ಮರೆಯಾಗುತ್ತಿಲ್ಲ. ಕೇವಲ ಕರುನಾಡು ಮಾತ್ರವಲ್ಲ, ದೇಶದ ಮೂಲೆ ಮೂಲೆಯಲ್ಲಿರುವ ಜನರು ಅಪ್ಪು ನೆನೆದು ಇಂದಿಗೂ ಕಣ್ಣೀರು ಹಾಕುತ್ತಿದ್ದಾರೆ. ಅವರ ಸಾಧನೆಗಳ ಮೂಲಕ, ಸಾಮಾಜಿಕ ಕಾರ್ಯಗಳನ್ನು ಮುಂದುವರೆಸುವ ಮೂಲಕ ಅಪ್ಪು ಅಭಿಮಾನಿಗಳು ಮತ್ತೆ ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಇದೀಗ ತೆಲುಗಿನ …

Read More »

ಧಾರವಾಡ ಪ್ರವೇಶಕ್ಕೆ ಅನುಮತಿ ಸಿಗದಿದ್ದರೆ ಹೊರಗಿದ್ದೇ ಚುನಾವಣೆ ಕಣಕ್ಕಿಳಿಯುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ..

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ‌. ಧಾರವಾಡ ಪ್ರವೇಶಕ್ಕೆ ‌ಅನುಮತಿ ಸಿಗದಿದ್ದರೂ ಹೊರಗಿದ್ದೇ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವುದಿಲ್ಲ ಎಂದು ಮಾಜಿ ಸಚಿವ ವಿನಯ್​ ಕುಲಕರ್ಣಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಬರುವಷ್ಟರಲ್ಲೇ, ನನಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವ ವಿಶ್ವಾಸವಿದೆ‌. ಒಂದು ವೇಳೆ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಹೊರಗಿದ್ದೆ ಚುನಾವಣೆ ಕಣಕ್ಕಿಳಿಯುವೆ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವುದಿಲ್ಲ ಎಂದರು. ಪಂಚಮಸಾಲಿ ಮೀಸಲು …

Read More »

ದಾರ್ಶನಿಕ ಮಹರ್ಷಿ ವಾಲ್ಮೀಕಿ: ಇಂದು ಜಯಂತಿ

ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥವಾಗಿದೆ. ಮಹರ್ಷಿ ವಾಲ್ಮೀಕಿ ಈ ಮಹಾಕಾವ್ಯದ ರಚನೆಕಾರರು. ಬೇಡ ಜನಾಂಗಕ್ಕೆ ಸೇರಿದ ಈ ಕೃತಿಕಾರ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇಂದು ಅವರ ಜಯಂತಿಯನ್ನು ಎಲ್ಲೆಡೆ ಗೌರವಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.   | ಪ್ರೇಮಾ ಕಾಟನಾಯಕ ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯ ಕೃತಿಗಳಲ್ಲೊಂದಾದ ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥಗಳಲ್ಲೊಂದಾಗಿದೆ. ಈ ಮಹಾಕಾವ್ಯವು ಶ್ರೀ ಮಹರ್ಷಿ ವಾಲ್ಮೀಕಿ ಅವರಿಂದ ರಚಿತವಾಗಿದೆ. ಈ ಕಾವ್ಯವು …

Read More »

`ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ

ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, …

Read More »

4ಜನ ದರೋಡೆಕೋರರ ಹೆಡೆಮುರಿಕಟ್ಟಿದ ನಿಪ್ಪಾಣಿ ಪೊಲೀಸರು

ಭೀವಶಿ ಗ್ರಾಮದ ವ್ಯಾಪ್ತಿಯಲ್ಲಿ ಬಂಗಾರದ ವ್ಯಾಪಾರಿಯೊಬ್ಬ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದರೋಡೆಕೋರರು ಆತನನ್ನು ತಡೆದು ನಗ ನಾಣ್ಯ ದೋಚಿದ್ದ ಕಿರಾತಕರನ್ನು ಬಂಧಿಸುವಲ್ಲಿ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನಿಪ್ಪಾಣಿ ತಾಲೂಕಿನ ಮಾಂಗೂರ್ ನಿವಾಸಿ ದೊಂಡಿರಾಮ ವಿಷ್ಣು ಕುಸಾಳೆ ದಿನಾಂಕ 08/04/02022ರಂದು ಸಾಯಂಕಾಲ ಚಿನ್ನದ ವ್ಯಾಪಾರವನ್ನು ಮುಗಿಸಿಕೊಂಡು ತಮ್ಮ ಅಂಗಡಿಯಲ್ಲಿದ್ದ 5 ಲಕ್ಷ 40 ಸಾವಿರ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣ, ಮತ್ತು 2.5 …

Read More »

‘ಜನಜಾಗೃತಿ ಕಾರ್ಯಕ್ಕೆ ಜನರು ಸಹಕರಿಸಬೇಕು’

ಹುಕ್ಕೇರಿ: ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ತಾನು ಸಾಯುವುದರ ಜತೆ ತನ್ನ ಕುಟುಂಬವನ್ನೆ ನಾಶ ಮಾಡುವನು. ಜನರು ದುಶ್ಚಟದಿಂದ ದೂರ ಉಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದ ಜನ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು.   ಅವರು ಪಟ್ಟಣದ ಡಾ.ಜಗಜೀವನರಾಮ ಸಭಾ ಭವನದಲ್ಲಿ ಆಯೋಜಿಸಿದ್ದ ‘ಗಾಂಧಿಸ್ಮ್ರತಿ ಅಂಗವಾಗಿ ‘ದುಶ್ಚಟಗಳ ವಿರುದ್ಧ ಜನಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ …

Read More »